ನ್ಯೂಜಿಲ್ಯಾಂಡಿನ ಮಾಜಿ ನಾಯಕ ಕಾಂಗ್ಡನ್‌ ನಿಧನ


Team Udayavani, Feb 11, 2018, 6:25 AM IST

Bevan-Congdon-died.jpg

ಆಕ್ಲೆಂಡ್‌: ನ್ಯೂಜಿಲ್ಯಾಂಡ್‌ ಕ್ರಿಕೆಟಿನ ಪ್ರಥಮ ಆಲ್‌ರೌಂಡರ್‌, ಆಸ್ಟ್ರೇಲಿಯ ವಿರುದ್ಧ ನ್ಯೂಜಿಲ್ಯಾಂಡಿಗೆ ಮೊದಲ ಟೆಸ್ಟ್‌ ಜಯವನ್ನು ತಂದಿತ್ತ ನಾಯಕನೆಂಬ ಖ್ಯಾತಿಯ ಮಾಜಿ ಕ್ರಿಕೆಟಿಗ ಬೆವನ್‌ ಕಾಂಗ್ಡನ್‌ ತಮ್ಮ 80ನೇ ಜನ್ಮದಿನದ ಮುನ್ನಾ ದಿನವಾದ ಶನಿವಾರ ಆಕ್ಲೆಂಡ್‌ನ‌ಲ್ಲಿ ನಿಧನರಾದರು.

1965ರಲ್ಲಿ ಪ್ರವಾಸಿ ಪಾಕಿಸ್ಥಾನ ವಿರುದ್ಧ ಟೆಸ್ಟ್‌ ಪಾದಾರ್ಪಣೆ ಮಾಡಿದ ಬೆವನ್‌ ಕಾಂಗ್ಡನ್‌ 1978ರ ತನಕ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಸಕ್ರಿಯರಾಗಿದ್ದರು. 61 ಟೆಸ್ಟ್‌ಗಳಿಂದ 32.22ರ ಸರಾಸರಿಯಲ್ಲಿ 3,448 ರನ್‌ ಪೇರಿಸಿದ್ದು ಈ ವನ್‌ಡೌನ್‌ ಬ್ಯಾಟ್ಸ್‌ಮನ್‌ನ ಸಾಧನೆ. ಇದರಲ್ಲಿ 7 ಶತಕ ಹಾಗೂ 19 ಅರ್ಧ ಶತಕಗಳು ಸೇರಿವೆ. 176 ರನ್‌ ಸರ್ವಾಧಿಕ ಗಳಿಕೆ. 59 ವಿಕೆಟ್‌ಗಳನ್ನೂ ಉರುಳಿಸಿದ್ದಾರೆ. 11 ಏಕದಿನ ಪಂದ್ಯಗಳನ್ನಾಡಿದ್ದು, 338 ರನ್‌ ಹಾಗೂ 7 ವಿಕೆಟ್‌ ಸಂಪಾದಿಸಿದ್ದಾರೆ.

ಕಾಂಗ್ಡನ್‌ 17 ಟೆಸ್ಟ್‌ಗಳಲ್ಲಿ ನ್ಯೂಜಿಲ್ಯಾಂಡನ್ನು ಮುನ್ನಡೆಸಿದ್ದಾರೆ. ಇದರಲ್ಲಿ ಗೆಲುವು ಒಲಿದದ್ದು ಒಂದರಲ್ಲಿ ಮಾತ್ರ. ಆದರೆ ಇದೊಂದು ಸ್ಮರಣೀಯ ಜಯವಾಗಿತ್ತು. ನ್ಯೂಜಿಲ್ಯಾಂಡಿಗೆ ಆಸ್ಟ್ರೇಲಿಯ ವಿರುದ್ಧ ಒಲಿದ ಪ್ರಪ್ರಥಮ ಟೆಸ್ಟ್‌ ಗೆಲುವು ಇದೆಂಬುದು ಉಲ್ಲೇಖನೀಯ. ಇದಕ್ಕೆ ಸಾಕ್ಷಿಯಾದದ್ದು 1974ರ ಈ ಕ್ರೈಸ್ಟ್‌ಚರ್ಚ್‌ ಟೆಸ್ಟ್‌ ಪಂದ್ಯ. ಕಿವೀಸ್‌ ಜಯದ ಅಂತರ 5 ವಿಕೆಟ್‌.

“ನ್ಯೂಜಿಲ್ಯಾಂಡ್‌ ಕ್ರಿಕೆಟನ್ನು ವಿಶ್ವ ಕಣ್ಣೆತ್ತಿ ನೋಡುವಂತೆ ಮಾಡಿದ ಹೆಗ್ಗಳಿಕೆ ಬೆವನ್‌ ಕಾಂಗ್ಡನ್‌ ಅವರಿಗೆ ಸಲ್ಲುತ್ತದೆ. ಶ್ರೇಷ್ಠ ಆಲ್‌ರೌಂಡರ್‌ ಮತ್ತು ಯಶಸ್ವೀ ನಾಯಕತ್ವಕ್ಕೆ ಅವರೊಂದು ಅತ್ಯುತ್ತಮ ಉದಾಹರಣೆಯಾಗಿದ್ದರು’ ಎಂದು ನ್ಯೂಜಿಲ್ಯಾಂಡ್‌ ಕ್ರಿಕೆಟ್‌ ಮಂಡಳಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡೇವಿಡ್‌ ವೈಟ್‌ ತಮ್ಮ ಶೋಕ ಸಂದೇಶದಲ್ಲಿ ಹೇಳಿದ್ದಾರೆ.

ಪತ್ನಿ ಶಿರ್ಲಿ, ಪುತ್ತಿಯರಾದ ಅಲಿ, ಸ್ಯಾಂಡಿ, ಮೊಮ್ಮಕ್ಕಳಾದ ಮ್ಯಾಥ್ಯೂ, ಜೋಶುವಾ, ಲಿಲ್ಲಿ ಮತ್ತು ರೀವ್ಸ್‌ ಅವರನ್ನು ಕಾಂಗ್ಡನ್‌ ಅಗಲಿದ್ದಾರೆ.

ಟಾಪ್ ನ್ಯೂಸ್

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.