ಗಾಯದ ಸಮಸ್ಯೆ: ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ಸ್ಟಾರ್‌ ಆಟಗಾರ ರವೀಂದ್ರ ಜಡೇಜ ಹೊರಕ್ಕೆ ?


Team Udayavani, May 12, 2022, 7:25 AM IST

ಗಾಯದ ಸಮಸ್ಯೆ: ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ಸ್ಟಾರ್‌ ಆಟಗಾರ ರವೀಂದ್ರ ಜಡೇಜ ಹೊರಕ್ಕೆ ?

ಮುಂಬಯಿ: ಹಾಲಿ ಚಾಂಪಿಯನ್‌ ಆಗಿರುವ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ಸ್ಟಾರ್‌ ಆಟಗಾರ ರವೀಂದ್ರ ಜಡೇಜ ಗಾಯದ ಸಮಸ್ಯೆಯಿಂದಾಗಿ ಐಪಿಎಲ್‌ನಿಂದ ಹೊರಬಿದ್ದಿದ್ದಾರೆ.

ಆರ್‌ಸಿಬಿ ತಂಡದೆದುರಿನ ಪಂದ್ಯದ ವೇಳೆ ಫೀಲ್ಡಿಂಗ್‌ ಮಾಡುತ್ತಿದ್ದ ಸಂದರ್ಭ ಅವರ ಕೈ ಮತ್ತು ಭುಜಕ್ಕೆ ಗಾಯವಾಗಿತ್ತು. ಆಬಳಿಕ ಅವರು ಫೀಲ್ಡಿಂಗ್‌ ಮುಂದುವರಿಸಿದ್ದರೂ ಡೆಲ್ಲಿ ವಿರುದ್ಧದ ಪಂದ್ಯದಿಂದ ಹೊರಗುಳಿದಿದ್ದರು. ಈ ಪಂದ್ಯವನ್ನು ಚೆನ್ನೈ ಸುಲಭವಾಗಿ ಗೆದ್ದಿತ್ತು.

ಜಡೇಜ ಅವರಿಗಾದ ಗಾಯವನ್ನು ಚೆನ್ನೈ ತಂಡ ಗಂಭೀರವಾಗಿ ಪರಿಗಣಿಸುತ್ತಿದೆ. ಆದರೆ ಅವರಿನ್ನೂ ಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಆದರೆ ಈ ಐಪಿಎಲ್‌ನಲ್ಲಿ ಅವರ ನಿರ್ವಹಣೆಯೂ ಸಾಧಾರಣ ಮಟ್ಟದಲ್ಲಿದೆ. ಆಡಿದ 10 ಪಂದ್ಯಗಳಿಂದ ಅವರು ಕೇವಲ 116 ಮತ್ತು 5 ವಿಕೆಟ್‌ ಉರುಳಿಸಿದ್ದಾರೆ.

ಈ ಬಾರಿಯ ಐಪಿಎಲ್‌ ಆರಂಭವಾಗುವ ಮೊದಲು ಚೆನ್ನೈ ತಂಡದ ನಾಯಕತ್ವದ ಜವಾಬ್ದಾರಿಯನ್ನು ಜಡೇಜ ಅವರಿಗೆ ವಹಿಸಲಾಗಿತ್ತು. ನಾಯಕತ್ವದ ಜವಾಬ್ದಾರಿಯಿಂದಾಗಿ ಅವರ ವೈಯಕ್ತಿಕ ನಿರ್ವಹಣೆ ಮೇಲೆ ಪರಿಣಾಮ ಬಿತ್ತು. ಬ್ಯಾಟಿಂಗ್‌ನಲ್ಲಿ ಅವರ ವೈಫ‌ಲ್ಯ ಮುಂದುವರಿಯಿತು. ಕೊನೆಗೆ ಇದರಿಂದ ಬೇಸತ್ತ ಅವರು ನಾಯಕತ್ವವನ್ನು ತ್ಯಜಿಸಲು ನಿರ್ಧರಿಸಿದರು. ಹೀಗಾಗಿ ಧೋನಿ ಅವರಿಗೆ ಮತ್ತೆ ನಾಯಕತ್ವದ ಜವಾಬ್ದಾರಿಯನ್ನು ವಹಿಸಲಾಯಿತು.

ಚೆನ್ನೈ ತಂಡವು ಗುರುವಾರ ಮುಂಬೈ ಇಂಡಿಯನ್ಸ್‌ ತಂಡವನ್ನು ಎದುರಿಸಲಿದೆ. ಈ ಪಂದ್ಯದಲ್ಲಿ ಜಡೇಜ ಆಡುವುದಿಲ್ಲ, ಲೀಗ್‌ ಹಂತದ ಇನ್ನುಳಿದ ಎರಡು ಪಂದ್ಯಗಳಲ್ಲಿ ಚೆನ್ನೈ ತಂಡವು ಗುಜರಾತ್‌ ಮತ್ತು ರಾಜಸ್ಥಾನ ತಂಡವನ್ನು ಎದುರಿಸಲಿದೆ. ಈ ಮೂರು ಪಂದ್ಯಗಳಲ್ಲಿ ತಂಡವು ಗೆದ್ದರೆ ಒಟ್ಟಾರೆ 14 ಅಂಕ ಗಳಿಸಲಿದೆ. ಹೀಗಿದ್ದರೂ ತಂಡವು ಪ್ಲೇ ಆಫ್ಗೆ ತೇರ್ಗಡೆಯಾಗಬೇಕಾದರೆ ಆರ್‌ಸಿಬಿ ಮತ್ತು ರಾಜಸ್ಥಾನ ತಂಡಗಳ ಪರಿಸ್ಥಿತಿಯನ್ನು ಗಮನಿಸಬೇಕಾಗಿದೆ. ಯಾಕೆಂದರೆ ಈ ಎರಡೂ ತಂಡಗಳು ಈಗಾಗಲೇ 14 ಅಂಕ ಗಳಿಸಿವೆ. ಇನ್ನು ಒಂದು ಪಂದ್ಯದಲ್ಲಿ ಆರ್‌ಸಿಬಿ ಅಥವಾ ರಾಜಸ್ಥಾನ ಗೆದ್ದರೆ ಚೆನ್ನೈಯ ಎಲ್ಲ ಪ್ರಯತ್ನಗಳು ವಿಫ‌ಲವಾಗಲಿವೆ.

ಜಡೇಜ ಐಪಿಎಲ್‌ ಸಾಧನೆ
ಐಪಿಎಲ್‌ನಲ್ಲಿ 33ರ ಹರೆಯದ ಜಡೇಜ 210 ಪಂದ್ಯಗಳನ್ನಾಡಿದ್ದು 26.62 ಸರಾಸರಿಯಂತೆ 2502 ರನ್‌ ಗಳಿಸಿದ್ದಾರೆ. ಎರಡು ಅರ್ಧಶತಕ ಬಾರಿಸಿರುವ ಅವರು 132 ವಿಕೆಟ್‌ ಹಾರಿಸಿದ ಸಾಧನೆಯನ್ನು ಕೂಡ ಮಾಡಿದ್ದಾರೆ.

ಟಾಪ್ ನ್ಯೂಸ್

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Shotgun

Shotgun ಶೂಟಿಂಗ್‌ ಅರ್ಹತಾ ಸುತ್ತಿನಲ್ಲಿ ಕರಣ್‌: ವಿವಾದ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.