ಚೆನ್ನೈ-ಡೆಲ್ಲಿ: ಲೆಕ್ಕದ ಭರ್ತಿಯ ಪಂದ್ಯ


Team Udayavani, May 18, 2018, 6:25 AM IST

chennai-super-kings.jpg

ಹೊಸದಿಲ್ಲಿ: ಈಗಾಗಲೇ ಕೂಟದಿಂದ ಹೊರಬಿದ್ದಿರುವ ಡೆಲ್ಲಿ ಡೇರ್‌ಡೆವಿಲ್ಸ್‌ ಹಾಗೂ ಪ್ಲೇ-ಆಫ್ಗೆ ಲಗ್ಗೆ ಇರಿಸಿರುವ ಚೆನ್ನೈ ಸೂಪರ್‌ ಕಿಂಗ್ಸ್‌ ನಡುವಿನ “ಲೆಕ್ಕದ ಭರ್ತಿ’ಯ ಲೀಗ್‌ ಪಂದ್ಯ ಶುಕ್ರವಾರ ರಾತ್ರಿ ಕೋಟ್ಲಾ ಅಂಗಳದಲ್ಲಿ ಸಾಗಲಿದೆ.

2 ವರ್ಷಗಳ ನಿಷೇಧ ಮುಗಿಸಿ ಬಂದಿರುವ ಧೋನಿ ಸಾರಥ್ಯದ ಚೆನ್ನೈ ತಂಡ ಅಮೋಘ ಪ್ರದರ್ಶನ ಕಾಯ್ದುಕೊಂಡು ಬಂದಿದ್ದು, 12 ಪಂದ್ಯಗಳಿಂದ 16 ಅಂಕ ಸಂಪಾದಿಸಿ ದ್ವಿತೀಯ ಸ್ಥಾನ ಅಲಂಕರಿಸಿದೆ. ಇನ್ನೆರಡೂ ಪಂದ್ಯ ಗೆದ್ದರೆ ಲೀಗ್‌ ಹಂತದ ಅಗ್ರಸ್ಥಾನಿಯಾಗುವ ಎಲ್ಲ ಅವಕಾಶಗಳಿವೆ. ಆದರೆ 12ರಲ್ಲಿ ಕೇವಲ 3 ಪಂದ್ಯಗಳನ್ನಷ್ಟೇ ಜಯಿಸಿರುವ ಡೆಲ್ಲಿ ಪಾಲಿಗೆ ಇಲ್ಲಿನ ಫ‌ಲಿತಾಂಶದಿಂದ ಯಾವುದೇ ಲಾಭವಿಲ್ಲ. ಗೆದ್ದು ಒಂದಿಷ್ಟು ಪ್ರತಿಷ್ಠೆ ಉಳಿಸಿಕೊಳ್ಳುವುದಷ್ಟೇ ಶ್ರೇಯಸ್‌ ಅಯ್ಯರ್‌ ಬಳಗದ ಮುಂದಿರುವ ಗುರಿ.

ಪುಣೆಯಲ್ಲಿ ನಡೆದ ಇತ್ತಂಡಗಳ ಮೊದಲ ಸುತ್ತಿನ ಪಂದ್ಯ ಟಿ20 ಪಂದ್ಯದ ಅಷ್ಟೂ ರೋಮಾಂಚನವನ್ನು ತೆರೆದಿರಿಸಿತ್ತು. ಚೆನ್ನೈ 4 ವಿಕೆಟಿಗೆ 211 ರನ್‌ ಪೇರಿಸಿದರೆ, ಡೆಲ್ಲಿ 5ಕ್ಕೆ 198 ರನ್‌ ಬಾರಿಸಿ 13 ರನ್ನುಗಳ ಸೋಲನುಭವಿಸಿತ್ತು. ಇದಕ್ಕೆ ತವರಿನಂಗಳದಲ್ಲಿ ಸೇಡು ತೀರಿಸಿಕೊಳ್ಳುವುದು ಡೆಲ್ಲಿ ಮುಂದಿರುವ ಮತ್ತೂಂದು ಸವಾಲು.

ಯುವಕರಿಗೆ ಅವಕಾಶವಿತ್ತ ಡೆಲ್ಲಿ
ಆರ್‌ಸಿಬಿ ಎದುರಿನ ಕಳೆದ ಪಂದ್ಯದಲ್ಲಿ ಡೆಲ್ಲಿ ಮೂವರು ಯುವ ಆಟಗಾರರಿಗೆ ಐಪಿಎಲ್‌ ಕ್ಯಾಪ್‌ ನೀಡಿತ್ತು. ನೇಪಾಲದ ಸಂದೀಪ್‌ ಲಮಿಚಾನೆ, ದಕ್ಷಿಣ ಆಫ್ರಿಕಾದ ಜೂನಿಯರ್‌ ಡಾಲ ಮತ್ತು ಭಾರತದ ಅಭಿಷೇಕ್‌ ಶರ್ಮ. ಇವರಲ್ಲಿ ಲಮಿಚಾನೆ ಮತ್ತು ಅಭಿಷೇಕ್‌ ಸಾಧನೆ ಅಮೋಘ ಮಟ್ಟದಲ್ಲಿತ್ತು. ಆದರೆ ಡಾಲಾ 3 ಓವರ್‌ಗಳಲ್ಲಿ 34 ರನ್‌ ನೀಡಿ ವಿಕೆಟ್‌ ಕೀಳುವಲ್ಲಿ ವಿಫ‌ಲರಾಗಿದ್ದರು.

ಕೋಟ್ಲಾ ಅಂಗಳದಲ್ಲೇ ನಡೆದ ಈ ಪಂದ್ಯದಲ್ಲಿ ವೀಕ್ಷಕರು ಡೆಲ್ಲಿಗಿಂತ ಹೆಚ್ಚಾಗಿ ವಿರಾಟ್‌ ಕೊಹ್ಲಿ ಸಾರಥ್ಯದ ಆರ್‌ಸಿಬಿಗೆ ಹೆಚ್ಚಿನ ಬೆಂಬಲ ನೀಡಿದ್ದರು. ಕೊಹ್ಲಿ ನಮ್ಮವ ಎಂಬುದೇ ಇದಕ್ಕೆ ಕಾರಣ. ಆದರೆ ಶುಕ್ರವಾರ ರಾತ್ರಿ ಚೆನ್ನೈ ಬದಲು ತವರಿನ ಡೆಲ್ಲಿ ತಂಡಕ್ಕೇ ಹೆಚ್ಚಿನ ಪ್ರೋತ್ಸಾಹ ಲಭಿಸಬಹುದು. ಚೆನ್ನೈ ತಂಡದಲ್ಲಿರುವ ದಿಲ್ಲಿಯ ಆಟಗಾರರೆಂದರೆ ಧ್ರುವ ಶೋರಿ, ಕ್ಷಿತಿಜ್‌ ಶರ್ಮ, ಚೈತನ್ಯ ಬಿಶ್ನೋಯಿ ಮಾತ್ರ. ಆದರೆ ಇವರ್ಯಾರೂ ಸ್ಟಾರ್‌ ಆಟಗಾರರಲ್ಲ. ಅಲ್ಲದೇ ಇವರಿಗೆ ಅವಕಾಶ ಲಭಿಸುವ ಸಾಧ್ಯತೆ ಕೂಡ ಇಲ್ಲ.

ಪೃಥ್ವಿ ಶಾ, ರಿಷಬ್‌ ಪಂತ್‌, ಶ್ರೇಯಸ್‌ ಅಯ್ಯರ್‌ ಅವರೆಲ್ಲ ಬ್ಯಾಟಿಂಗ್‌ ಸ್ಟಾರ್‌ಗಳಾಗಿದ್ದು, ಇವರ ಆಟವನ್ನು ದಿಲ್ಲಿ ವೀಕ್ಷಕರು ಕಣ್ತುಂಬಿಸಿಕೊಳ್ಳಬಹುದು.

ಚೆನ್ನೈ ಪರಿಪೂರ್ಣ ಪ್ರದರ್ಶನ
ಚೆನ್ನೈ ಈ ಪಂದ್ಯಾವಳಿಯಲ್ಲಿ ಪರಿಪೂರ್ಣ ಸಾಮರ್ಥ್ಯವನ್ನು ಪ್ರದರ್ಶಿಸುತ್ತ ಬಂದಿದೆ. 535 ರನ್‌ ಪೇರಿಸಿರುವ ಆರಂಭಕಾರ ಅಂಬಾಟಿ ರಾಯುಡು ತಂಡದ ಪ್ರಮುಖ ಆಟಗಾರನಾಗಿದ್ದು, ಇವರ ಹಾಗೂ ಶೇನ್‌ ವಾಟ್ಸನ್‌ ಜೋಡಿಯ ಓಪನಿಂಗ್‌ ಚೆನ್ನೈ ಇನ್ನಿಂಗ್ಸಿಗೆ ಭದ್ರ ಅಡಿಪಾಯ ನಿರ್ಮಿಸುತ್ತ ಬಂದಿದೆ. ರೈನಾ, ಧೋನಿ, ಡು ಪ್ಲೆಸಿಸ್‌, ಬ್ರಾವೊ ಬ್ಯಾಟಿಂಗ್‌ ಸರದಿಯ ಆಪಾಯಕಾರಿ ಆಟಗಾರರು.ಪುಣೆಯಲ್ಲಿ ನಡೆದ ಕಳೆದ ಪಂದ್ಯದಲ್ಲಿ ಹೈದರಾಬಾದ್‌ಗೆ 8 ವಿಕೆಟ್‌ಗಳ ಸೋಲುಣಿಸಿದ್ದು ಚೆನ್ನೈ ತಂಡದ ಪ್ರಚಂಡ ಫಾರ್ಮ್ಗೆ ಸಾಕ್ಷಿ. ಸಣ್ಣ ಅಂಗಳವಾದ ಕೋಟ್ಲಾದಲ್ಲಿ ಇತ್ತಂಡಗಳ ಬ್ಯಾಟಿಂಗ್‌ ಮೇಲುಗೈ ಸಾಧಿಸುವ ನಿರೀಕ್ಷೆ ದಟ್ಟವಾಗಿದೆ.

ಟಾಪ್ ನ್ಯೂಸ್

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

1-eweqw

RR vs KKR : ನಂ. 1, 2 ತಂಡಗಳ ನಡುವೆ ಬಿಗ್‌ ಫೈಟ್‌

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.