ಒಂದು ಸೋಲಿನಿಂದ ನಮ್ಮ ವಿಶ್ವಕಪ್‌ ಅಭಿಯಾನ ಅಂತ್ಯವಾಗಿಲ್ಲ: ವಿರಾಟ್


Team Udayavani, Oct 26, 2021, 8:29 AM IST

ಒಂದು ಸೋಲಿನಿಂದ ನಮ್ಮ ವಿಶ್ವಕಪ್‌ ಅಭಿಯಾನ ಅಂತ್ಯವಾಗಿಲ್ಲ: ವಿರಾಟ್

ದುಬೈ: “ಪಾಕಿಸ್ಥಾನ ತಂಡ ನಮಗಿಂತ ಅತ್ಯುತ್ತಮ ಪ್ರದರ್ಶನ ತೋರಿದೆ ಎಂಬುದನ್ನು ಒಪ್ಪಿಕೊಳ್ಳಲು ನಾಚಿಕೆಪಡಬೇಕಾದ ಅಗತ್ಯವಿಲ್ಲ. ಈ ಸೋಲಿನಿಂದ ನಮ್ಮ ವಿಶ್ವಕಪ್‌ ಅಭಿಯಾನ ಅಂತ್ಯವಾಗಿಲ್ಲ’ ಎಂದು ಟೀಮ್‌ ಇಂಡಿಯಾ ನಾಯಕ ವಿರಾಟ್‌ ಕೊಹ್ಲಿ ಪ್ರತಿಕ್ರಿಯಿಸಿದ್ದಾರೆ.

“ಪಾಕಿಸ್ಥಾನ ತಂಡ ನಮ್ಮನ್ನು ಮೀರಿಸಿದ ಪ್ರದರ್ಶನ ತೋರಿದೆ. ಇದರಲ್ಲಿ ಯಾವುದೇ ಅನುಮಾನವಿಲ್ಲ. ಪಂದ್ಯದಲ್ಲಿ ನಮಗೆ ಯಾವುದೇ ಅವಕಾಶವಿರಲಿಲ್ಲ. ಟಾಸ್‌ ಹಾಗೂ ರಾತ್ರಿಯ ಮಂಜು ಕೂಡ ಫ‌ಲಿತಾಂಶದ ಮೇಲೆ ಪರಿಣಾಮ ಬೀರಿತು’ ಎಂದು ಕೊಹ್ಲಿ ಹೇಳಿದರು.

“ಪಾಕಿಸ್ಥಾನದ ಆಟಗಾರರು ವೃತ್ತಿಪರರರಾಗಿದ್ದಾರೆ. ಹಾಗಾಗಿ ಅವರಿಗೆ ಗೆಲುವಿನ ಶ್ರೇಯ ಸಲ್ಲಬೇಕು. ನಾವು ಗರಿಷ್ಠ ಪ್ರಯತ್ನ ಮಾಡಿದ್ದೇವೆ. ಸೋಲು-ಗೆಲುವು ಕ್ರೀಡೆಯಲ್ಲಿ ಸಾಮಾನ್ಯ. ಇದಕ್ಕೆ ಬೇರೆ ರೀತಿಯ ಬಣ್ಣ ಹಚ್ಚುವುದು ಸರಿಯಲ್ಲ’ ಎಂದು ಕೊಹ್ಲಿ ಟೀಕಿಸಿದವರನ್ನು ಕುಟುಕಿದರು.

ಇದನ್ನೂ ಓದಿ:ಜರ್ಮನಿಯಲ್ಲಿ ನಡೆಯಿತು ಗಡ್ಡದ ಒಲಿಂಪಿಕ್ಸ್‌

“ಒಂದು ಪಂದ್ಯದ ಸೋಲಿನಿಂದ ನಮ್ಮ ವಿಶ್ವಕಪ್‌ ಅಭಿಯಾನ ಅಂತ್ಯವಾಗಲಿದೆ ಎಂದು ನಾವು ಭಾವಿಸುವುದಿಲ್ಲ. ಪಾಕ್‌ ವಿರುದ್ಧ ನಾವು ಉತ್ತಮ ಕ್ರಿಕೆಟ್‌ ಆಡಿಲ್ಲ, ಇದನ್ನು ಒಪ್ಪಿಕೊಳ್ಳಬೇಕು. ಆದರೆ ಮುಂದಿನ ಪಂದ್ಯದಲ್ಲಿ ಎಲ್ಲ ತಪ್ಪುಗಳನ್ನು ತಿದ್ದಿಕೊಂಡು ಮತ್ತೆ ಗೆಲುವಿನ ಹಳಿ ಏರುವ ಅವಕಾಶ ಇದ್ದೇ ಇದೆ. ಇದು ಖಚಿತ’ ಎಂದು ಕೊಹ್ಲಿ ವಿಶ್ವಾಸ ವ್ಯಕ್ತಪಡಿಸಿದರು.

ಮುಂದಿನ ಪಂದ್ಯಕ್ಕೆ ರೋಹಿತ್‌ ಬದಲು ಇಶಾನ್‌ ಕಿಶನ್‌ ಅವರನ್ನು ಆಡಿಸಿ ಎಂದು ಪಾಕ್‌ ಪತ್ರಕರ್ತರೊಬ್ಬರ ಸಲಹೆಗೆ, “ನಿಮಗೆ ವಿವಾದವೇ ಮುಖ್ಯವಾಗುವುದಾದರೆ ಮೊದಲೇ ತಿಳಿಸಿ. ಅದಕ್ಕೆ ತಕ್ಕಂತೆ ಉತ್ತರಿಸುತ್ತೇನೆ’ ಎಂದು ಚಾಟಿ ಬೀಸಿದರು!

ಟಾಪ್ ನ್ಯೂಸ್

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

7-

Obsessive Psychiatry: ಗೀಳು ಮನೋರೋಗ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.