ಬೂಂ ಬೂಂ ಅಫ್ರಿದಿ ಬೈ ಬೈ


Team Udayavani, Feb 21, 2017, 10:42 AM IST

Shahid-Afridi.jpg

ಶಾರ್ಜಾ: ಪಾಕಿಸ್ಥಾನದ “ಲೆಜೆಂಡ್ರಿ ಆಲ್‌ರೌಂಡರ್‌’ ಶಾಹಿದ್‌ ಅಫ್ರಿದಿ ಅಂತಾರಾಷ್ಟ್ರೀಯ ಕ್ರಿಕೆಟಿಗೆ ನಿವೃತ್ತಿ ಘೋಷಿಸಿದ್ದಾರೆ. ಇದರೊಂದಿಗೆ ವಿಶ್ವ ಕ್ರಿಕೆಟಿನ ಸ್ಫೋಟಕ ಹಾಗೂ ವರ್ಣರಂಜಿತ ಅಧ್ಯಾಯಕ್ಕೆ ತೆರೆ ಬಿದ್ದಿದೆ.
ರವಿವಾರ ರಾತ್ರಿಯ “ಪಾಕಿಸ್ಥಾನ ಸೂಪರ್‌ ಲೀಗ್‌’ ಕೂಟದ ಕರಾಚಿ ಕಿಂಗ್ಸ್‌-ಪೇಶಾವರ್‌ ಝಲಿ¾ ಪಂದ್ಯದ ಬಳಿಕ ಅಫ್ರಿದಿ ಅಂತಾರಾಷ್ಟ್ರೀಯ ಕ್ರಿಕೆಟ್‌ ವಿದಾಯವನ್ನು ಪ್ರಕಟಿಸಿದರು. ಈ ಪಂದ್ಯದಲ್ಲಿ ಅಫ್ರಿದಿ ಪೇಶಾವರ್‌ ತಂಡದ ಪರ 28 ಎಸೆತಗಳಿಂದ 54 ರನ್‌ ಸಿಡಿಸಿದರು. ಆದರೂ ತಂಡದ ಗೆಲುವಿಗೆ ಇದು ಸಾಕಾಗಲಿಲ್ಲ.

“ನಾನು ಅಂತಾರಾಷ್ಟ್ರೀಯ ಕ್ರಿಕೆಟಿಗೆ ವಿದಾಯ ಹೇಳುತ್ತಿದ್ದೇನೆ. ಆದರೆ ಅಭಿಮಾನಿಗಳಿಗೋಸ್ಕರ ಇಂಥ ಲೀಗ್‌ ಪಂದ್ಯಾವಳಿಗಳಲ್ಲಿ ಆಡುವುದನ್ನು ಇನ್ನೆರಡು ವರ್ಷಗಳ ಕಾಲ ಮುಂದುವರಿಸುತ್ತೇನೆ’ ಎಂದು ಅಫ್ರಿದಿ ಹೇಳಿದರು.
ಮಾರ್ಚ್‌ ಒಂದಕ್ಕೆ 37 ವರ್ಷ ಪೂರ್ತಿಗೊಳಿಸಲಿರುವ ಶಾಹಿದ್‌ ಅಫ್ರಿದಿ ಈಗಾಗಲೇ 2010ರಲ್ಲಿ ಟೆಸ್ಟ್‌ ಕ್ರಿಕೆಟಿಗೆ, 2015ರ ವಿಶ್ವಕಪ್‌ ಬಳಿಕ ಏಕದಿನ ಕ್ರಿಕೆಟಿಗೆ ವಿದಾಯ ಹೇಳಿದ್ದರು. ಆದರೂ 2016ರ ಟಿ-20 ವಿಶ್ವಕಪ್‌ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಅವರನ್ನು ಪಾಕಿಸ್ಥಾನ ತಂಡದ ನಾಯಕನನ್ನಾಗಿ ಉಳಿಸಿಕೊಳ್ಳಲಾಗಿತ್ತು. ಆದರೆ ಇಲ್ಲಿ ಪಾಕ್‌ ಮೊದಲ ಸುತ್ತಿನಲ್ಲೇ ಹೊರಬಿತ್ತು. ಅಫ್ರಿದಿ ಮೂಲೆಗುಂಪಾದರು. ಕಳೆದ ಸೆಪ್ಟಂಬರ್‌ನಲ್ಲಿ ವೆಸ್ಟ್‌ ಇಂಡೀಸ್‌ ವಿರುದ್ಧ ಯುಎಇಯಲ್ಲಿ ಅಫ್ರಿದಿ ವಿದಾಯ ಟಿ-20 ಪಂದ್ಯವೊಂದನ್ನು ಆಡಲು ಬಯಸಿದರಾದರೂ ಅವರನ್ನು ಆಯ್ಕೆಗಾರರು ಗಣನೆಗೇ ತೆಗೆದುಕೊಳ್ಳಲಿಲ್ಲ.

2ನೇ ಏಕದಿನದಲ್ಲೇ ವಿಶ್ವದಾಖಲೆ: 1996ರಲ್ಲಿ ಕೀನ್ಯಾ ವಿರುದ್ಧ “ಕೆಸಿಎ ಸೆಂಟಿನರಿ ಸಿರೀಸ್‌’ನಲ್ಲಿ ಏಕದಿನ ಪಂದ್ಯವಾಡುವ ಮೂಲಕ ಶಾಹಿದ್‌ ಅಫ್ರಿದಿ ಅಂತಾರಾಷ್ಟ್ರೀಯ ಕ್ರಿಕೆಟಿಗೆ ಅಡಿಯಿರಿಸಿದ್ದರು.  ಮೊದಲ ಪಂದ್ಯದಲ್ಲಿ ಅವರಿಗೆ ಬ್ಯಾಟ್‌ ಹಿಡಿಯುವ ಅವಕಾಶ ಸಿಗಲಿಲ್ಲ. ಶ್ರೀಲಂಕಾ ವಿರುದ್ಧ ಆಡಿದ ದ್ವಿತೀಯ ಪಂದ್ಯದಲ್ಲೇ 37 ಎಸೆತಗಳಿಂದ ಸೆಂಚುರಿ ಸಿಡಿಸಿ ವಿಶ್ವ ಕ್ರಿಕೆಟ್‌ನಲ್ಲಿ ಭರ್ಜರಿ ಸಂಚಲನ ಮೂಡಿಸಿದರು. ಅವರ ಈ ಶರವೇಗದ ಶತಕದ ವಿಶ್ವದಾಖಲೆ 18 ವರ್ಷಗಳ ಕಾಲ ಅಜೇಯವಾಗಿತ್ತು. 

ಆಗಲೇ ಅಫ್ರಿದಿ ಅಭಿಮಾನಿ ವರ್ಗ ಹುಟ್ಟಿಕೊಂಡಿತು. ಪ್ರತಿ ಪಂದ್ಯದಲ್ಲೂ ಅವರಿಂದ ಸ್ಫೋಟಕ ಬ್ಯಾಟಿಂಗನ್ನು ಬಯಸತೊಡಗಿತು. ಅಫ್ರಿದಿ ನಿರಾಸೆಗೊಳಿಸಲಿಲ್ಲ. ಎದುರಾಳಿ ಬೌಲರ್‌ಗಳಿಗೆ ಅವರು ಸಿಂಹಸ್ವಪ್ನರಾಗುತ್ತಲೇ ಹೋದರು. ಲೆಗ್‌ಸ್ಪಿನ್‌ ಬೌಲಿಂಗ್‌ ಮೂಲಕ ನಿರ್ಣಾಯಕ ಹಂತಗಳಲ್ಲಿ ವಿಕೆಟ್‌ ಕೀಳುವ ಕಲೆಗಾರಿಕೆಯೂ ಅವರಿಗೆ ಸಿದ್ದಿಸಿತ್ತು.

ಆದರೆ ಕ್ರಿಕೆಟ್‌ನಲ್ಲಿ ಮೇಲೇರಿದಂತೆಲ್ಲ ಅಫ್ರಿದಿ ಸಾಕಷ್ಟು ವಿವಾದಗಳಿಂದ ಹೆಸರು ಕೆಡಿಸಿಕೊಂಡರು. ನಿಷೇಧಕ್ಕೂ ಒಳಗಾದರು. ಪಿಸಿಬಿ ಜತೆಗಿನ ಇವರ ಸಂಬಂಧ ಕೂಡ ಹಳಸತೊಡಗಿತು. ಇವೆಲ್ಲವೂ ಅವರ ಕ್ರಿಕೆಟ್‌ ಸಾಧನೆಗೆ ಅಂಟಿಕೊಂಡ ಕಪ್ಪುಚುಕ್ಕಿಗಳಾಗಿಯೇ ಉಳಿಯುತ್ತವೆ.

ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅಫ್ರಿದಿ ಸಾಧನೆ
– 27 ಟೆಸ್ಟ್‌, 1,716 ರನ್‌, 5 ಶತಕ, 48 ವಿಕೆಟ್‌
– 398 ಏಕದಿನ, 8,064 ರನ್‌, 6 ಶತಕ, 395 ವಿಕೆಟ್‌
– 98 ಟಿ-20, 1,405 ರನ್‌, 4 ಅರ್ಧ ಶತಕ, 97 ವಿಕೆಟ್‌

ಟಾಪ್ ನ್ಯೂಸ್

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

kharge

LS Polls: ಮತದಾರರಿಂದ ಪ್ರೋತ್ಸಾಹದಾಯಕ ಮತದಾನ… ಕಾಂಗ್ರೆಸ್ ನತ್ತ ಜನರ ಒಲವು: ಖರ್ಗೆ

11

Hubballi: ಒಂದೇ ಕುಟುಂಬದ 96 ಸದಸ್ಯರಿಂದ ಮತದಾನ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ

Politics: ಸಿದ್ದರಾಮಯ್ಯ, ಪರಮೇಶ್ವರ ಅವರ ಸಿಡಿಯೂ ಮುಂದೆ ಬರಬಹುದು; ಜಾರಕಿಹೊಳಿ‌

Politics: ಸಿದ್ದರಾಮಯ್ಯ, ಪರಮೇಶ್ವರ ಅವರ ಸಿಡಿಯೂ ಮುಂದೆ ಬರಬಹುದು; ಜಾರಕಿಹೊಳಿ‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqqwewq

Must win ಡೆಲ್ಲಿ ಪ್ಲೇ ಆಫ್ ಆಸೆ ಜೀವಂತ: ರಾಜಸ್ಥಾನ್‌ ರಾಯಲ್ಸ್‌ ಸವಾಲು

CSK (2)

CSK; ಬಸ್‌ ಕಂಡಕ್ಟರ್‌ಗಳಿಗೆ ಚೆನ್ನೈ ಕಿಂಗ್ಸ್‌ನಿಂದ 8 ಸಾವಿರ ಅಗತ್ಯ ಗಿಫ್ಟ್ !

1-sss

Central government ಒಪ್ಪಿದರೆ ಪಾಕ್‌ಗೆ ಭಾರತ ಕ್ರಿಕೆಟ್‌ ತಂಡ: ರಾಜೀವ್‌ ಶುಕ್ಲ

1-wewqewqe

T20 ಸರಣಿ; ಬಾಂಗ್ಲಾ ಎದುರು ಭಾರತ ವನಿತೆಯರಿಗೆ 56 ರನ್‌ ಗೆಲುವು: 4-0 ಮುನ್ನಡೆ

PCB

Pakistan ಟಿ20 ವಿಶ್ವಕಪ್‌ ಗೆದ್ದರೆ ಪ್ರತಿ ಆಟಗಾರರಿಗೆ 1 ಲಕ್ಷ ಡಾಲರ್‌ ಬಹುಮಾನ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

kharge

LS Polls: ಮತದಾರರಿಂದ ಪ್ರೋತ್ಸಾಹದಾಯಕ ಮತದಾನ… ಕಾಂಗ್ರೆಸ್ ನತ್ತ ಜನರ ಒಲವು: ಖರ್ಗೆ

11

Hubballi: ಒಂದೇ ಕುಟುಂಬದ 96 ಸದಸ್ಯರಿಂದ ಮತದಾನ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.