ಏಕದಿನ ಕ್ರಿಕೆಟ್‌ ಬದುಕಿಗೆ ನಿವೃತ್ತಿ ಘೋಷಿಸಿದ ಬೆನ್‌ ಸ್ಟೋಕ್ಸ್‌: ನಾಳೆ ಕೊನೆಯ ಪಂದ್ಯ


Team Udayavani, Jul 18, 2022, 5:51 PM IST

tdy-23

ನವದೆಹೆಲಿ: ಇಂಗ್ಲೆಂಡ್‌ ತಂಡದ ಸ್ಟಾರ್‌ ಆಲ್‌ ರೌಂಡರ್‌ ಬೆನ್‌ ಸ್ಟೋಕ್ಸ್‌ ತಮ್ಮ ಏಕದಿನ ಕ್ರಿಕೆಟ್‌ ಬದುಕಿಗೆ ನಿವೃತ್ತಿ ಘೋಷಿಸಿದ್ದಾರೆ.

ತಮ್ಮ ಟ್ವಿಟರ್‌ ಖಾತೆಯಲ್ಲಿ ಅಧಿಕೃತವಾಗಿ ನಿವೃತ್ತಿಯ ವಿಚಾರವನ್ನು ಬಹಿರಂಗ ಪಡಿಸಿರುವ ಅವರು, ನಾನು ಮಂಗಳವಾರ ಇಂಗ್ಲೆಂಡ್‌ ಪರ ಡೆರ್ಹಾಮ್‌ ನಲ್ಲಿ ನನ್ನ ಕೊನೆಯ ಏಕದಿನ ಪಂದ್ಯವನ್ನು ಆಡಲಿದ್ದೇನೆ. ಏಕದಿನ ಕ್ರಿಕೆಟ್‌ ನಿಂದ ನಿವೃತ್ತಿಯಾಗಲು ನಿರ್ಧರಿಸಿದ್ದೇನೆ. ಇದೊಂದು ಕಷ್ಟಕರ ನಿರ್ಧಾರ. ಮೂರು ಮಾದರಿಯಲ್ಲಿ ಆಡುವುದು ಕಷ್ಟಕರ, ನನ್ನ ದೇಹ ನಿರೀಕ್ಷೆಯಷ್ಟು ಬೆಂಬಲ ನೀಡುತ್ತಿಲ್ಲ. ನನ್ನ ಸಹ ಆಟಗಾರರೊಂದಿಗೆ ಆಡಿದ ಪ್ರತಿ ನಿಮಿಷವನ್ನೂ ಕೂಡ ನಾನು ಆನಂದಿಂದ ಕಳೆದ. ಈ ಪಯಣ ಅವಿಸ್ಮರಣೀಯವಾಗಿತ್ತು. ಮುಂದೆ ಟಿ-ಟ್ವಿಂಟಿ ಹಾಗೂ ಟೆಸ್ಟ್‌ ಕ್ರಿಕೆಟ್‌ ಕಡೆ ಹೆಚ್ಚಿನ ಗಮನ ಕೊಡಲಿದ್ದೇನೆ ಎಂದು ಬರೆದು ಕೊಂಡಿದ್ದಾರೆ.

2011 ರಲ್ಲಿ ಐರ್ಲೆಂಡ್‌ ವಿರುದ್ಧ ತಮ್ಮ ಏಕದಿನ ಕ್ರಿಕೆಟ್‌ ಗೆ ಪಾರ್ದಾಪಣೆ ಮಾಡಿದ ಅವರು ಇದುವರೆಗೆ 104 ಪಂದ್ಯವನ್ನು ಆಡಿದ್ದು, 2,919 ರನ್‌ ಗಳನ್ನು ಗಳಿಸಿ 3 ಶತಕದೊಂದಿಗೆ, 21 ಅರ್ಧ ಶತಕವನ್ನು ಸಿಡಿಸಿದ್ದಾರೆ. ನ್ಯೂಜಿಲ್ಯಾಂಡ್‌ ವಿರುದ್ಧದ 2019 ರ ವಿಶ್ವಕಪ್‌ ನ ಮಹತ್ತರ ಪಂದ್ಯದಲ್ಲಿ ಔಟಾಗದೆ 84 ರನ್‌ ಗಳಿಸಿದ್ದು, ಸ್ಟೋಕ್ಸ್‌ ಶ್ರೇಷ್ಠ ಸಾಧನೆಗಳಲ್ಲಿ ಒಂದು. ಆಲ್‌ ರೌಂಡರ್‌ ಆಗಿರುವ ಸ್ಟೋಕ್ಸ್‌ ಬೌಲಿಂಗ್‌ ನಲ್ಲಿ 74 ವಿಕೆಟ್‌ ಗಳನ್ನು ಪಡೆದಿದ್ದಾರೆ.

ಪಾಕಿಸ್ತಾನ ವಿರುದ್ಧದ ರಾಯಲ್‌ ಲಂಡನ್‌ ಸರಣಿಯಲ್ಲಿ ಕಪ್ತಾನನಾಗಿ 3-0 ಯಿಂದ ಸರಣಿಯನ್ನು ಗೆದ್ದು ಏಕದಿನ ತಂಡದ ನಾಯಕನಾಗಿಯೂ ಸೈ ಎನ್ನಿಸಿಕೊಂಡಿದ್ದರು.

ನಿನ್ನೆಯಷ್ಟೇ ಮುಕ್ತಾಯ ಕಂಡ ಭಾರತ ವಿರುದ್ಧದ 3 ಏಕದಿನ ಪಂದ್ಯವನ್ನು ಆಡಿದ ಅವರು ಈ ಸರಣಿಯಲ್ಲಿ 48  ರನ್‌ ಗಳಿಸಿದ್ದರು. 31 ವರ್ಷದ ಸ್ಟೋಕ್ಸ್‌ ಇಂಗ್ಲೆಂಡ್‌ ಟೆಸ್ಟ್‌ ತಂಡದ ನಾಯಕನಾಗಿ ಇತ್ತೀಚೆಗೆ ಆಯ್ಕೆಯಾಗಿದ್ದಾರೆ.

ನಾಳೆ ದಕ್ಷಿಣ ಆಫ್ರಿಕಾ ವಿರುದ್ಧ ಅವರು ತಮ್ಮ ಕೊನೆಯ ಏಕದಿನ ಪಂದ್ಯವನ್ನು ಆಡಲಿದ್ದಾರೆ.‌

 

ಟಾಪ್ ನ್ಯೂಸ್

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.