ಸೆಮಿಫೈನಲ್‌ಗೇರಿದ ಬೆಂಗಳೂರು ಬುಲ್ಸ್‌; ಹಾಲಿ ಚಾಂಪಿಯನ್‌ ದಬಾಂಗ್‌ ಡೆಲ್ಲಿಗೆ ಹೀನಾಯ ಸೋಲು


Team Udayavani, Dec 13, 2022, 10:34 PM IST

ಸೆಮಿಫೈನಲ್‌ಗೇರಿದ ಬೆಂಗಳೂರು ಬುಲ್ಸ್‌; ಹಾಲಿ ಚಾಂಪಿಯನ್‌ ದಬಾಂಗ್‌ ಡೆಲ್ಲಿಗೆ ಹೀನಾಯ ಸೋಲು

ಮುಂಬೈ: ಮಂಗಳವಾರ ನಡೆದ ಪ್ರೊ ಕಬಡ್ಡಿ 1ನೇ ನಿರ್ಗಮನ ಪಂದ್ಯದಲ್ಲಿ ಬೆಂಗಳೂರು ಬುಲ್ಸ್‌ ಅದ್ಭುತ ಜಯ ಸಾಧಿಸಿದೆ. ಅದು ಹಾಲಿ ಚಾಂಪಿಯನ್‌ ದಬಾಂಗ್‌ ಡೆಲ್ಲಿಯನ್ನು 56-24 ಅಂಕಗಳಿಂದ ಸೋಲಿಸಿ, ಸೆಮಿಫೈನಲ್‌ಗೇರಿದೆ.

ಡಿ.15ರಂದು ನಡೆಯುವ 1ನೇ ಉಪಾಂತ್ಯದಲ್ಲಿ ಬುಲ್ಸ್‌, ಜೈಪುರ ಪಿಂಕ್‌ ಪ್ಯಾಂಥರ್ಸ್‌ ತಂಡವನ್ನು ಎದುರಿಸಲಿದೆ. ಕಳೆದ ಬಾರಿ ಕಪ್‌ ಗೆದ್ದಿದ್ದ ಡೆಲ್ಲಿ ಈ ಬಾರಿ ನಿರ್ಗಮನ ಸುತ್ತಿನಲ್ಲೇ ನಿರ್ಗಮಿಸಿದೆ.

ಬೆಂಗಳೂರು ಇಡೀ ಪಂದ್ಯದಲ್ಲಿ ಪೂರ್ಣ ನಿಯಂತ್ರಣ ಹೊಂದಿತ್ತು. ಪಂದ್ಯದ ಆರಂಭದ ಕೆಲ ನಿಮಿಷಗಳಲ್ಲೇ ಡೆಲ್ಲಿಯನ್ನು ಆಲೌಟ್‌ ಮಾಡಿತು. ಪಂದ್ಯದ 5ನೇ ನಿಮಿಷದಲ್ಲಿ ಬುಲ್ಸ್‌ 13-3ರಿಂದ ಮುನ್ನಡೆ ಸಾಧಿಸಿತ್ತು. ಪಂದ್ಯದ 12ನೇ ನಿಮಿಷದಲ್ಲಿ ಡೆಲ್ಲಿಗೆ ಮತ್ತೂಮ್ಮೆ ಆಘಾತ ಎದುರಾಯಿತು. ಆಗ ಬೆಂಗಳೂರು 24-10ರಿಂದ ಮುನ್ನಡೆ ಸಾಧಿಸಿತ್ತು. ಮೊದಲನೇ ಅವಧಿ ಮುಗಿಯುವಾಗ ಬೆಂಗಳೂರಿನ ಮುನ್ನಡೆ 31-14ರಲ್ಲಿತ್ತು. ಆಗಲೇ ಬುಲ್ಸ್‌ ಗೆಲ್ಲುವುದು ಖಚಿತವಾಗಿತ್ತು.

ದ್ವಿತೀಯ ಅವಧಿಯಲ್ಲಿ ಇದೇ ಆಟವನ್ನು ಮುಂದುವರಿಸಿದ ಬೆಂಗಳೂರು ಡೆಲ್ಲಿಗೆ ಉಸಿರೆತ್ತಲು ಅವಕಾಶ ನೀಡಲಿಲ್ಲ. ಒಟ್ಟಾರೆಯಾಗಿ 56-24ರ ಅಂತರದಿಂದ ಗೆಲುವು ಸಾಧಿಸಿತು. ಬುಲ್ಸ್‌ನ ಈ ಯಶಸ್ಸಿನಲ್ಲಿ ದಾಳಿಗಾರ ಭರತ್‌ ಪಾತ್ರ ಮಹತ್ವದ್ದು. ಅವರು 18 ದಾಳಿಗಳಲ್ಲಿ 15 ಅಂಕ ಸಂಪಾದಿಸಿದರು. ಇನ್ನು ಆರಂಭದಿಂದಲೇ ಅಬ್ಬರಿಸತೊಡಗಿದ ವಿಕಾಶ್‌ ಕಂಡೊಲ 18 ದಾಳಿಗಳಲ್ಲಿ 13 ಅಂಕ ಪಡೆದರು. ಡೆಲ್ಲಿ ಪರ ನಾಯಕ ನವೀನ್‌ ಕುಮಾರ್‌ 8 ಅಂಕ ಪಡೆದರೂ, ಅದೇನು ಮಿಂಚಿನ ಆಟವಾಗಿರಲಿಲ್ಲ. ಉಳಿದ ಆಟಗಾರರೂ ವಿಫ‌ಲರಾದರು.

ತಮಿಳ್‌-ಪುನೇರಿ ನಡುವೆ 2ನೇ ಉಪಾಂತ್ಯ
ಮಂಗಳವಾರ ರಾತ್ರಿ ನಡೆದ ಇನ್ನೊಂದು ನಿರ್ಗಮನ ಪಂದ್ಯ ಅತ್ಯಂತ ರೋಚಕವಾಗಿತ್ತು. ನಿಗದಿತ 40 ನಿಮಿಷಗಳಲ್ಲಿ ತಮಿಳ್‌ ತಲೈವಾಸ್‌-ಯುಪಿ ಯೋಧಾಸ್‌ ತಲಾ 36 ಅಂಕ ಗಳಿಸಿ ಸಮಬಲ ಸಾಧಿಸಿದವು. ಕಡೆಗೆ ತಲಾ 5 ರೈಡ್‌ಗಳ ಮೂಲಕ ಫ‌ಲಿತಾಂಶ ನಿರ್ಧರಿಸಲಾಯಿತು. ಇಲ್ಲಿ ತಮಿಳ್‌ ತಂಡ 6, ಯೋಧಾಸ್‌ 4 ಅಂಕಗಳಿಸಿತು. ಡಿ.15ರಂದು ನಡೆಯುವ 2ನೇ ಸೆಮಿಫೈನಲ್‌ನಲ್ಲಿ ಪುನೇರಿ ಪಲ್ಟಾನ್‌ ತಂಡವನ್ನು ತಮಿಳ್‌ ತಲೈವಾಸ್‌ ಎದುರಿಸಲಿದೆ.

ಟಾಪ್ ನ್ಯೂಸ್

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

1-eeeeweq

RCB ತನ್ನಿಂದಾಗಿ ಕಪ್‌ ಕಳೆದುಕೊಂಡಿತು: ವಾಟ್ಸನ್‌ ಪಶ್ಚಾತ್ತಾಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.