ಟಿ20 ತಂಡದ ಭವಿಷ್ಯವೇನು? ರೋಹಿತ್, ಕೊಹ್ಲಿ, ದ್ರಾವಿಡ್ ಜತೆ ಬಿಸಿಸಿಐ ಚರ್ಚೆ
Team Udayavani, Nov 13, 2022, 4:35 PM IST
ಮುಂಬೈ: ಟಿ20 ವಿಶ್ವಕಪ್ನಲ್ಲಿ ಭಾರತ ಸೆಮಿಫೈನಲ್ನಲ್ಲೇ ಹೊರಬಿದ್ದಿದೆ. ಅಲ್ಲಿಗೆ ರೋಹಿತ್ ಶರ್ಮ, ವಿರಾಟ್ ಕೊಹ್ಲಿಯಂತಹ ಹಿರಿಯ ಆಟಗಾರರ ಭವಿಷ್ಯದ ಬಗ್ಗೆ ಪ್ರಶ್ನೆಗಳೆದ್ದಿವೆ. ಹಾರ್ದಿಕ್ ಪಾಂಡ್ಯ ನಾಯಕರಾಗುತ್ತಾರೆ ಎಂಬ ವಿಚಾರಗಳು ಇವೆ. ಇಷ್ಟರ ಮಧ್ಯೆ ತಂಡದ ನಾಯಕ ರೋಹಿತ್ ಶರ್ಮ, ಮಾಜಿ ನಾಯಕ ವಿರಾಟ್ ಕೊಹ್ಲಿ, ತರಬೇತುದಾರ ರಾಹುಲ್ ದ್ರಾವಿಡ್ ಸಲಹೆಗಳನ್ನು ಕೇಳಿ ಮುಂದಿನ ನಿರ್ಧಾರ ಮಾಡುವುದಾಗಿ ಬಿಸಿಸಿಐ ಮೂಲಗಳು ಹೇಳಿವೆ.
ನಾವು ಯಾವುದೇ ತೀರ್ಮಾನವನ್ನು ಗಡಿಬಿಡಿಯಲ್ಲಿ ತೆಗೆದುಕೊಳ್ಳಲು ಬಯಸುವುದಿಲ್ಲ. ತಂಡದ ಆಡಳಿತ ಹಾಗೂ ಆಟಗಾರರು ತಮ್ಮ ಅಭಿಪ್ರಾಯವನ್ನು ಮೊದಲು ಹಂಚಿಕೊಳ್ಳಲಿ. ಅನಂತರ ಬಿಸಿಸಿಐ ಮುಂದಿನ ನಿರ್ಧಾರ ಮಾಡಲಿದೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ಹೇಳಿದ್ದಾರೆಂದು “ದಿ ಇಂಡಿಯನ್ ಎಕ್ಸ್ಪ್ರೆಸ್’ ವರದಿ ಮಾಡಿದೆ.
ಟಿ20 ವಿಶ್ವಕಪ್ ಸೆಮಿಫೈನಲ್ ಸೋಲಿನ ನಂತರ ಪ್ರತಿಕ್ರಿಯಿಸಿದ್ದ ರಾಹುಲ್ ದ್ರಾವಿಡ್, ತಂಡದಲ್ಲಿ ಅದ್ಭುತ ಆಟಗಾರರಿದ್ದಾರೆ. ಅವರ ಭವಿಷ್ಯದ ಬಗ್ಗೆ ಈಗಲೇ ಹೇಳುವುದು ಉತ್ತಮವಲ್ಲ. ಅದಕ್ಕೆ ಇನ್ನೂ ಎರಡು ವರ್ಷ ಸಮಯವಿದೆ ಎಂದಿದ್ದಾರೆ. ಮುಂದಿನ ನ್ಯೂಜಿಲೆಂಡ್ ಪ್ರವಾಸಕ್ಕೆ ಹಾರ್ದಿಕ್ ಪಾಂಡ್ಯ ತಂಡದ ನಾಯಕರಾಗಿರಲಿದ್ದಾರೆ. ಅವರನ್ನೇ ಟಿ20ಗೆ ಮುಂದಿನ ನಾಯಕರನ್ನಾಗಿಸಲು ಚಿಂತನೆಗಳಿವೆ. ಬಹುಶಃ ರೋಹಿತ್ ಶರ್ಮ ಈ ಪಟ್ಟ ಕಳೆದುಕೊಳ್ಳಬಹುದು. ಹಾಗೆಯೇ ಕೆ.ಎಲ್.ರಾಹುಲ್ ತಂಡದಲ್ಲಿ ಸ್ಥಾನವನ್ನೇ ಕಳೆದುಕೊಳ್ಳಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್