ಬದಲಾಗಲಿಲ್ಲ ಭಾರತ ತಂಡ


Team Udayavani, Feb 15, 2017, 3:35 AM IST

14-SPRTS-6.jpg

ಮುಂಬಯಿ: ಪ್ರವಾಸಿ ಆಸ್ಟ್ರೇಲಿಯ ವಿರುದ್ಧದ ಮುಂಬರುವ ಅತಿ ಮಹತ್ವದ ಟೆಸ್ಟ್‌ ಸರಣಿಯ ಮೊದಲೆರಡು ಪಂದ್ಯಗಳಿಗೆ ಭಾರತ ತಂಡವನ್ನು ಮಂಗಳವಾರ ಪ್ರಕಟಿಸಲಾಯಿತು. ನಿರೀಕ್ಷೆಯಂತೆ ಬಾಂಗ್ಲಾದೇಶ ವಿರುದ್ಧ ಏಕೈಕ ಟೆಸ್ಟ್‌ ಪಂದ್ಯಕ್ಕೆಂದು ಆರಿಸಲಾದ ತಂಡವನ್ನೇ ಉಳಿಸಿಕೊಳ್ಳಲಾಯಿತು. 

ಇದೇ ಮೊದಲ ಸಲ ಭಾರತದ ನೆಲದಲ್ಲಿ ಟೆಸ್ಟ್‌ ಆಡಿದ ಬಾಂಗ್ಲಾದೇಶ ಸೋಮವಾರ 208 ರನ್ನುಗಳ ದೊಡ್ಡ ಸೋಲಿಗೆ ತುತ್ತಾಗಿತ್ತು. ಈ ವಿಜಯೀ ತಂಡದ ಮೇಲೆ ಆಯ್ಕೆಗಾರರು ವಿಶ್ವಾಸವಿರಿಸಿದರು. ಎಂ.ಎಸ್‌.ಕೆ. ಪ್ರಸಾದ್‌ ನೇತೃತ್ವದ ಸಮಿತಿ ಮುಂಬಯಿಯಲ್ಲಿ ಸಭೆ ಸೇರಿ ಯಾವುದೇ ಗೊಂದಲವಿಲ್ಲದೆ ಆಯ್ಕೆ ಪ್ರಕ್ರಿಯೆಯನ್ನು ಅಂತಿಮ ಗೊಳಿಸಿತು.

ಸರಣಿಯ ಮೊದಲ ಟೆಸ್ಟ್‌ ಫೆ. 23ರಿಂದ ಪುಣೆಯಲ್ಲಿ, 2ನೇ ಟೆಸ್ಟ್‌ ಮಾ. 4ರಿಂದ ಬೆಂಗಳೂರಿನಲ್ಲಿ ಆರಂಭವಾಗಲಿದೆ. ರಾಂಚಿ ಹಾಗೂ ಧರ್ಮಶಾಲಾದಲ್ಲಿ ನಡೆಯಲಿ ರುವ ಕೊನೆಯ ಎರಡು ಟೆಸ್ಟ್‌ ಗಳಿಗೆ ಮತ್ತೆ ತಂಡವನ್ನು ಅಂತಿಮ ಗೊಳಿಸಲಾಗುವುದು.

ಗಾಯಾಳುಗಳಿಗೆ ವಿಶ್ರಾಂತಿ
ಬಾಂಗ್ಲಾದೇಶ ವಿರುದ್ಧದ ಟೆಸ್ಟ್‌ ಪಂದ್ಯಕ್ಕೆಂದು ಲೆಗ್‌ಸ್ಪಿನ್ನರ್‌ ಅಮಿತ್‌ ಮಿಶ್ರಾ ಮೊದಲು ಆಯ್ಕೆಯಾಗಿ ದ್ದರು. ಆದರೆ ಅವರು ಗಾಯಾಳಾಗಿ ಹೊರಗೆ ಉಳಿಯಬೇಕಾದ್ದರಿಂದ ಚೈನಾಮನ್‌ ಬೌಲರ್‌ ಕುಲದೀಪ್‌ ಯಾದವ್‌ ಅವರನ್ನು ಆಯ್ಕೆ ಮಾಡ ಲಾಗಿತ್ತು. ಮಿಶ್ರಾ ಇನ್ನೂ ಚೇತರಿಸದ ಕಾರಣ ಯಾದವ್‌ ಅವರೇ ತಂಡದಲ್ಲಿ ಮುಂದುವರಿದಿದ್ದಾರೆ. ಹಾಗೆಯೇ ಬ್ಯಾಟ್ಸ್‌ಮನ್‌ ರೋಹಿತ್‌ ಶರ್ಮ, ಬೌಲರ್‌ ಮೊಹಮ್ಮದ್‌ ಶಮಿ ಕೂಡ ಪೂರ್ತಿ ಗುಣಮುಖರಾಗದ ಕಾರಣ ಇವರನ್ನು ಆಯ್ಕೆಗೆ ಪರಿಗಣಿಸಿಲ್ಲ. 

ಉಳಿದಂತೆ ಅಜಿಂಕ್ಯ ರಹಾನೆ, ಜಯಂತ್‌ ಯಾದವ್‌ ಮತ್ತು ಹಾರ್ದಿಕ್‌ ಪಾಂಡ್ಯ ಅವರೆಲ್ಲ ತಂಡದಲ್ಲಿ ಮುಂದುವರಿದಿದ್ದಾರೆ. ಮುರಳಿ ವಿಜಯ್‌, ಚೇತೇಶ್ವರ್‌ ಪೂಜಾರ, ಕರುಣ್‌ ನಾಯರ್‌, ಆರ್‌. ಅಶ್ವಿ‌ನ್‌, ರವೀಂದ್ರ ಜಡೇಜ ಅರ್ಹತೆಯಂತೆ ಆಯ್ಕೆಯಾದರು. 

ಬಾಂಗ್ಲಾದೇಶ ವಿರುದ್ಧ ಎರಡೂ ಇನ್ನಿಂಗ್ಸ್‌ ಗಳಲ್ಲಿ ವಿಫ‌ಲ ರಾದ ಕರ್ನಾಟಕದ ಆರಂಭಕಾರ ಕೆ.ಎಲ್‌. ರಾಹುಲ್‌ ಕೂಡ ಇವರೊಂದಿಗೆ ಕಾಣಿಸಿಕೊಂಡರು. ಹೆಚ್ಚುವರಿ ಓಪನರ್‌ ಅಭಿನವ್‌ ಮುಕುಂದ್‌ ಕೂಡ ತಂಡದಲ್ಲಿದ್ದಾರೆ.

ಕೀಪಿಂಗಿಗೆ ಸಾಹಾ
ವಿಕೆಟ್‌ ಕೀಪಿಂಗಿಗೆ “ಮೊದಲ ಆಯ್ಕೆಯ ಕೀಪರ್‌’ ವೃದ್ಧಿ ಮಾನ್‌ ಸಾಹಾ ಅವರನ್ನೇ ಮುಂದು ವರಿಸಲಾಯಿತು. ಸಾಹಾ ಬಾಂಗ್ಲಾ ವಿರುದ್ಧ ಶತಕ ಬಾರಿಸಿ ಗಮನ ಸೆಳೆದಿದ್ದರು. ವೇಗದ ಬೌಲಿಂಗ್‌ ವಿಭಾಗದಲ್ಲಿ ಇಶಾಂತ್‌ ಶರ್ಮ, ಉಮೇಶ್‌ ಯಾದವ್‌, ಭುವನೇಶ್ವರ್‌ ಕುಮಾರ್‌ ಇದ್ದಾರೆ.

ತವರಿನಲ್ಲಿ ಮೊದಲು
ಬಾಂಗ್ಲಾದೇಶ ವಿರುದ್ಧ ಮೊಳ  ಗಿಸಿದ 208 ರನ್ನುಗಳ ಅಮೋಘ ಜಯಭೇರಿಯೊಂದಿಗೆ ಸುನೀಲ್‌ ಗಾವಸ್ಕರ್‌, ಮಹೇಂದ್ರ ಸಿಂಗ್‌ ಧೋನಿ ಅವರ ನಾಯಕತ್ವದ ದಾಖಲೆ ಮುರಿದು ಮುನ್ನುಗ್ಗುತ್ತಿರುವ ವಿರಾಟ್‌ ಕೊಹ್ಲಿ ಇದೇ ಮೊದಲ ಬಾರಿಗೆ ತವರಿನಲ್ಲಿ ಆಸ್ಟ್ರೇಲಿಯ ವಿರುದ್ಧ ಟೀಮ್‌ ಇಂಡಿಯಾವನ್ನು ಮುನ್ನಡೆಸಲಿದ್ದಾರೆ. ಕೊಹ್ಲಿ ಪಾಲಿಗೆ ಇದು ಸವಾಲಿನ ಸರಣಿ.

ಭಾರತ ತಂಡ: ವಿರಾಟ್‌ ಕೊಹ್ಲಿ (ನಾಯಕ), ಮುರಳಿ ವಿಜಯ್‌, ಕೆ.ಎಲ್‌. ರಾಹುಲ್‌, ಚೇತೇಶ್ವರ್‌ ಪೂಜಾರ, ಅಜಿಂಕ್ಯ ರಹಾನೆ, ವೃದ್ಧಿಮಾನ್‌ ಸಾಹಾ (ವಿ.ಕೀ.), ಆರ್‌. ಅಶ್ವಿ‌ನ್‌, ರವೀಂದ್ರ ಜಡೇಜ, ಇಶಾಂತ್‌ ಶರ್ಮ, ಭುವನೇಶ್ವರ್‌ ಕುಮಾರ್‌, ಉಮೇಶ್‌ ಯಾದವ್‌, ಕರುಣ್‌ ನಾಯರ್‌, ಜಯಂತ್‌ ಯಾದವ್‌, ಕುಲದೀಪ್‌ ಯಾದವ್‌, ಅಭಿನವ್‌ ಮುಕುಂದ್‌, ಹಾರ್ದಿಕ್‌ ಪಾಂಡ್ಯ.

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.