ಬ್ರಿಸ್ಬೇನ್ ಟೆಸ್ಟ್: ನಾಲ್ಕು ವಿಕೆಟ್ ಕಳೆದುಕೊಂಡ ಭಾರತ, ಪಂತ್- ಮಯಾಂಕ್ ಮೇಲಿದೆ ಒತ್ತಡ
Team Udayavani, Jan 17, 2021, 8:02 AM IST
ಬ್ರಿಸ್ಬೇನ್: ಬಾರ್ಡರ್- ಗವಾಸ್ಕರ್ ಸರಣಿಯ ಅಂತಿಮ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ನಾಲ್ಕು ವಿಕೆಟ್ ಕಳೆದುಕೊಂಡಿರುವ ಭಾರತ ಮೊದಲ ಇನ್ನಿಂಗ್ಸ್ ಹಿನ್ನಡೆ ಭೀತಿಯಲ್ಲಿದೆ. ಕನ್ನಡಿಗ ಮಯಾಂಕ್ ಅಗರ್ವಾಲ್ ಮತ್ತು ಕಳೆದ ಪಂದ್ಯದ ಹೀರೊ ರಿಷಭ್ ಪಂತ್ ಕ್ರೀಸ್ ನಲ್ಲಿದ್ದು, ಉತ್ತಮ ಜೊತೆಯಾಟದ ಲೆಕ್ಕಾಚಾರದಲ್ಲಿದ್ದಾರೆ.
ಊಟದ ವಿರಾಮದ ವೇಳೆ ಭಾರತ ತಂಡ ನಾಲ್ಕು ವಿಕೆಟ್ ನಷ್ಟಕ್ಕೆ 161 ರನ್ ಗಳಿಸಿದೆ. ಇನ್ನೂ 208 ರನ್ ಹಿನ್ನಡೆಯಲ್ಲಿದೆ. ಆಸೀಸ್ ಮೊದಲ ಇನ್ನಿಂಗ್ಸ್ ನಲ್ಲಿ 369 ರನ್ ಗಳಿಸಿತ್ತು.
ಎರಡನೇ ದಿನದಾಟದ ಅಂತ್ಯಕ್ಕೆ ಭಾರತ ತಂಡ ಎರಡು ವಿಕೆಟ್ ನಷ್ಟಕ್ಕೆ 62 ರನ್ ಗಳಿಸಿತ್ತು. 25 ರನ್ ಗಳಿಸಿದ ಚೇತೇಶ್ವರ ಪೂಜಾರ ಇಂದು ಮೊದಲನೆಯವರಾಗಿ ಔಟಾದರು. ನಾಯಕ ಅಜಿಂಕ್ಯ ರಹಾನೆ 37 ರನ್ ಗಳಿಸಿ ಸ್ಟಾರ್ಕ್ ಗೆ ವಿಕೆಟ್ ಒಪ್ಪಿಸಿದರು.
ಐದನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಗೆ ಆಗಮಿಸಿದ ಮಯಾಂಕ್ 38 ರನ್ ಗಳಿಸಿ ಆಡುತ್ತಿದ್ದಾರೆ. ರಿಷಭ್ ಪಂತ್ ನಾಲ್ಕು ರನ್ ಗಳಿಸಿ ಕ್ರೀಸ್ ನಲ್ಲಿದ್ದಾರೆ.
ಆಸೀಸ್ ಪರ ಸ್ಟಾರ್ಕ್, ಹ್ಯಾಜಲ್ ವುಡ್, ಕಮಿನ್ಸ್ ಮತ್ತು ಲಯಾನ್ ತಲಾ ಒಂದು ವಿಕೆಟ್ ಪಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?
T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ
CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ
IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ
T20 World Cup; ರೋಹಿತ್, ವಿರಾಟ್ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?
MUST WATCH
ಹೊಸ ಸೇರ್ಪಡೆ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್