ಎರಡು ಹಂತಗಳಲ್ಲಿ ರಣಜಿ ಟ್ರೋಫಿ ನಡೆಸಲು ಬಿಸಿಸಿಐ ಚಿಂತನೆ
Team Udayavani, Jan 15, 2021, 8:55 AM IST
ಹೊಸದಿಲ್ಲಿ: ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಈ ಸಲದ ದೇಶಿ ಕ್ರಿಕೆಟ್ ಋತು ವಿಳಂಬವಾಗಿ ಆರಂಭಗೊಂಡಿದೆ. ಹೀಗಿದ್ದರೂ ಪ್ರತಿಷ್ಠಿತ ರಣಜಿ ಟ್ರೋಫಿ ಪಂದ್ಯಾವಳಿಯನ್ನು ನಡೆಸಲು ಬಿಸಿಸಿಐ ಪಣತೊಟ್ಟಿದೆ. ಅದರಂತೆ ಮುಂದಿನ ತಿಂಗಳಿನಿಂದ ಎರಡು ಹಂತಗಳಲ್ಲಿ ಕೂಟವನ್ನು ನಡೆಸಲು ಚಿಂತನೆ ನಡೆಸಿದೆ.
ಜ. 17 ರಂದು ನಡೆಯುವ ಬಿಸಿಸಿಐ ಸಭೆಯಲ್ಲಿ ಈ ಬಗ್ಗೆ ಮಹತ್ವದ ನಿರ್ಧಾರ ತೆಗೆದುಕೊಳ್ಳುವ ನಿರೀಕ್ಷೆ ಇದೆ. ಪ್ರಸಕ್ತ ನಡೆಯುತ್ತಿರುವ ಸಯ್ಯದ್ ಮುಷ್ತಾಕ್ ಅಲಿ ಟಿ20 ಟ್ರೋμಯ ಬಯೋ ಬಬಲ್ ಮಾದರಿಯಂತೆ ರಣಜಿ ಟ್ರೋಫಿ ಕೂಟವನ್ನು ಆಯೋಜಿಸಲು ಬಿಸಿಸಿಐ ಯೋಜನೆ ರೂಪಿಸಿದೆ. ರಣಜಿ ಕೂಟ ನಡೆಯುವುದು ಶೇ. 90ರಷ್ಟು
ಖಚಿತ. ಎಲ್ಲ ಪಂದ್ಯಗಳು ಸಯ್ಯದ್ ಮುಷ್ತಾಕ್ ಅಲಿ ಕೂಟದಂತೆ ನಡೆಯಲಿವೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ಹೇಳಿರುವುದು ಅನುಮಾನಕ್ಕೆ ತೆರೆ ಎಳೆದಂತಾಗಿದೆ.
14ನೇ ಆವೃತ್ತಿಯ ಐಪಿಎಲ್ ಕೂಟಕ್ಕೂ ಮುನ್ನ ಫೆಬ್ರವರಿ-ಮಾರ್ಚ್ ನಲ್ಲಿ ಎರಡು ತಿಂಗಳ ಕಾಲ ರಣಜಿ ಲೀಗ್ ಪಂದ್ಯಗಳನ್ನು ಆಯೋಜಿಸಿ ಬಳಿಕ ನಾಕೌಟ್ ಪಂದ್ಯಗಳನ್ನು ನಡೆಸುವುದು ಬಿಸಿಸಿಐ ಯೋಜನೆಯಾಗಿದೆ.
ಬಿಸಿಸಿಐ ಅಜೆಂಡಾ: ಜ. 17ರ ಬಿಸಿಸಿಐ ಸಭೆಯಲ್ಲಿ ರಣಜಿ ಟ್ರೋಫಿ ಆಯೋಜನೆಯ ಜತೆಗೆ ಒಟ್ಟು 7 ಪ್ರಮುಖ ಅಜೆಂಡಾಗಳಿರಲಿವೆ. 2023-31ರ ಐಸಿಸಿ ವೇಳಾಪಟ್ಟಿ, ಮುಂದಿನ ವರ್ಷದ ಐಪಿಎಲ್ನಲ್ಲಿ ತಂಡಗಳನ್ನು 10ಕ್ಕೆ ಏರಿಸುವ ನಿಟ್ಟಿನಲ್ಲಿ ಹೆಚ್ಚಿನ ಅವಧಿ ಮೀಸಲಿಡುವುದು, ಜತೆಗೆ ಟಿ20 ವಿಶ್ವಕಪ್ ತೆರಿಗೆ ವಿನಾಯಿತಿ, ಬೆಂಗಳೂರಿನಲ್ಲಿ ನಿರ್ಮಾಣ ಹಂತದಲ್ಲಿರುವ ಹೊಸ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಕಟ್ಟಡದ ಬಗ್ಗೆಯೂ ಚರ್ಚೆ ನಡೆಯಲಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ