ಬೆನ್‌ ಸ್ಟೋಕ್ಸ್‌ ಎಲ್ಲರಿಗೂ ಬೇಕು: ಮಾರ್ಗನ್‌


Team Udayavani, Jun 12, 2017, 6:19 PM IST

STOKES12.jpg

ಲಂಡನ್‌: ವಿಶ್ವದ ಎಲ್ಲ ತಂಡಗಳು ಬೆನ್‌ ಸ್ಟೋಕ್ಸ್‌ ತಮ್ಮ ತಂಡದಲ್ಲಿ ಇರಬೇಕೆಂದು ಬಯಸುತ್ತಾರೆ ಎಂದು ಇಂಗ್ಲೆಂಡ್‌ ತಂಡದ ನಾಯಕ ಇವೋನ್‌ ಮಾರ್ಗನ್‌ ಹೇಳಿದ್ದಾರೆ.

ಎಜ್‌ಬಾಸ್ಟನ್‌ನಲ್ಲಿ ಶನಿವಾರ ಆಸ್ಟ್ರೇಲಿಯ ವಿರುದ್ಧ ನಡೆದ ಮಹತ್ವದ ಪಂದ್ಯದಲ್ಲಿ ಸ್ಟೋಕ್ಸ್‌ ಅಜೇಯ 102 ರನ್‌ ಸಿಡಿಸಿದರಲ್ಲದೇ ಮಾರ್ಗನ್‌ ಜತೆ 26 ಓವರ್‌ಗಳಲ್ಲಿ 159 ರನ್ನುಗಳ ಜತೆಯಾಟದಲ್ಲಿ ಪಾಲ್ಗೊಂಡು ಕುಸಿತ ಇಂಗ್ಲೆಂಡ್‌ ತಂಡವನ್ನು ಪಾರು ಮಾಡಿದರಲ್ಲದೇ ಡಕ್‌ವರ್ತ್‌ ಲೂಯಿಸ್‌ ನಿಯಮದಡಿ ತಂಡ 40 ರನ್ನುಗಳ ಗೆಲುವು ದಾಖಲಿಸುವಲ್ಲಿ ಮಹತ್ತರ ಪಾತ್ರ ವಹಿಸಿದ್ದರು.

ಸ್ಟೋಕ್ಸ್‌ ಅವರ ಈ ಸಾಹಸದ ಆಟಕ್ಕೆ ನಾಯಕ ಮಾರ್ಗನ್‌ ಮುಕ್ತಕಂಠದಿಂದ ಪ್ರಶಂಸೆಯ ಮಾತುಗಳನ್ನಾಡಿದ್ದಾರೆ. ಬ್ಯಾಟಿಂಗ್‌, ಬೌಲಿಂಗ್‌ ಮತ್ತು ಫೀಲ್ಡಿಂಗ್‌ನಲ್ಲಿ ಅಪ್ರತಿಮ ಪ್ರತಿಭೆ ಹೊಂದಿರುವ ಸ್ಟೋಕ್ಸ್‌ ಯಶಸ್ವಿ ಆಲ್‌ರೌಂಡರ್‌ ಆಗಿದ್ದಾರೆ. ಐಪಿಎಲ್‌ನಲ್ಲಿ ಆಡಿದ ಅನುಭವದಿಂದ ಅವರು ತಾಳ್ಮೆಯಿಂದ ಆಟವಾಡಿ ತಂಡ ಕಠಿನ ಗುರಿಯನ್ನು ಬೆಂಬತ್ತುವಲ್ಲಿ ನೆರವಾಗಿದ್ದಾರೆ ಎಂದು ಮಾರ್ಗನ್‌ ತಿಳಿಸಿದ್ದಾರೆ.

ಐಪಿಎಲ್‌ ಹರಾಜಿನ ಮೂಲಕ ಅವರು ಪ್ರತಿಯೊಂದು ತಂಡಕ್ಕೆ ಬೇಕು ಎಂಬುದನ್ನು ಸಾಬೀತುಪಡಿಸಿದ್ದಾರೆ. ಈ ಬಾರಿಯ ಐಪಿಎಲ್‌ ಹರಾಜಿನಲ್ಲಿ ಸ್ಟೋಕ್ಸ್‌ ದಾಖಲೆಯ ಮೊತ್ತಕ್ಕೆ ಮಾರಾಟವಾಗಿದ್ದರು. ಅವರು ತಂಡದಲ್ಲಿದ್ದರೆ ಬ್ಯಾಟಿಂಗ್‌, ಬೌಲಿಂಗ್‌ ಅಥವಾ ಫೀಲ್ಡಿಂಗ್‌ ಮೂಲಕ ತನ್ನ ಕೊಡುಗೆಯನ್ನು ಸಲ್ಲಿಸುತ್ತಾರೆ ಎಂದರಲ್ಲದೇ ಮಿಡ್‌ ಆನ್‌ನಲ್ಲಿ ಫೀಲ್ಡಿಂಗ್‌ ನಡೆಸಿದ್ದ ಸ್ಟೋಕ್ಸ್‌ ಹಲವು ರನ್‌ಗಳನ್ನು ರಕ್ಷಿಸಿದ್ದಾರೆ ಎಂದರು.

ಅವರ ಬ್ಯಾಟಿಂಗ್‌ ಅಸಾಮಾನ್ಯವಾದದ್ದು. ಕ್ರೀಸ್‌ನಲ್ಲಿ ಅವರು ತಾಳ್ಮೆ ವಹಿಸಿ ಯಾವುದೇ ಒತ್ತಡವಿಲ್ಲದೇ ಆಡಿದ್ದಾರೆ. ಅವರ ಆಟ ಅತ್ಯದ್ಭುತವಾಗಿದೆ ಎಂದು ಮಾರ್ಗನ್‌ ತಿಳಿಸಿದರು. ಮೂರು ವಿಕೆಟ್‌ ಬೇಗನೇ ಕಳೆದುಕೊಂಡು ಒದ್ದಾಡುತ್ತಿದ್ದ ಇಂಗ್ಲೆಂಡ್‌ 35 ರನ್‌ ತಲುಪಿದಾಗ ಮಳೆ ಬಂದು ಆಟ ನಿಂತಿತ್ತು. ಆಬಳಿಕ ಆಟ ಆರಂಭವಾದಾಗ ಮಾರ್ಗನ್‌ ಎದುರಿಸಿದ ಮೊದಲೆರಡು ಎಸೆತಗಳಲ್ಲಿ ಬೌಂಡರಿ ಬಾರಿಸಿದ್ದರು. ಆಬಳಿಕ ಸ್ಟೋಕ್ಸ್‌ ಕೂಡ ಸಿಡಿಯುತ್ತ ಹೋದರು.

ಆಸ್ಟ್ರೇಲಿಯದ ಬೌಲಿಂಗ್‌ ದಾಳಿಯನ್ನು ಸಮರ್ಥವಾಗಿ ಎದುರಿಸಲು ಒಳ್ಳೆಯ ಜತೆಯಾಟ ಅಗತ್ಯವಾಗಿ ಬೇಕಿತ್ತು. ಅದಕ್ಕಾಗಿ ಜವಾಬ್ದಾರಿಯಿಂದ ಆಡಿದೆವು. ಅವರು ನಿಜವಾಗಿಯೂ ಉತ್ತಮ ಬೌಲಿಂಗ್‌ ದಾಳಿ ನಡೆಸಿದರು. ಆಸ್ಟ್ರೇಲಿಯ ಅಪಾಯಕಾರಿ ತಂಡ ಎಂದು ಮಾರ್ಗನ್‌ ತಿಳಿಸಿದರು.

ಆಸ್ಟ್ರೇಲಿಯದಂತಹ ತಂಡವನ್ನು ಸೋಲಿಸುವುದು ಅಷ್ಟೊಂದು ಸುಲಭದ ಮಾತಲ್ಲ. ಈ ಪಂದ್ಯದಿಂದ ನಮಗೇನೂ ಲಾಭವಿಲ್ಲದಿದ್ದರೂ ವಿಶ್ವದ ಶ್ರೇಷ್ಠ ತಂಡವನ್ನು ಸೋಲಿಸಿದ ಉತ್ಸಾಹದಲ್ಲಿ ಮುಂದಿನ ಪಂದ್ಯಗಳಲ್ಲಿ ಆತ್ಮವಿಶ್ವಾಸದಿಂದ ಆಡಬಹುದು. ಭವಿಷ್ಯದ ಕೂಟಗಳನ್ನು ಗಂಭೀರವಾಗಿ ಪರಿಗಣಿಸಿದರೆ ಇಂತಹ ಕಠಿನ ಪಂದ್ಯಗಳನ್ನು ಗೆಲ್ಲುವ ಅಗತ್ಯವಿದೆ ಎಂದು ಮಾರ್ಗನ್‌ ಹೇಳಿದರು.

ಟಾಪ್ ನ್ಯೂಸ್

vijayendra

Hubli; ಕೇರಳ ಮಾದರಿಯಲ್ಲಿ ರಾಜ್ಯದಲ್ಲಿ ಸರ್ಕಾರ ನಡೆಯುತ್ತಿದೆ: ವಿಜಯೇಂದ್ರ ಆರೋಪ

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

kangaroo movie review

Kangaroo Movie Review; ನಿಗೂಢ ಹಾದಿಯಲ್ಲಿ ಕಾಂಗರೂ ನಡೆ

Tragedy: ಬಿಸಿಲಿನ ತಾಪಕ್ಕೆ ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು…

Tragedy: ಬಿಸಿಲಿನ ತಾಪ… ಕುಸಿದು ಬಿದ್ದು ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು

ಪೋಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Bihar: 2025ರ ಚುನಾವಣೆಗೂ ಮುನ್ನ ಬಿಜೆಪಿಯಿಂದ 10 ಲಕ್ಷ ಸರ್ಕಾರಿ ಉದ್ಯೋಗದ ಭರವಸೆ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kohli IPL 2024

IPL;ಇಂದು ಆರ್‌ಸಿಬಿ ಎದುರಾಳಿ ಗುಜರಾತ್‌ ಟೈಟಾನ್ಸ್‌:ಪ್ಲೇಆಫ್ ಸಾಧ್ಯತೆಗೆ ಗೆಲುವು ಅನಿವಾರ್ಯ

1-qewqeqwe

England;  20 ವರ್ಷದ ಕ್ರಿಕೆಟಿಗ ನಿಗೂಢ ಸಾವು!

1-weweqwe

IPL; ವಾಂಖೇಡೆಯಲ್ಲಿ ಬೌಲರ್‌ಗಳ ಮೇಲುಗೈ: ಮುಂಬೈ ವಿರುದ್ಧ ಕೆಕೆಆರ್ ಜಯಭೇರಿ

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

ICC Men’s Test Team Rankings; Team India slipped to second place

ICC Men’s Test Team Rankings; ಎರಡನೇ ಸ್ಥಾನಕ್ಕೆ ಜಾರಿದ ಟೀಂ ಇಂಡಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

vijayendra

Hubli; ಕೇರಳ ಮಾದರಿಯಲ್ಲಿ ರಾಜ್ಯದಲ್ಲಿ ಸರ್ಕಾರ ನಡೆಯುತ್ತಿದೆ: ವಿಜಯೇಂದ್ರ ಆರೋಪ

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್‌ ಮನೆಗೆ ಕನ್ನ

Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್‌ ಮನೆಗೆ ಕನ್ನ

Arrested: ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ 9 ವರ್ಷ ಬಳಿಕ ಬಂಧನ

Arrested: ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ 9 ವರ್ಷ ಬಳಿಕ ಬಂಧನ

kangaroo movie review

Kangaroo Movie Review; ನಿಗೂಢ ಹಾದಿಯಲ್ಲಿ ಕಾಂಗರೂ ನಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.