ಹಾರ್ದಿಕ್-ರಾಹುಲ್ಗೆ ಬಿಸಿಸಿಐ ನೋಟಿಸ್
Team Udayavani, Apr 2, 2019, 6:00 AM IST
ನವದೆಹಲಿ: ಕಾಫಿ ವಿತ್ ಕರಣ್ ಟೀವಿ ಶೋನಲ್ಲಿ ಭಾಗವಹಿಸಿ, ಭಾರೀ ವಿವಾದ ಮಾಡಿಕೊಂಡು ಕೆಲ ಪಂದ್ಯಗಳ ಮಟ್ಟಿಗೆ ನಿಷೇಧಕ್ಕೊಳಗಾಗಿದ್ದ ಹಾರ್ದಿಕ್ ಪಾಂಡ್ಯ, ಕೆ.ಎಲ್.ರಾಹುಲ್ಗೆ ಬಿಸಿಸಿಐ ವಿಶೇಷ ತನಿಖಾಧಿಕಾರಿ ಡಿ.ಕೆ.ಜೈನ್ ನೋಟಿಸ್ ಜಾರಿ ಮಾಡಿದ್ದಾರೆ. ಇಬ್ಬರೂ ಏ.10ಕ್ಕೆ ಮುನ್ನ ಜೈನ್ ಮುಂದೆ ಹಾಜರಾಗುವ ನಿರೀಕ್ಷೆಯಿದೆ. ಅದೇ ದಿನ ಮುಂಬೈನಲ್ಲಿ ರಾಹುಲ್ ಇರುವ ಪಂಜಾಬ್ ಹಾಗೂ ಹಾರ್ದಿಕ್ ಇರುವ ಮುಂಬೈ ನಡುವೆ ಐಪಿಎಲ್ ಪಂದ್ಯವಿದೆ.
ಐಪಿಎಲ್ನ ಬಿಗಿಯಾದ ವೇಳಾಪಟ್ಟಿ ನಡುವೆ ಇಬ್ಬರೂ, ಯಾವಾಗ ವಿಚಾರಣೆಗೆ ಹಾಜರಾಗಬೇಕೆನ್ನುವುದು ಸದ್ಯದ ಬಹುಮುಖ್ಯ ಪ್ರಶ್ನೆ. ಈ ಇಬ್ಬರು ತಮ್ಮ ಪ್ರತಿನಿಧಿಗಳನ್ನು ಕಳುಹಿಸದೇ, ವೈಯಕ್ತಿಕವಾಗಿಯೇ ಹಾಜರಾಗಬೇಕೆಂದು ಸೂಚಿಸಲಾಗಿದೆ. ಆದ್ದರಿಂದ ಸಮಯ ಹೊಂದಿಸುವುದು ಕಷ್ಟದ ಕೆಲಸವಾಗಿದೆ.
ಈ ಬಗ್ಗೆ ಮಾತನಾಡಿದ ಡಿ.ಕೆ.ಜೈನ್, ಪ್ರಜಾಪ್ರಭುತ್ವದ ನಿಯಮಗಳಿಗೆ ಅನುಗುಣವಾಗಿ ಇಬ್ಬರಿಗೂ ತಮ್ಮ ಅಭಿಪ್ರಾಯಗಳನ್ನು ತಿಳಿಸಲು ಸೂಚಿಸಲಾಗಿದೆ. ಅದಾದ ನಂತರ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಜೈನ್ ತಿಳಿಸಿದ್ದಾರೆ. ಇದೇ ವೇಳೆ ಬಂಗಾಳ ಕ್ರಿಕೆಟ್ ಸಂಸ್ಥೆ ಅಧ್ಯಕ್ಷನಾಗಿದ್ದರೂ, ಡೆಲ್ಲಿ ಕ್ಯಾಪಿಟಲ್ಸ್ ಸಲಹೆಗಾರರಾಗಿರುವ ಸೌರವ್ ಗಂಗೂಲಿಯ ಸ್ವಹಿತಾಸಕ್ತಿ ವಿವಾದದ ಬಗ್ಗೆಯೂ ಜೈನ್ ವಿಚಾರಣೆ ನಡೆಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು