ರಾಹುಲ್ ತ್ರಿಪಾಠಿ ಬೊಂಬಾಟ್ ಬ್ಯಾಟಿಂಗ್ ; ಚೆನ್ನೈ ಗೆಲುವಿಗೆ 168 ರನ್ ಗುರಿ
Team Udayavani, Oct 7, 2020, 9:32 PM IST
ಅಬುದಾಭಿ: ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕೊಲ್ಕೊತ್ತಾ ನೈಟ್ ರೈಡರ್ಸ್ ನಡುವಿನ ಐಪಿಎಲ್ ಕ್ರೀಡಾಕೂಟದ 21ನೇ ಪಂದ್ಯದಲ್ಲಿ ಚೆನ್ನೈ ಗೆಲುವಿಗೆ 168 ರನ್ ಗಳ ಸವಾಲು ಲಭಿಸಿದೆ.
ಟಾಸ್ ಗೆದ್ದ ಕೆಕೆಆರ್ ನಾಯಕ ದಿನೇಶ್ ಕಾರ್ತಿಕ್ ಬ್ಯಾಟಿಂಗ್ ಆಯ್ದುಕೊಂಡರು.
ಆರಂಭಿಕ ಆಟಗಾರ ರಾಹುಲ್ ತ್ರಿಪಾಠಿ ಅವರ ಬೊಂಬಾಟ್ ಬ್ಯಾಟಿಂಗ್ ನೆರವಿನಿಂದ ಕೆಕೆಆರ್ ತಂಡ ಧೋನಿ ಪಡೆ ವಿರುದ್ಧ 167 ರನ್ ಪೇರಿಸಿತು.
ಚೆನ್ನೈ ಬೌಲರ್ ಗಳ ವಿರುದ್ಧ ಉತ್ತಮವಾಗಿ ಬ್ಯಾಟ್ ಬೀಸಿದ ತ್ರಿಪಾಠಿ 51 ಎಸೆತಗಳಲ್ಲಿ 8 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 81 ರನ್ ಸಿಡಿಸಿ ಮಿಂಚಿದರು.
ಆದರೆ ಕೆಕೆಆರ್ ಬ್ಯಾಟಿಂಗ್ ಯಾದಿಯಲ್ಲಿ ಉಳಿದ ಬ್ಯಾಟ್ಸ್ ಮನ್ ಗಳು ಮಿಂಚಲು ವಿಫಲರಾದ ಕಾರಣ ಚೆನ್ನೈ ವಿರುದ್ಧ ಬೃಹತ್ ಮೊತ್ತ ಪೇರಿಸುವ ಕೆಕೆಆರ್ ಪ್ರಯತ್ನ ಫಲ ನೀಡಲಿಲ್ಲ. ಅಂತಿಮವಾಗಿ ಕೆಕೆಆರ್ ನಿಗದಿತ 20 ಓವರ್ ಗಳಲ್ಲಿ 167 ರನ್ ಗಳಿಗೆ ಆಲೌಟಾಯಿತು.
ರಾಹುಲ್ ತ್ರಿಪಾಠಿ (81) ಒಬ್ಬರನ್ನು ಹೊರತುಪಡಿಸಿ, ಶುಭಮನ್ ಗಿಲ್ (11), ನಿತೀಶ್ ರಾಣಾ (9), ಸುನಿಲ್ ನರೈನ್ (17), ಇಯಾನ್ ಮೋರ್ಗನ್ (7), ರಸೆಲ್ (2), ಕಪ್ತಾನ ದಿನೇಶ್ ಕಾರ್ತಿಕ್ (12) ಮಿಂಚಲು ವಿಫಲರಾದರು.
ಕೆಕೆಆರ್ ಇನ್ನಿಂಗ್ಸ್ ಕೊನೆಯಲ್ಲಿ ಪ್ಯಾಟ್ ಕಮಿನ್ಸ್ ಅವರು 9 ಎಸೆತಗಳಲ್ಲಿ 17 ರನ್ ಸಿಡಿಸಿ ಮಿಂಚಿದರು.
ಶಿಸ್ತಿನ ಬೌಲಿಂಗ್ ನಡೆಸಿದ ಕೆಕಆರ್ ಪರ ಡ್ವೈನ್ ಬ್ರಾವೋ 3 ವಿಕೆಟ್ ಪಡೆದರು. ಉಳಿದಂತೆ, ಸ್ಯಾಮ್ ಕರನ್, ಶಾರ್ದೂಲ್ ಠಾಕೂರ್ ಮತ್ತು ಕರಣ್ ಶರ್ಮಾ ತಲಾ 2 ವಿಕೆಟ್ ಪಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ
MUST WATCH
ಹೊಸ ಸೇರ್ಪಡೆ
Sandalwood; ‘ಫಾರೆಸ್ಟ್’ನಲ್ಲಿ ಚಿಕ್ಕಣ್ಣ & ಟೀಂ
Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು
New Jersey: ಸ್ಥಳೀಯ ಶಾಪ್ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ