ಹರ್ಯಾಣ-ತಮಿಳ್‌ ಅಂತಿಮ ಪಂದ್ಯ ಟೈ


Team Udayavani, Dec 26, 2018, 6:00 AM IST

8.jpg

ಕೋಲ್ಕತಾ: ಪ್ಲೇ-ಆಫ್ ಆಸೆಯನ್ನು ಎಂದೋ ಕೈಬಿಟ್ಟಿರುವ ಎ ವಲಯದ ಹರ್ಯಾಣ ಸ್ಟೀಲರ್ ಮತ್ತು ಬಿ ವಲಯದ ತಮಿಳ್‌ ತಲೈವಾಸ್‌ ನಡುವಿನ ಪ್ರೊ ಕಬಡ್ಡಿ ಪಂದ್ಯ ಟೈ ಆಗಿದೆ. ಮಂಗಳವಾರ ನಡೆದ ಕೋಲ್ಕತಾ ಚರಣದ ಈ ಔಪಚಾರಿಕ ಅಂತರ್‌ ವಲಯ ಪಂದ್ಯ 40-40 ಅಂಕಗಳಿಂದ ಸಮಬಲಗೊಂಡಿದೆ. ಇತ್ತಂಡಗಳು ತಮ್ಮ ಕಡೆಯ ಪಂದ್ಯದಲ್ಲಿ ಗೆಲ್ಲಲು ವಿಫ‌ಲವಾಗಿ ನಿರಾಶೆ ಅನುಭವಿಸಿದವು. ಇವೆರಡೂ ತಂಡಗಳು ತಮ್ಮ ತಮ್ಮ ಗುಂಪಿನ ಕೊನೆಯ ಸ್ಥಾನದೊಂದಿಗೆ ಹೋರಾಟ ಮುಗಿಸಿದವು. ದಿನದ 2ನೇ ಪಂದ್ಯದಲ್ಲಿ ಬೆಂಗಾಲ್‌ ವಾರಿಯರ್ 39-34 ಅಂತರದಿಂದ ತೆಲುಗು ಟೈಟಾನ್ಸ್‌ಗೆ ಸೋಲುಣಿಸಿತು.

ಸರಿಸಮ ಹೋರಾಟ
ಹರ್ಯಾಣದ ತಾರಾ ದಾಳಿಗಾರ ಮೋನು ಗೋಯತ್‌ ತಮ್ಮ ತಂಡದ ಪರ ಮಿಂಚು ಹರಿಸಿದರು. ಅಂತಿಮ ಪಂದ್ಯದಲ್ಲಿ 18 ಬಾರಿ ತಮಿಳುನಾಡು ಕೋಟೆಗೆ ಲಗ್ಗೆಯಿಟ್ಟ ಮೋನು, 17 ಅಂಕ ಗಳಿಸಿದರು. ಇದರಲ್ಲಿ 12 ಯಶಸ್ವಿ ದಾಳಿ ಮೂಲಕ 11 ಅಂಕ, ಬೋನಸ್‌ ರೂಪದಲ್ಲಿ 5 ಅಂಕ ಗಳಿಸಿದರು. ರಕ್ಷಣೆಯಲ್ಲಿ 1 ಅಂಕ ಸಂಪಾದಿಸಿದರು. ಇವರಿಗೆ ದಾಳಿಯಲ್ಲಿ ನೆರವು ನೀಡಿದ ವಿಕಾಸ್‌ ಖಂಡೋಲ 10 ಅಂಕ ಗಳಿಸಿದರು. ರಕ್ಷಣಾ ವಿಭಾಗದಲ್ಲಿ ಪ್ರವೀಣ್‌ ಮಿಂಚಿದರು.

ತಮಿಳ್‌ ತಲೈವಾಸ್‌ ಪರ ಖ್ಯಾತ ಆಟಗಾರ ಅಜಯ್‌ ಠಾಕೂರ್‌ 25 ಬಾರಿ ಹರ್ಯಾಣ ಕೋಟೆಯೊಳಗೆ ಪ್ರವೇಶಿಸಿ 15 ಅಂಕ ಗಳಿಸಿದರು. ಬೋನಸ್‌ ರೂಪದಲ್ಲಿ ಅವರಿಗೆ 2 ಅಂಕ ಲಭಿಸಿತು. ಇವರಿಗೆ ಆನಂದ್‌ ಬೆಂಬಲ ನೀಡಿ 8 ಅಂಕ ಗಳಿಸಿ ಕೊಟ್ಟರು. ಲೀಗ್‌ನ ಆರಂಭದಿಂದಲೇ ಕಳಪೆ ಪ್ರದರ್ಶನ ನೀಡುತ್ತ ಬಂದ ಈ ಎರಡು ತಂಡಗಳು, ಕಡೆಯ ವರೆಗೂ ಚೇತರಿಸಿಕೊಳ್ಳಲೇ ಇಲ್ಲ. ತಮ್ಮ ಪಾಲಿನ ಎಲ್ಲ 22 ಪಂದ್ಯಗಳನ್ನು ಎರಡೂ ತಂಡಗಳು ಮುಗಿಸಿವೆ. 

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.