ಬೆಂಗಳೂರು ದಾಳಿಗೆ ಬಿಜಾಪುರ ಬುಲ್ಸ್‌ ತಬ್ಬಿಬ್ಬು


Team Udayavani, Sep 16, 2017, 6:25 AM IST

KPL-2017-015.jpg

ಹುಬ್ಬಳ್ಳಿ: ಬೆಂಗಳೂರು ಬ್ಲಾಸ್ಟರ್ ಬೌಲರ್‌ಗಳ ಮಾರಕ ದಾಳಿಗೆ ಸಿಲುಕಿದ ಬಿಜಾಪುರ ಬುಲ್ಸ್‌ ಕೆಪಿಎಲ್‌ನಲ್ಲಿ ಕೇವಲ 126 ಸವಾಲು ನೀಡಿದೆ.

ಇಲ್ಲಿನ ರಾಜನಗರ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಬಿಜಾಪುರ ಬುಲ್ಸ್‌ 20 ಓವರ್‌ಗೆ 9 ವಿಕೆಟ್‌ ಕಳೆದುಕೊಂಡು 125 ರನ್‌ ಬಾರಿಸಿತು. ಪಂದ್ಯದುದ್ದಕ್ಕೂ ಬೆಂಗಳೂರು ಬೌಲರ್‌ಗಳೇ ಮೇಲುಗೈ ಸಾಧಿಸಿದರು. ಒಬ್ಬರ ಹಿಂದೆ ಒಬ್ಬರಂತೆ ಬ್ಯಾಟ್ಸ್‌ಮನ್‌ಗಳು ಪೆವಿಲಿಯನ್‌ ಅತ್ತ ಹೆಜ್ಜೆ ಹಾಕಿದರು.

ಆರಂಭಿಕರಾಗಿ ಕಣಕ್ಕೆ ಇಳಿದ ಮೊಹಮ್ಮದ್‌ ತಾಹ ಮತ್ತು ಭರತ್‌ ಚಿಪ್ಲಿ ಜೋಡಿ 9 ರನ್‌ ದಾಖಲಿಸುತ್ತಿದ್ದಂತೆ ಮೊದಲ ಆಘಾತ ಎದುರಾಯಿತು. ಈ ಹಂತದಲ್ಲಿ ಸ್ಫೋಟಕ ಬ್ಯಾಟ್ಸ್‌ಮನ್‌ ತಾಹ ರನೌಟ್‌ಗೆ ಬಲಿಯಾದರು. ತಂಡದ ಮೊತ್ತ 3.5 ಓವರ್‌ಗೆ 22 ರನ್‌ ಆಗುತ್ತಿದ್ದಂತೆ ಚಿಪ್ಲಿ ಕೂಡ ವಿಕೆಟ್‌ ಕಳೆದುಕೊಂಡರು.

ಈ ಹಂತದಲ್ಲಿ 3ನೇ ವಿಕೆಟ್‌ಗೆ ಜತೆಯಾದ ಎಂ.ಜಿ.ನವೀನ್‌ ಮತ್ತು ನೇಗಿ ದೊಡ್ಡ ಮೊತ್ತ ಕಲೆ ಹಾಕುವ ಭರವಸೆ ನೀಡಿದ್ದರು. ಆದರೆ ಇನಿಂಗ್ಸ್‌ನ 8ನೇ ಓವರ್‌ಗೆ 2ನೇ ಎಸೆತದಲ್ಲಿ ನವೀನ್‌ ವಿಕೆಟ್‌ ಕಳೆದುಕೊಂಡರು. ಇವರ ಹಿಂದೆಯೇ ಅನುಭವಿ ಆಟಗಾರ ಎಚ್‌.ಎಸ್‌. ಶರತ್‌ ಕೂಡ ಪೆವಿಲಿಯನ್‌ ಸೇರಿದರು.

ಹೀಗೆ ಬೆಂಗಳೂರು ಬೌಲರ್‌ಗಳ ದಾಳಿಗೆ ಸಿಲುಕಿ ಬುಲ್ಸ್‌ ಬ್ಯಾಟ್ಸ್‌ಮನ್‌ಗಳು ನಿರಂತರವಾಗಿ ವಿಕೆಟ್‌ ಕಳೆದುಕೊಳ್ಳುತ್ತಾ ಸಾಗಿದರು. ಯಾರೂ ಕೂಡ ಕ್ರೀಸ್‌ನಲ್ಲಿ ಹೆಚ್ಚು ಹೊತ್ತು ನಿಲ್ಲಲಿಲ್ಲ. ತಂಡದ ಪರ ದಿಕ್ಷಾಂಶು ನೇಗಿ 28 ಎಸೆತದಲ್ಲಿ 5 ಬೌಂಡರಿ ಸೇರಿದಂತೆ 36 ರನ್‌ ಬಾರಿಸಿ ಔಟ್‌ ಆದರು. ಇದು ಬುಲ್ಸ್‌ ಪರ ದಾಖಲಾದ ವೈಯಕ್ತಿಕ ಗರಿಷ್ಠ ಮೊತ್ತವಾಗಿದೆ. ಉಳಿದಂತೆ ಎಲ್ಲಾ ಬ್ಯಾಟ್ಸ್‌ಮನ್‌ಗಳು ವೈಫ‌ಲ್ಯ ಎದುರಿಸಿದರು. ರೋನಿತ್‌ ಮೋರೆ ಮತ್ತು ಕೆ.ಸಿ.ಕಾರಿಯಪ್ಪ ಅಜೇಯರಾಗಿ ಉಳಿಯುವ ಮೂಲಕ ತಂಡ ಆಲೌಟ್‌ ಆಗುವುದನ್ನು ತಪ್ಪಿಸಿದರು.

ಚುರುಕಿನ ದಾಳಿ:
ಬೆಂಗಳೂರು ಪರ ಪ್ರಸಿದ್ಧ್ ಕೃಷ್ಣ, ಕೌಶಿಕ್‌, ಪ್ರಣವ್‌ ಭಾಟಿಯಾ ಭರ್ಜರಿ ದಾಳಿ ನಡೆಸಿದರು. ಇದರಿಂದಾಗಿ ಬುಲ್ಸ್‌ ತಂಡವನ್ನು ಆಲೌಟ್‌ ಮಾಡಲು ಸಾಧ್ಯವಾಗದಿದ್ದರೂ ಅಲ್ಪ ಮೊತ್ತಕ್ಕೆ ಕಟ್ಟಿಹಾಕುವಲ್ಲಿ ಯಶಸ್ವಿಯಾದರು. ಕೌಶಿಕ್‌ ಮತ್ತು ಭಾಟಿಯಾ ತಲಾ 2 ವಿಕೆಟ್‌ ಪಡೆದರು. ಪ್ರಸಿದ್ಧ್, ಅಭಿಷೇಕ್‌, ಯಾದವ್‌ ತಲಾ 1 ವಿಕೆಟ್‌ ಪಡೆದರು. ಯಾವುದೇ ಹಂತದಲ್ಲಿಯೂ ಎದುರಾಳಿ ಬ್ಯಾಟ್ಸ್‌ಮನ್‌ಗಳಿಗೆ ಕ್ರೀಸ್‌ನಲ್ಲಿ ಹೆಚ್ಚು ಹೊತ್ತು ನಿಲ್ಲಲು ಅವಕಾಶ ನೀಡಲಿಲ್ಲ. ಕ್ಷೇತ್ರ ರಕ್ಷಣೆಯಲ್ಲಿಯೂ ಬೆಂಗಳೂರು ತಂಡ ಉತ್ತಮ ಪ್ರದರ್ಶನ ನೀಡಿತು.

ಸಂಕ್ಷಿಪ್ತ ಸ್ಕೋರ್‌:
ಬಿಜಾಪುರ ಬುಲ್ಸ್‌ 20 ಓವರ್‌ಗೆ 125/9(ನೇಗಿ 36, ಭರತ್‌ ಚಿಪ್ಲಿ 14, ಕೌಶಿಕ್‌ 23ಕ್ಕೆ 2, ಪ್ರಣವ್‌ ಭಾಟಿಯಾ 25ಕ್ಕೆ 2)

– ವಿಶ್ವನಾಥ ಕೋಟಿ

ಟಾಪ್ ನ್ಯೂಸ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.