ಬಿಸಿಸಿಐ ಕಾರ್ಯದರ್ಶಿ ಅಮಿತಾಭ್‌ ಚೌಧರಿಗೆ ಮುಖಭಂಗ 


Team Udayavani, Dec 7, 2018, 6:55 AM IST

bcci-secretary-amitabh-choudhury.jpg

ನವದೆಹಲಿ: ಬಿಸಿಸಿಐ ಕಾರ್ಯದರ್ಶಿ ಅಮಿತಾಭ್‌ ಚೌಧರಿ ಮತ್ತೂಂದು ಮುಖಭಂಗ ಅನುಭವಿಸಿದ್ದಾರೆ. ಭಾರತ ಏಕದಿನ ತಂಡವನ್ನು ಆಯ್ಕೆ ಮಾಡಲು ಆಸ್ಟ್ರೇಲಿಯಕ್ಕೆ ತೆರಳಲು ಬಯಸಿದ್ದ ಚೌಧರಿಗೆ, ಬಿಸಿಸಿಐ ಆಡಳಿತಾಧಿಕಾರಿ ವಿನೋದ್‌ ರಾಯ್‌ ಅನುಮತಿ ನಿರಾಕರಿಸಿದ್ದಾರೆ. 

ಈ ವರ್ಷದಲ್ಲಿ ಹೀಗೆ ಮೂರನೇ ಬಾರಿ ಚೌಧರಿಗೆ ಅನುಮತಿ ನಿರಾಕರಿಸಲಾಗಿದೆ. ಬಿಸಿಸಿಐ ಆಯ್ಕೆ ಸಮಿತಿ ಅಧ್ಯಕ್ಷ ಎಂ.ಎಸ್‌.ಕೆ.ಪ್ರಸಾದ್‌ ಹೊರತುಪಡಿಸಿ, ಉಳಿದ ನಾಲ್ವರು ಆಯ್ಕೆಗಾರರು ಭಾರತದಿಂದಲೇ ಆಯ್ಕೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಆದ್ದರಿಂದ ಚೌಧರಿ ಅಲ್ಲಿಗೆ ತೆರಳುವ ಅಗತ್ಯವಿಲ್ಲ ಎನ್ನುವುದು ವಿನೋದ್‌ ರಾಯ್‌ ಅಭಿಮತ.

ಡಿ.24ಕ್ಕೆ ಆಸ್ಟ್ರೇಲಿಯ ವಿರುದ್ಧದ ಭಾರತ ಏಕದಿನ ಕ್ರಿಕೆಟ್‌ ತಂಡವನ್ನು ಆಯ್ಕೆ ಮಾಡುವ ಸಾಧ್ಯತೆಯಿದೆ. ಆದ್ದರಿಂದ ತಾನೇ ಖುದ್ದಾಗಿ ಆಸ್ಟ್ರೇಲಿಯಕ್ಕೆ ತೆರಳಿ ಆಯ್ಕೆ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಚೌಧರಿ ಬಯಸಿದ್ದರು. ಆದರೆ ಆಯ್ಕೆ ಸಮಿತಿಯ ನಾಲ್ವರು ಸದಸ್ಯರೇ ಭಾರತದಲ್ಲಿ ಕುಳಿತೇ ತಂಡವನ್ನು ಆಯ್ಕೆ ಮಾಡಲು ಸಜ್ಜಾಗಿದ್ದಾರೆ, ಹೀಗಿರುವಾಗ ಚೌಧರಿ ಯಾವ ಕಾರಣಕ್ಕೆ ಆಸ್ಟ್ರೇಲಿಯಕ್ಕೆ ಹೋಗಬೇಕು ಎನ್ನುವುದು ಆಡಳಿತಾಧಿಕಾರಿಗಳ ಪ್ರಶ್ನೆ.

ಆಡಳಿತಾಧಿಕಾರಿಗಳ ಈ ಕಠಿಣ ನಿಲುವು ಬಿಸಿಸಿಐ ಪದಾಧಿಕಾರಿಗಳಿಗೆ ತಲೆನೋವಾಗಿದೆ. ಇದರ ಪರಿಣಾಮ ಬಿಸಿಸಿಐನಲ್ಲಿ ಸತತವಾಗಿ ಒಳಜಗಳ ನಡೆಯುತ್ತಲೇ ಇದೆ. ಸದ್ಯ ಚೌಧರಿಗೆ ಆಗಿರುವ ಈ ಅವಮಾನ ಮುಂದೆ ಯಾವ ಬೆಳವಣಿಗೆಗಳಿಗೆ ಕಾರಣವಾಗುತ್ತದೆ ಎನ್ನುವುದನ್ನು ಕಾದು ನೋಡಬೇಕು.

ಹಿಂದೇನಾಗಿತ್ತು?: ಈ ವರ್ಷ ಮಾರ್ಚ್‌ನಲ್ಲಿ ಚೌಧರಿ, ಶ್ರೀಲಂಕಾಕ್ಕೆ 3 ದಿನಗಳ ಪ್ರವಾಸ ಹೊರಟಿದ್ದರು. ಆಗ ಯಾವ ಕಾರಣಕ್ಕಾಗಿ ಅಲ್ಲಿಗೆ ಹೊರಟಿದ್ದೀರಿ ಎಂದು ಆಡಳಿತಾಧಿಕಾರಿಗಳು ಪ್ರಶ್ನಿಸಿದ್ದರು. ಇದನ್ನು ಸೂಕ್ತವಾಗಿ ವಿವರಿಸಲು ಚೌಧರಿ ವಿಫ‌ಲವಾಗಿದ್ದರಿಂದ, ಶ್ರೀಲಂಕಾ ಪ್ರವಾಸಕ್ಕೆ ಅನುಮತಿ ನಿರಾಕರಿಸಲಾಗಿತ್ತು. ಜೂನ್‌ ತಿಂಗಳಲ್ಲಿ ಇಂಗ್ಲೆಂಡ್‌ನ‌ಲ್ಲಿ ಇನ್ನೂ ಹೆಚ್ಚಿನ ದಿನಗಳ ಕಾಲ ಉಳಿದುಕೊಳ್ಳಲು ಚೌಧರಿ ಬಯಸಿದ್ದರು. ಆಗ ಭಾರತ ಕ್ರಿಕೆಟ್‌ ತಂಡ ಇಂಗ್ಲೆಂಡ್‌ ಪ್ರವಾಸದಲ್ಲಿತ್ತು. ಚೌಧರಿ ಜು.26ರವರೆಗೆ ಉಳಿದುಕೊಳ್ಳಲು ಚಿಂತಿಸಿದ್ದರೂ, ಆಡಳಿತಾಧಿಕಾರಿಗಳು ಜೂ.8ರವರೆಗೆ ಮಾತ್ರ ಇರಲು ಅನುಮತಿ ನೀಡಿದ್ದರು.

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.