ಮತ್ತೆ ಸ್ಫೋಟಕ ಶತಕ ಸಿಡಿಸಿದ ಚೇತೇಶ್ವರ ಪೂಜಾರ


Team Udayavani, Aug 24, 2022, 11:32 PM IST

ಮತ್ತೆ ಸ್ಫೋಟಕ ಶತಕ ಸಿಡಿಸಿದ ಚೇತೇಶ್ವರ ಪೂಜಾರ

ಲಂಡನ್‌: ಭಾರತೀಯ ಕ್ರಿಕೆಟಿಗ ಚೇತೇಶ್ವರ ಪೂಜಾರ ಅಂದ ಕೂಡಲೇ ನೆನಪಿಗೆ ಬರುವುದು ಟೆಸ್ಟ್‌ ಕ್ರಿಕೆಟ್‌!

ಟೆಸ್ಟ್‌ ಅಂದರೆ ಮೊದಲೇ ನಿಧಾನ, ಇಲ್ಲವರು ಇನ್ನಷ್ಟು ನಿಧಾನವಾಗಿ ಆಡಿ ಟೀಕೆಗೊಳಗಾಗಿದ್ದರು. ಅಂತಹ ಪೂಜಾರ ಐಪಿಎಲ್‌ ತಂಡಗಳಿಗೆ ಆಯ್ಕೆಯಾದರೂ, 11ರ ಬಳಗದಲ್ಲಿ ಸ್ಥಾನ ಪಡೆದಿದ್ದು ಹುಡುಕಿದರೆ ಮಾತ್ರ ಸಿಗುವಂತಹ ಘಟನೆ!

ಈಗವರು ಬದಲಾಗಿದ್ದಾರೆ, ಎಷ್ಟು ಬದಲಾಗಿ ದ್ದಾರೆ ಎಂದರೆ ಅತ್ಯಂತ ಸ್ಫೋಟಕ ಆಟಗಾರರನ್ನು ಸರಿಗಟ್ಟುವಂತೆ ಬದಲಾಗಿದ್ದಾರೆ. ಇದಕ್ಕೆ ಉದಾಹರಣೆ ಇಂಗ್ಲೆಂಡ್‌ನ‌ಲ್ಲಿ ನಡೆಯುತ್ತಿರುವ ರಾಯಲ್‌ ಲಂಡನ್‌ ಏಕದಿನ ಕಪ್‌.

ಈ ಕೂಟದಲ್ಲಿ ಅವರು ಮೂರು ಶತಕ ಗಳಿಸಿದ್ದಾರೆ. ಅದರಲ್ಲಿ ಸತತ ಎರಡು ಶತಕವೂ ಸೇರಿದೆ. ಮಂಗಳವಾರ ಸಸೆಕ್ಸ್‌ ತಂಡದ ನಾಯಕನಾಗಿ ಅವರು ಕೇವಲ 90 ಎಸೆತಗಳಲ್ಲಿ 132 ರನ್‌ ಚಚ್ಚಿದ್ದಾರೆ. ಇದರಲ್ಲಿ 20 ಬೌಂಡರಿ, 2 ಸಿಕ್ಸರ್‌ ಸೇರಿವೆ. ಇದರ ಪರಿಣಾಮ ಸಸೆಕ್ಸ್‌ 50 ಓವರ್‌ಗಳಲ್ಲಿ 4 ವಿಕೆಟ್‌ ಕಳೆದುಕೊಂಡು 400 ರನ್‌ ಕಲೆಹಾಕಿತು. ಮಿಡ್ಲ್ಸೆಕ್ಸ್‌ 243 ರನ್‌ಗಳಿಗೆ ಆಲೌಟಾಗಿ ಸೋತುಹೋಯಿತು.

ಬರೀ ಇಷ್ಟೇ ಆಗಿದ್ದರೆ ಏನೋ ಆಯಿತು ಎಂದುಕೊಳ್ಳಬಹುದಿತ್ತು. ಆದರೆ ಹಾಗಾಗಿಲ್ಲ. ಆ. 12ರಂದು ಪೂಜಾರ ವಾರ್ವಿಕ್‌ಶೈರ್‌ ಎದುರು ಅಬ್ಬರಿಸಿದ್ದರು. ಅಲ್ಲಿ 79 ಎಸೆತಗಳಲ್ಲಿ 107 ರನ್‌ ಚಚ್ಚಿದ್ದರು. ಆ.14ರಂದು ಸರ್ರೆ ಎದುರು ಕೇವಲ 131 ಎಸೆತಗಳಲ್ಲಿ 174 ರನ್‌ ಚಚ್ಚಿದ್ದರು.

ಮುಂದಿನೆರಡು ಪಂದ್ಯಗಳಲ್ಲಿ ಕ್ರಮವಾಗಿ 49, 66 ರನ್‌ ಗಳಿಸಿದ್ದರು. ಎಲ್ಲೂ ಅವರು ನಿಧಾನವಾಗಿ ಆಡಿಲ್ಲ. ಇದು ಸ್ಪಷ್ಟವಾಗಿ ಪೂಜಾರ ತಮ್ಮ ಟೀಕಾಕಾರರಿಗೆ ಬ್ಯಾಟ್‌ನಿಂದಲೇ ನೀಡಿದ ಉತ್ತರ. ಮುಂದವರು ಐಪಿಎಲ್‌ ಫ್ರಾಂಚೈಸಿಗಳ ಪಾಲಿನ ಮೆಚ್ಚಿನ ಆಟಗಾರರಾಗಿ ಆಯ್ಕೆಯಾಗುವುದು ಖಚಿತ ವೆಂದು ಹೇಳಬಹುದು.

ಟಾಪ್ ನ್ಯೂಸ್

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.