ಪಾಂಡೆ ಶತಕ‌; ಭಾರತಕ್ಕೆ ಹ್ಯಾಟ್ರಿಕ್‌ ಜಯ

ಭಾರತ-ವೆಸ್ಟ್‌ ಇಂಡೀಸ್‌ "ಎ' ತಂಡಗಳ ಏಕದಿನ ಸರಣಿ

Team Udayavani, Jul 18, 2019, 5:08 AM IST

manish

ನಾರ್ತ್‌ ಸೌಂಡ್‌ (ಆ್ಯಂಟಿಗುವಾ): ನಾಯಕ ಮನೀಷ್‌ ಪಾಂಡೆ ಬಾರಿಸಿದ ಆಕರ್ಷಕ ಶತಕದ ಸಾಹಸದಿಂದ ಆತಿಥೇಯ ವೆಸ್ಟ್‌ ಇಂಡೀಸ್‌ “ಎ’ ತಂಡದ ಎದುರಿನ 3ನೇ ಏಕದಿನ ಪಂದ್ಯವನ್ನೂ ಗೆದ್ದ ಭಾರತ “ಎ’ ತಂಡ ಸರಣಿಯನ್ನು ತನ್ನದಾಗಿಸಿಕೊಂಡಿದೆ.

ಬುಧವಾರ ಇಲ್ಲಿನ “ಸರ್‌ ವಿವಿಯನ್‌ ರಿಚರ್ಡ್ಸ್‌ ಸ್ಟೇಡಿಯಂ’ನಲ್ಲಿ ನಡೆದ 3ನೇ ಅನಧಿಕೃತ ಏಕದಿನ ಪಂದ್ಯವನ್ನು ಭಾರತ “ಎ’ ತಂಡ 148 ರನ್ನುಗಳ ಭಾರೀ ಅಂತರದಿಂದ ಜಯಿಸಿತು. ಮೊದಲು ಬ್ಯಾಟಿಂಗ್‌ ನಡೆಸಿದ ಭಾರತ “ಎ’ತಂಡ 6 ವಿಕೆಟಿಗೆ 295 ರನ್‌ ಪೇರಿಸಿದರೆ, ವೆಸ್ಟ್‌ ಇಂಡೀಸ್‌ “ಎ’ ತಂಡ 34.2 ಓವರ್‌ಗಳಲ್ಲಿ 147 ರನ್ನಿಗೆ ಕುಸಿಯಿತು.

ಇದರೊಂದಿಗೆ ಭಾರತ 5 ಪಂದ್ಯಗಳ ಸರಣಿಯಲ್ಲಿ 3-0 ಮುನ್ನಡೆ ಗಳಿಸಿ ಸರಣಿ ವಶಪಡಿಸಿಕೊಂಡಿತು. ಮೊದಲೆರಡು ಪಂದ್ಯಗಳನ್ನು ಪಾಂಡೆ ಪಡೆ 65 ರನ್ನುಗಳಿಂದ ಗೆದ್ದಿತ್ತು.

ಪಾಂಡೆ ಅಬ್ಬರದ ಬ್ಯಾಟಿಂಗ್‌
ಆರಂಭಕಾರ ಅನ್ಮೋಲ್‌ಪ್ರೀತ್‌ ಸಿಂಗ್‌ ಅವರನ್ನು ಶೂನ್ಯಕ್ಕೆ ಕಳೆದುಕೊಂಡ ಬಳಿಕ ಶುಭಮನ್‌ ಗಿಲ್‌ (77) ಮತ್ತು ಶ್ರೇಯಸ್‌ ಅಯ್ಯರ್‌ (47) ಸೇರಿಕೊಂಡು ಭಾರತವನ್ನು ಆಧರಿಸಿದರು. ಇವರಿಂದ 2ನೇ ವಿಕೆಟಿಗೆ 109 ರನ್‌ ಒಟ್ಟುಗೂಡಿತು.

ಮುಂದಿನದು ಮನೀಷ್‌ ಪಾಂಡೆ ಅವರ ಕಪ್ತಾನನ ಆಟ. ಅವರು 103 ಎಸೆತಗಳಿಂದ ಸರಿಯಾಗಿ 100 ರನ್‌ ಬಾರಿಸಿದರು. ಈ ಆಕ್ರಮಣಕಾರಿ ಬ್ಯಾಟಿಂಗ್‌ ವೇಳೆ 5 ಸಿಕ್ಸರ್‌, 6 ಬೌಂಡರಿ ಸಿಡಿಯಲ್ಪಟ್ಟಿತು. ಹನುಮ ವಿಹಾರಿ 29, ಇಶಾನ್‌ ಕಿಶನ್‌ 24ರನ್‌ ಮಾಡಿದರು.

ಕೃಣಾಲ್‌ ದಾಳಿಗೆ ಕುಸಿತ
ವೆಸ್ಟ್‌ ಇಂಡೀಸಿನ ಆರಂಭ ಉತ್ತಮ ಮಟ್ಟದಲ್ಲೇ ಇತ್ತು. ಕ್ಯಾಂಬೆಲ್‌-ಆ್ಯಂಬ್ರಿಸ್‌ 51 ರನ್‌ ಒಟ್ಟುಗೂಡಿಸಿದರು. ಆದರೆ ಈ ಜೋಡಿ ಬೇರ್ಪಟ್ಟ ಬಳಿಕ ವಿಂಡೀಸಿನ ಎಂದಿನ ಕುಸಿತ ಮೊದಲ್ಗೊಂಡಿತು. ಸ್ಪಿನ್ನರ್‌ ಕೃಣಾಲ್‌ ಪಾಂಡ್ಯ ದಾಳಿಗೆ ತತ್ತರಿಸಿ ಒಂದೇ ಸಮನೆ ವಿಕೆಟ್‌ ಕಳೆದುಕೊಳ್ಳತೊಡಗಿತು. 96 ರನ್‌ ಅಂತರದಲ್ಲಿ ಎಲ್ಲ 10 ವಿಕೆಟ್‌ ಬಿತ್ತು. ಪಾಂಡ್ಯ ಸಾಧನೆ 25ಕ್ಕೆ 5 ವಿಕೆಟ್‌.10ನೇ ಕ್ರಮಾಂಕದಲ್ಲಿ ಆಡಲಿಳಿದು 34 ರನ್‌ ಮಾಡಿದ ಕಿಮೊ ಪೌಲ್‌ ಅವರದೇ ವಿಂಡೀಸ್‌ ಸರದಿಯ ಹೆಚ್ಚಿನ ಗಳಿಕೆ.

ಸಂಕ್ಷಿಪ್ತ ಸ್ಕೋರ್‌: ಭಾರತ “ಎ’-6 ವಿಕೆಟಿಗೆ 295 (ಪಾಂಡೆ 100, ಗಿಲ್‌ 77, ಅಯ್ಯರ್‌ 47, ಕಾರ್ನ್ವಾಲ್‌ 37ಕ್ಕೆ 2, ಶೆಫ‌ರ್ಡ್‌ 51ಕ್ಕೆ 2). ವೆಸ್ಟ್‌ ಇಂಡೀಸ್‌ “ಎ’-34.2 ಓವರ್‌ಗಳಲ್ಲಿ 147 (ಕಿಮೊ ಪೌಲ್‌ 34, ಆ್ಯಂಬ್ರಿಸ್‌ 30, ಕ್ಯಾಂಬೆಲ್‌ 21, ಕೆ. ಪಾಂಡ್ಯ 25ಕ್ಕೆ 5, ವಿಹಾರಿ 23ಕ್ಕೆ 2).
ಪಂದ್ಯಶ್ರೇಷ್ಠ: ಮನೀಷ್‌ ಪಾಂಡೆ.

ಟಾಪ್ ನ್ಯೂಸ್

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.