ಗಾಯದ ಮೇಲೆ ಬರೆ: ಮುಂದಿನ ಆರು ತಿಂಗಳ ಕಾಲ ಭುವನೇಶ್ವರ್ ಕುಮಾರ್ ಕ್ರಿಕೆಟ್ ನಿಂದ ಔಟ್!
Team Udayavani, Dec 25, 2020, 11:32 AM IST
ಮುಂಬೈ: ಟೀಂ ಇಂಡಿಯಾಗೆ ಗಾಯದ ಮೇಲೆ ಬರೆ ಬಿದ್ದ ಹಾಗಾಗಿದೆ. ತಂಡದ ಪ್ರಮುಖ ಬೌಲರ್ ಭುವನೇಶ್ವರ್ ಕುಮಾರ್ ತಂಡದಿಂದ ಆರು ತಿಂಗಳ ಕಾಲ ಹೊರಬಿದ್ದಿದ್ದಾರೆ.
ಕಳೆದ ಐಪಿಎಲ್ ನ ಆರಂಭದಲ್ಲಿ ಗಾಯದ ಸಮಸ್ಯೆಗೆ ಸಿಲುಕಿದ್ದ ಭುವನೇಶ್ವರ್ ಕುಮಾರ್ ಇನ್ನೂ ಚೇತರಿಸಿಕೊಂಡಿಲ್ಲ. ಇನ್ನು ಅವರು ಕ್ರಿಕೆಟ್ ಗೆ ಲಭ್ಯವಾಗುವುದು ಮುಂದಿನ ಐಪಿಎಲ್ ಗೆ ಎನ್ನುತ್ತದೆ ವರದಿಗಳು.
ಗಾಯದ ಸಮಸ್ಯೆಗೆ ಸಿಲುಕಿದ್ದ ಭುವನೇಶ್ವರ್ ಕುಮಾರ್ ಕಳೆದ ಐಪಿಎಲ್ ಗೆ ವಾಪಾಸಾಗಿದ್ದರು. ಆದರೆ ಟೂರ್ನಿಯ ಆರಂಭದಲ್ಲೇ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಗಾಯದ ಸಮಸ್ಯೆಗೆ ಸಿಲುಕಿದ್ದರು.
ಇದನ್ನೂ ಓದಿ:ಧನಾತ್ಮಕ ಅಂಶಗಳನ್ನು ಸ್ವೀಕರಿಸಿ: ಗೌತಮ್ ಗಂಭೀರ್ ಸಲಹೆ
ಕೆಲವೇ ವಾರಗಳಲ್ಲಿ ನಡೆಯಲಿರುವ ಸಯ್ಯದ್ ಮುಷ್ತಕ್ ಆಲಿ ಟ್ರೋಫಿ ಟಿ20 ಕೂಟಕ್ಕೂ ಭುವಿ ಆಯ್ಕೆಯಾಗಿಲ್ಲ. ಮುಂದಿನ ವರ್ಷದ ಫೆಬ್ರವರಿಯಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೂ ಭುವನೇಶ್ವರ್ ಅಲಭ್ಯರಾಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ