ಈ ವರ್ಷ ನಡೆದೀತೇ ಟಿ20 ವಿಶ್ವಕಪ್‌ ಕ್ರಿಕೆಟ್‌?

ಇಂದಿನ ಐಸಿಸಿ ಸಭೆಯಲ್ಲಿ ನಿರ್ಧಾರ ; ಐಪಿಎಲ್‌ಗಾಗಿ ವಿಶ್ವಕಪ್‌ ಮುಂದೂಡಲ್ಪಡುವ ನಿರೀಕ್ಷೆಯಲ್ಲಿ ಬಿಸಿಸಿಐ!

Team Udayavani, Jul 20, 2020, 6:46 AM IST

ಈ ವರ್ಷ ನಡೆದೀತೇ ಟಿ20 ವಿಶ್ವಕಪ್‌ ಕ್ರಿಕೆಟ್‌?

ದುಬಾೖ: ಕಳೆದೆರಡು ತಿಂಗಳಿಂದ ತೂಗುಯ್ಯಾಲೆಯಲ್ಲಿದ್ದ ಬಹು ನಿರೀಕ್ಷೆಯ ಟಿ20 ವಿಶ್ವಕಪ್‌ ಪಂದ್ಯಾವಳಿಯ ಭವಿಷ್ಯ ಸೋಮವಾರದ ಐಸಿಸಿ ಸಭೆಯಲ್ಲಿ ಇತ್ಯರ್ಥವಾಗುವ ಸಾಧ್ಯತೆ ನಿಚ್ಚಳವಾಗಿದೆ.

ಇದು ವರ್ಷಾಂತ್ಯದಲ್ಲಿ ಆಸ್ಟ್ರೇಲಿಯ ಆತಿಥ್ಯದಲ್ಲಿ ನಡೆದೀತೇ ಅಥವಾ ಮುಂದುವರಿದೀತೇ, ಅಕಸ್ಮಾತ್‌ ಮುಂದೂಡಲ್ಪಟ್ಟರೆ ಈ ಅವಧಿಯಲ್ಲಿ ಐಪಿಎಲ್‌ ಪಂದ್ಯಾವಳಿಗೆ ಹಾದಿ ಸುಗಮಗೊಂಡೀತೇ ಎಂಬ ಕುತೂಹಲಕ್ಕೆಲ್ಲ ಪೂರ್ಣ ವಿರಾಮ ಬೀಳುವ ನಿರೀಕ್ಷೆ ಇರಿಸಿಕೊಳ್ಳಲಾಗಿದೆ.

ಮೂಲ ವೇಳಾಪಟ್ಟಿಯಂತೆ ಟಿ20 ವಿಶ್ವಕಪ್‌ ಪಂದ್ಯಾವಳಿ ಅ. 18ರಿಂದ ನ. 15ರ ತನಕ ಆಸ್ಟ್ರೇಲಿಯದಲ್ಲಿ ನಡೆಯಬೇಕಿದೆ. ಆದರೆ ಕೋವಿಡ್ 19 ಭೀತಿಯಿಂದಾಗಿ ಕೂಟದ ಭವಿಷ್ಯ ಅತಂತ್ರಗೊಂಡಿದೆ.

ವಿಕ್ಟೋರಿಯಾ ಪ್ರಾಂತ್ಯದಲ್ಲಿ ಕೋವಿಡ್ 19 ದ್ವಿತೀಯ ಹಂತದಲ್ಲಿ ವ್ಯಾಪಿಸತೊಡಗಿರುವುದು ಆತಂಕಕ್ಕೆ ಕಾರಣವಾಗಿದೆ. ಉಳಿದೆಡೆ ಪರಿಸ್ಥಿತಿ ನಿಯಂತ್ರಣದಲ್ಲಿದೆ.

ಮಹತ್ವದ ನಿರ್ಧಾರ
ಐಸಿಸಿ ಮತ್ತು ಕ್ರಿಕೆಟ್‌ ಆಸ್ಟ್ರೇಲಿಯ ಸೇರಿಕೊಂಡು ಒಂದು ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಬೇಕಿದೆ. ಒಂದು ವೇಳೆ ಈ ಪಂದ್ಯಾವಳಿ ಮುಂದೂಡಲ್ಪಟ್ಟರೆ 2022ರಲ್ಲಿ ಮತ್ತೆ ಆಸ್ಟ್ರೇಲಿಯ ಆತಿಥ್ಯದಲ್ಲೇ ನಡೆಯುವ ಸಾಧ್ಯತೆ ಇದೆ. 2021ರಲ್ಲೂ ಟಿ20 ವಿಶ್ವಕಪ್‌ ನಡೆಯಲಿದ್ದು, ಇದರ ಆತಿಥ್ಯ ಭಾರತದ್ದಾಗಿದೆ. ಇದರ ಹಕ್ಕನ್ನು ಭಾರತ ಬಿಟ್ಟುಕೊಡುವ ಸಾಧ್ಯತೆ ಇಲ್ಲ.

ಯಾವುದೇ ನಿರ್ಧಾರಕ್ಕೆ ಬರುವ ಮೊದಲು ಐಸಿಸಿ ಎಲ್ಲ ಸಾಧ್ಯಾಸಾಧ್ಯತೆಗಳನ್ನು ಅವಲೋಕಿಸಲಿದೆ. ಈ ಸಂದರ್ಭದಲ್ಲಿ ಆಸ್ಟ್ರೇಲಿಯ ಸರಕಾರ ಯಾವ ನಿರ್ಧಾರ ತೆಗೆದುಕೊಳ್ಳಲಿದೆ ಎಂಬುದು ಬಹಳ ಮುಖ್ಯ. ಅದು ಪಂದ್ಯಾವಳಿಗೆ ಹಸಿರು ನಿಶಾನೆ ನೀಡಿದರೆ ಐಸಿಸಿ ಇದಕ್ಕೆ ಸಮ್ಮತಿಸಲೇಬೇಕಾಗುತ್ತದೆ, ಕ್ರಿಕೆಟ್‌ ಆಸ್ಟ್ರೇಲಿಯ ಮುಂದಡಿ ಇಡಬೇಕಾಗುತ್ತದೆ. ಆಗ ಕ್ರಿಕೆಟಿಗರ ಪ್ರಯಾಣ, ವಸತಿ, ಸುರಕ್ಷೆಯ ಜವಾಬ್ದಾರಿಯನ್ನೆಲ್ಲ ಆಸ್ಟ್ರೇಲಿಯ ಸರಕಾರ ಮತ್ತು ಅಲ್ಲಿನ ಕ್ರಿಕೆಟ್‌ ಮಂಡಳಿ ನೋಡಿಕೊಳ್ಳಬೇಕಾಗುತ್ತದೆ.

ಕೋವಿಡ್ 19 ಕಾಲದಲ್ಲೂ ಅಂತಾರಾಷ್ಟ್ರೀಯ ಕ್ರಿಕೆಟ್‌ ಸರಣಿ ನಡೆಸಲು ಸಾಧ್ಯ ಎಂಬುದನ್ನು ಈಗಾಗಲೇ ಇಂಗ್ಲೆಂಡ್‌ ತೋರಿಸಿಕೊಟ್ಟಿದೆ. ಇದು ಆಸ್ಟ್ರೇಲಿಯಕ್ಕೆ ಸ್ಫೂರ್ತಿ ಆಗಲೂಬಹುದು. ಅಲ್ಲದೇ ಆಸೀಸ್‌ ತಂಡ ಕೂಡ ಸೀಮಿತ ಓವರ್‌ಗಳ ಸರಣಿಗಾಗಿ ಸೆಪ್ಟಂಬರ್‌ನಲ್ಲಿ ಇಂಗ್ಲೆಂಡ್‌ ಪ್ರವಾಸ ಕೈಗೊಳ್ಳಲಿದೆ.

ಭಾರತಕ್ಕೆ ಐಪಿಎಲ್‌ ಕನಸು
ಇತ್ತ ಭಾರತಕ್ಕೆ ಐಪಿಎಲ್‌ನದೇ ಕನವರಿಕೆ. ಟಿ20 ವಿಶ್ವಕಪ್‌ ಮುಂದೂಡಲ್ಪಟ್ಟರಷ್ಟೇ ಈ ಶ್ರೀಮಂತ ಲೀಗ್‌ ನಡೆಸಲು ಸಾಧ್ಯವಾಗುತ್ತದೆ ಎಂಬುದು ಸದ್ಯಸ ಸ್ಥಿತಿ. ಆಗ ಯುಎಇಯಲ್ಲಿ ಇದನ್ನು ಸಂಘಟಿಸುವುದು ಬಿಸಿಸಿಐ ಯೋಜನೆಯಾಗಿದೆ. ಇದರ ತಾತ್ಕಾಲಿಕ ವೇಳಾಪಟ್ಟಿ ಕೂಡ ಹರಿದಾಡತೊಡಗಿದೆ (ಸೆ. 26ರಿಂದ ನ. 7)

ಐಸಿಸಿಗೆ ಬಾಸ್‌ ಯಾರು?
ಅಂತಾರಾಷ್ಟ್ರೀಯ ಕ್ರಿಕೆಟ್‌ ಕೌನ್ಸಿಲ್‌ನ ನೂತನ ಅಧ್ಯಕ್ಷರ್ಯಾರು, ಶಶಾಂಕ್‌ ಮನೋಹರ್‌ ಅವರ ಉತ್ತರಾಧಿಕಾರಿಯಾಗಿ ಯಾರು ಆಯ್ಕೆಯಾಗಬಹುದು ಎಂಬುದು ಕೂಡ ಸೋಮವಾರದ ಸಭೆಯ ಕುತೂಹಲವನ್ನು ಹೆಚ್ಚಿಸುವಂತೆ ಮಾಡಿದೆ.

ಇಸಿಬಿಯ ಕಾಲಿನ್‌ ಗ್ರೇವ್ಸ್‌, ಭಾರತದ ಸೌರವ್‌ ಗಂಗೂಲಿ, ನ್ಯೂಜಿಲ್ಯಾಂಡಿನ ಗ್ರೆಗರ್‌ ಬಾರ್ಕ್ಲೆ, ಹಾಂಕಾಂಗ್‌ನ ಇಮ್ರಾನ್‌ ಖ್ವಾಜಾ ಕೂಡ ರೇಸ್‌ನಲ್ಲಿದ್ದಾರೆ. ಆದರೆ ಸತತ 2ನೇ ಅವಧಿಗೆ ಇದು ಭಾರತೀಯರ ಪಾಲಾಗುವುದು ಅನುಮಾನ. ಅಲ್ಲದೇ ಸೌರವ್‌ ಗಂಗೂಲಿ ಕೂಡ ತನಗೆ ಐಸಿಸಿ ಹುದ್ದೆ ಬಗ್ಗೆ ಗಡಿಬಿಡಿ ಇಲ್ಲ ಎಂದಿದ್ದಾರೆ.

ಟಾಪ್ ನ್ಯೂಸ್

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.