Chennai ವೇಗಿ ಮುಸ್ತಫಿಜುರ್ ರೆಹಮಾನ್ ಒಂದೇ ದಿನದಲ್ಲಿ ಫಿಟ್!
Team Udayavani, Mar 19, 2024, 11:44 PM IST
ಚೆನ್ನೈ: ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವೇಗಿ, ಬಾಂಗ್ಲಾದೇಶದ ಮುಸ್ತಫಿಜುರ್ ರೆಹಮಾನ್ ಒಂದೇ ದಿನದಲ್ಲಿ ಚೇತರಿಸಿಕೊಂಡು ಐಪಿಎಲ್ ಆಡಲು ಸಜ್ಜಾಗಿದ್ದಾರೆ.
ಬಾಂಗ್ಲಾದೇಶದ ಚತ್ತೋಗ್ರಾಮ್ನಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಮೂರನೇ ಏಕದಿನ ಪಂದ್ಯದ ವೇಳೆ ಮುಸ್ತಫಿಜುರ್ ರೆಹಮಾನ್ ಸ್ನಾಯು ಸೆಳೆತಕ್ಕೆ ಒಳಗಾಗಿದ್ದರು. ಅವರನ್ನು ಸ್ಟ್ರೆಚರ್ ಮೂಲಕ ಕರೆದೊಯ್ಯಲಾಗಿತ್ತು. ಒಂದೇ ದಿನದಲ್ಲಿ ಅವರು ಢಾಕಾ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದು, ಚೆನ್ನೈಗೆ ಪ್ರಯಾಣ ಬೆಳೆಸಿದ್ದಾರೆ.
ಅವರ ಈ ದಿಢೀರ್ ಚೇತರಿಗೆ ಅಚ್ಚರಿ ಮೂಡಿಸಿದೆ. ಕೆಲವರಂತೂ, ಐಪಿಎಲ್ಗಾಗಿ ಮುಂಚಿತವಾಗಿಯೇ ರಾಷ್ಟ್ರೀಯ ತಂಡ ತೊರೆಯಲು ಮುಸ್ತಫಿಜುರ್ ಆಡಿದ ನಾಟಕವಿದು ಎಂದು ಜರೆದಿದ್ದಾರೆ. ಕಳೆದ ಹರಾಜಿನಲ್ಲಿ ಮುಸ್ತಫಿಜುರ್ ರೆಹಮಾನ್ ಅವರನ್ನು ಚೆನ್ನೈ 2 ಕೋಟಿ ರೂ.ಗೆ ಖರೀದಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ