ವಿಂಡೀಸ್‌ ಕ್ರಿಕೆಟಿಗರ ಬೆಂಬಲಕ್ಕೆ ನಿಂತಿತ್ತು ಬಿಸಿಸಿಐ!


Team Udayavani, Nov 18, 2018, 6:55 AM IST

bcci-wi.jpg

ಹೊಸದಿಲ್ಲಿ: ವೆಸ್ಟ್‌ಇಂಡೀಸ್‌ ಕ್ರಿಕೆಟ್‌ ತಂಡದ ಮಾಜಿ ನಾಯಕ ಡ್ವೇನ್‌ ಬ್ರಾವೊ 2014ರ ಭಾರತ ಪ್ರವಾಸದ ವೇಳೆ ನಡೆದ ಹಲವು ವಿವಾದಾತ್ಮಕ ಸಂಗತಿಗಳ ಹಿಂದಿನ ವಿದ್ಯಮಾನಗಳನ್ನು ಬಹಿರಂಗಪಡಿಸಿದ್ದಾರೆ. 

ವಿಂಡೀಸ್‌ ಕ್ರಿಕೆಟ್‌ ಮಂಡಳಿ ವಿರುದ್ಧದ ಆಕ್ರೋಶದಿಂದ ಆಟಗಾರರು ಭಾರತದ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಆಡದಿರಲು ನಿರ್ಧರಿಸಿದ್ದರು. ಪಂದ್ಯದ ಮುಂಜಾನೆ 3 ಗಂಟೆಗೆ ಆಗಿನ ಬಿಸಿಸಿಐ ಅಧ್ಯಕ್ಷ ಎನ್‌. ಶ್ರೀನಿವಾಸನ್‌, ಬ್ರಾವೊಗೆ ಸಂದೇಶ ಕಳುಹಿಸಿ “ದಯವಿಟ್ಟು ಮೈದಾನಕ್ಕಿಳಿಯಿರಿ’ ಎಂದಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿ ವಿಂಡೀಸ್‌ ಆಟಗಾರರು ಮೈದಾನಕ್ಕಿಳಿದಿದ್ದರು ಎಂದು ಬ್ರಾವೊ ಹೇಳಿಕೊಂಡಿದ್ದಾರೆ.

ವಿಂಡೀಸ್‌ ಮಂಡಳಿ ನೀಡಿದ ಹೊಸ ಗುತ್ತಿಗೆ ಸರಿಯಾಗಿರಲಿಲ್ಲ. ಆದ್ದರಿಂದ ಆಟಗಾರರು ಅದನ್ನು ಒಪ್ಪಿಕೊಳ್ಳಲು ತಯಾರಿರಲಿಲ್ಲ. ವಿಂಡೀಸ್‌ ಮಂಡಳಿ ವಿರುದ್ಧ ಪ್ರತಿಭಟಿಸಲು ವಿಂಡೀಸ್‌ ಆಟಗಾರರು ಭಾರತ ವಿರುದ್ಧದ ಏಕದಿನ ಪಂದ್ಯವನ್ನು ಬಹಿಷ್ಕರಿಸುವ ಮಾರ್ಗವನ್ನು ಆಯ್ದುಕೊಂಡಿದ್ದರು. ಇದರಿಂದ ಬಿಸಿಸಿಐಗೆ ಭಾರೀ ನಷ್ಟವಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಶ್ರೀನಿವಾಸನ್‌ ಇಂಥದೊಂದು ಮನವಿ ಮಾಡಿಕೊಂಡಿದ್ದರು.

ನಷ್ಟ ಭರ್ತಿಗೆ ಸಿದ್ಧವಿದ್ದ ಬಿಸಿಸಿಐ
“ವಿಂಡೀಸ್‌ ಆಟಗಾರರಿಗೆ ಆಗುವ ಸಂಪೂರ್ಣ ನಷ್ಟ ಭರ್ತಿ ಮಾಡಿಕೊಡಲು ಆಗ ಬಿಸಿಸಿಐ ಸಿದ್ಧವಿತ್ತು. ಬಿಸಿಸಿಐ ಎಲ್ಲ ರೀತಿಯಿಂದಲೂ ತಂಡದ ನೆರವಿಗೆ ನಿಂತಿತ್ತು. ಆದರೆ ನಮಗೆ ನಮ್ಮ ಮಂಡಳಿ ಸರಿಯಾದ ಗುತ್ತಿಗೆ ಜಾರಿ ಮಾಡುವುದೇ ಉದ್ದೇಶವಾಗಿತ್ತು. ಇದರ ಮಧ್ಯೆಯೇ ನಾವು 4 ಏಕದಿನ ಪಂದ್ಯಗಳನ್ನು ಆಡಿದೆವು. 4ನೇ ಪಂದ್ಯದ ಮಧ್ಯದಲ್ಲೇ ಪ್ರವಾಸದ ಉಳಿದ ಪಂದ್ಯಗಳಿಂದ ಹಿಂದೆ ಸರಿಯುವುದಾಗಿ ವಿಂಡೀಸ್‌ ಮಂಡಳಿ ಬಿಸಿಸಿಐಗೆ ತಿಳಿಸಿತ್ತು. ನಾವು ಬೇರೆ ದಾರಿಯಿಲ್ಲದೇ ದೇಶಕ್ಕೆ ಹಿಂತಿರುಗಿದೆವು. ನಮ್ಮ ಪರಿಸ್ಥಿತಿಯನ್ನು ಬಿಸಿಸಿಐ ಸಂಪೂರ್ಣ ಅರ್ಥ ಮಾಡಿಕೊಂಡಿತ್ತು’ ಎಂದು ಬ್ರಾವೊ ಹೇಳಿದ್ದಾರೆ.

ಟಾಪ್ ನ್ಯೂಸ್

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.