ಹೆಮ್ಮೆಯ ಪೈಲಟ್ ಅಭಿನಂದನ್ ಗೆ ಬಿಸಿಸಿಐ ವಿಶೇಷ ಅಭಿನಂದನೆ
Team Udayavani, Mar 2, 2019, 6:07 AM IST
ಹೊಸದೆಹಲಿ: ಶುಕ್ರವಾರ ರಾತ್ರಿ ವೇಳೆಗೆ ಪಾಕಿಸ್ಥಾನದಿಂದ ಭಾರತಕ್ಕೆ ಮರಳಿ ಬಂದ ಭಾರತದ ಹೆಮ್ಮೆಯ ಪೈಲಟ್ ಅಭಿನಂದನ್ ಅವರಿಗೆ ಭಾರತೀಯ ಕ್ರಿಕೆಟ್ ಮಂಡಳಿ ವಿಶೇಷ ಸ್ವಾಗತ ಕೋರಿದೆ. ನಿನ್ನೆ ರಾತ್ರಿ ಹೊಸ ಜೆರ್ಸಿ ಬಿಡುಗಡೆ ಮಾಡಿದ ಬಿಸಿಸಿಐ ಅದರಲ್ಲಿ ‘ವಿಂಗ್ ಕಮಾಂಡರ್ ಅಭಿನಂದನ್’ ಎಂದು ಬರೆದು ವೀರ ಪೈಲಟ್ ಗೆ ಗೌರವ ನೀಡಿದೆ.
ಮಿಗ್ 21 ಯುದ್ಧ ವಿಮಾನದ ಪೈಲಟ್ ಆಗಿರುವ ಅಭಿನಂದನ್ ಪಾಕಿಸ್ಥಾನದ ಮೇಲೆ ದಾಳಿ ನಡೆಸುವ ವೇಳೆ ವಿಮಾನ ದುರ್ಘಟನೆ ನಡೆದು ಪಾಕಿಸ್ಥಾನದಲ್ಲಿ ಬಿದ್ದಿದ್ದರು. ನಂತರದ ಬೆಳವಣಿಗೆಯಲ್ಲಿ ಶುಕ್ರವಾರ ಪಾಕಿಸ್ಥಾನ ಅಭಿನಂದನ್ ರನ್ನು ಭಾರತಕ್ಕೆ ಹಸ್ತಾಂತರ ಮಾಡಿತ್ತು.
ಈ ಬಗ್ಗೆ ಟ್ವೀಟ್ ಮಾಡಿದ ಬಿಸಿಸಿಐ,’ #WelcomeHomeAbhinandan ನೀವು ಆಕಾಶವನ್ನು ಆಳುತ್ತೀರಿ. ಈಗ ನೀವು ನೀವು ನಮ್ಮ ಹೃದಯವನ್ನು ಆಳುತ್ತಿದ್ದೀರಿ. ನಿಮ್ಮ ಧೈರ್ಯ ಮತ್ತು ಘನತೆ ಮುಂದಿನ ತಲೆಮಾರುಗಳನ್ನು ಉತ್ತೇಜಿಸುತ್ತದೆ’ ಎಂದಿದೆ. ಭಾರತೀಯ ಕ್ರಿಕೆಟ್ ತಂಡದ ಜೆರ್ಸಿಯಲ್ಲಿ ವಿಂಗ್ ಕಮಾಂಡರ್ ಅಭಿನಂದನ್ ಎಂದು ಬರೆದು ಜೆರ್ಸಿಗೆ ಒಂದನೇ ಸಂಖ್ಯೆ ನೀಡಿದೆ.
ಭಾರತೀಯ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಅಭಿನಂದನ್ ಫೋಟೋ ಹಾಕಿ, ‘ರಿಯಲ್ ಹೀರೋ, ನಿಮಗೆ ತಲೆ ಬಾಗುತ್ತೇನೆ. ಜೈ ಹಿಂದ್ ಎಂದು ಅಭಿಮಾನ ತೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?
IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್ ವಿರುದ್ಧ ಮುಖಾಮುಖಿ
RCB ; ರವಿವಾರ ಕೆಕೆಆರ್ ವಿರುದ್ಧ ಈಡನ್ನಲ್ಲಿ ಗೋ ಗ್ರೀನ್ ಗೇಮ್
MUST WATCH
ಹೊಸ ಸೇರ್ಪಡೆ
Revealed; ನೇಹಾ ಹಿರೇಮಠ ಹಂತಕ ಫಯಾಜ್ನ ಮತ್ತೊಂದು ಕರಾಳ ಮುಖ ಅನಾವರಣ
Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ
Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ
Neha ಹತ್ಯೆ ಪ್ರಕರಣ; ಎನ್ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್ಪಿ ಆಗ್ರಹ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ