ಚಾಂಪಿಯನ್ಸ್‌ ಟ್ರೋಫಿ : ಇಂಗ್ಲೆಂಡ್‌ ಅಜೇಯ; ಬಾಂಗ್ಲಾ  ಸೆಮಿಗೆ


Team Udayavani, Jun 11, 2017, 3:45 AM IST

AP6_10_2017_000077B.jpg

ಬರ್ಮಿಂಗಂ: ಚಾಂಪಿಯನ್ಸ್‌ ಟ್ರೋಫಿ “ಎ’ ವಿಭಾಗದ ಬಹು ನಿರೀಕ್ಷಿತ ಕೊನೆಯ ಲೀಗ್‌ ಪಂದ್ಯದಲ್ಲಿ ಇಂಗ್ಲೆಂಡ್‌ ಡಿ-ಎಲ್‌ ನಿಯಮದಂತೆ ಆಸ್ಟ್ರೇಲಿಯವನ್ನು 40 ರನ್ನುಗಳಿಂದ ಸೋಲಿಸಿದೆ. ಈ ಸೋಲಿನೊಂದಿಗೆ 2 ಅಂಕಗಳಿಗೆ ಸೀಮಿತಗೊಂಡ ಆಸೀಸ್‌ ಕೂಟದಿಂದ ಹೊರಬಿದ್ದಿದ್ದು, 3 ಅಂಕ ಹೊಂದಿರುವ ಬಾಂಗ್ಲಾದೇಶ ದ್ವಿತೀಯ ಸ್ಥಾನಿಯಾಗಿ ಸೆಮಿಫೈನಲ್‌ ಪ್ರವೇಶಿಸಿದೆ.

ಟಾಸ್‌ ಸೋತು ಬ್ಯಾಟಿಂಗಿಗೆ ಇಳಿಸಲ್ಪಟ್ಟ ಆಸ್ಟ್ರೇಲಿಯ 9 ವಿಕೆಟಿಗೆ 277 ರನ್‌ ಗಳಿಸಿತು. ಇಂಗ್ಲೆಂಡ್‌ 40.2 ಓವರ್‌ಗಳಲ್ಲಿ 4ಕ್ಕೆ 240 ರನ್‌ ಗಳಿಸಿದ್ದಾಗ ಮಳೆ ಬಂದು ಪಂದ್ಯ ರದ್ದುಗೊಂಡಿತು. ಆಗ ಡಿ-ಎಲ್‌ ನಿಯಮದಂತೆ ಇಂಗ್ಲೆಂಡ್‌ 201 ಗಳಿಸಿದರೆ ಸಾಕಿತ್ತು. ಪಂದ್ಯ ನಿಂತಾಗ ಬೆನ್‌ ಸ್ಟೋಕ್ಸ್‌ 102 ರನ್‌ ಬಾರಿಸಿ ಅಜೇಯರಾಗಿದ್ದರು. ಮಾರ್ಗನ್‌ 87 ರನ್‌ ಮಾಡಿದರು.

ಆಸ್ಟ್ರೇಲಿಯಕ್ಕೆ ಆರಂಭಕಾರ ಆರನ್‌ ಫಿಂಚ್‌ (68), ನಾಯಕ ಸ್ಟೀವ್‌ ಸ್ಮಿತ್‌ (56) ಹಾಗೂ ಮಧ್ಯಮ ಸರದಿಯ ಸ್ಫೋಟಕ ಬ್ಯಾಟ್ಸ್‌ಮನ್‌ ಟ್ರ್ಯಾವಿಸ್‌ ಹೆಡ್‌ (ಔಟಾಗದೆ 71) ನೆರವಾದರು. 

ಇಂಗ್ಲೆಂಡ್‌ ಬೌಲಿಂಗ್‌ ಸರದಿಯಲ್ಲಿ ಮಿಂಚಿದವರು ವೇಗಿ ಮಾರ್ಕ್‌ ವುಡ್‌. 33ಕ್ಕೆ 4 ವಿಕೆಟ್‌ ಹಾರಿಸಿದ ವುಡ್‌ ಪಾಲಿಗೆ ಇದು ಜೀವನಶ್ರೇಷ್ಠ ಬೌಲಿಂಗ್‌ ಸಾಧನೆಯಾಗಿದೆ. ಲೆಗ್‌ಸ್ಪಿನ್ನರ್‌ ಆದಿಲ್‌ ರಶೀದ್‌ ಕೂಡ 4 ವಿಕೆಟ್‌ ಕಿತ್ತರು.
 
ವಾರ್ನರ್‌-ಫಿಂಚ್‌ 7.2 ಓವರ್‌ಗಳಲ್ಲಿ 40 ರನ್‌ ಗಳಿಸಿ ಆಸ್ಟ್ರೇಲಿಯಕ್ಕೆ ಸಾಮಾನ್ಯ ಆರಂಭ ಒದಗಿಸಿದರು. ಆಗ ವಾರ್ನರ್‌ (21) ವುಡ್‌ ಎಸೆತದಲ್ಲಿ ಕೀಪರ್‌ ಬಟ್ಲರ್‌ಗೆ ಕ್ಯಾಚ್‌ ನೀಡಿ ನಿರ್ಗಮಿಸಿರು. ಫಿಂಚ್‌-ಸ್ಮಿತ್‌ ಜೋಡಿಯಿಂದ ದ್ವಿತೀಯ ವಿಕೆಟಿಗೆ 96 ರನ್‌ ಒಟ್ಟುಗೂಡಿತು. ಫಿಂಚ್‌ 64 ಎಸೆತಗಳಿಂದ 68 ರನ್‌ (8 ಬೌಂಡರಿ), ಸ್ಮಿತ್‌ 77 ಎಸೆತ ಎದುರಿಸಿ 56 ರನ್‌ (5 ಬೌಂಡರಿ) ಹೊಡೆದರು. ಇವರಿಬ್ಬರ ನಿರ್ಗಮನದ ಬಳಿಕ ಹೆಡ್‌ ಬಿರುಸಿನ ಆಟಕ್ಕೆ ಇಳಿದರು. ಅವರ ಅಜೇಯ 71 ರನ್‌ 64 ಎಸೆತ ಗಳಿಂದ ಬಂತು (5 ಬೌಂಡರಿ, 2 ಸಿಕ್ಸರ್‌).

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.