ಚೀನ ಓಪನ್‌: ಶ್ರೀಕಾಂತ್‌, ಸಿಂಧು ಪರಾಭವ


Team Udayavani, Sep 22, 2018, 6:00 AM IST

c-9.jpg

ಚಾಂಗ್‌ಝೂ: ಭಾರತದ ಭರವಸೆಯ ಶಟ್ಲರ್‌ಗಳಾದ ಕೆ. ಶ್ರೀಕಾಂತ್‌ ಹಾಗೂ ಪಿ. ವಿ. ಸಿಂಧು ಕ್ವಾರ್ಟರ್‌ ಫೈನಲ್‌ನಲ್ಲಿ ಸೋತು ಚೀನ ಓಪನ್‌ ಬ್ಯಾಡ್ಮಿಂಟನ್‌ ಟೂರ್ನಿಯಿಂದ ಹೊರಬಿದ್ದಿದ್ದಾರೆ. ಇದರೊಂದಿಗೆ ಈ ಪಂದ್ಯಾವಳಿಯಲ್ಲಿ ಭಾರತದ ಹೋರಾಟ ಅಂತ್ಯಗೊಂಡಿದೆ.

ಪುರುಷರ ಸಿಂಗಲ್ಸ್‌ ವಿಭಾಗದ ಕ್ವಾರ್ಟರ್‌ ಫೈನಲ್‌ ಪಂದ್ಯದಲ್ಲಿ ಕೆ. ಶ್ರೀಕಾಂತ್‌ ಹಾಲಿ ವಿಶ್ವ ಚಾಂಪಿ ಯನ್‌ ಜಪಾನಿನ ಕೆಂಟೊ ಮೊಮೊಟ ವಿರುದ್ಧ 9-21, 11-21 ಗೇಮ್‌ಗಳಿಂದ ಸೋತರು. ಇದು ಮೊಮೊಟ ವಿರುದ್ಧ ಆಡಿದ 10 ಮುಖಾಮುಖಿಗಳಲ್ಲಿ ಶ್ರೀಕಾಂತ್‌ ಅನುಭವಿಸಿದ 7ನೇ ಸೋಲು. ಇದಕ್ಕೂ ಮುನ್ನ ಜೂನ್‌ನಲ್ಲಿ ನಡೆದ ಮಲೇಶ್ಯ ಓಪನ್‌, ಜುಲೈನಲ್ಲಿ ನಡೆದ ಇಂಡೋನೇಶ್ಯ ಓಪನ್‌ ಟೂರ್ನಿಗಳಲ್ಲೂ ಮೊಮೊಟ ವಿರುದ್ಧ  ಶ್ರೀಕಾಂತ್‌ ಸೋಲನುಭವಿಸಿದ್ದರು. 

ಆರಂಭಿಕ ಗೇಮ್‌ನಲ್ಲಿಯೇ ಮುಗ್ಗರಿಸಿದ ಶ್ರೀಕಾಂತ್‌ ಲಯಕಂಡುಕೊಳ್ಳುವಲ್ಲಿ ವಿಫ‌ಲರಾದರು. ಮೊಮೊಟ ಏಕಪ್ರಕಾರವಾಗಿ ಅಂಕ ಗಳಿಸುತ್ತ ಹೋದರೆ, ಶ್ರೀಕಾಂತ್‌ ಒಂದೊಂದು ಅಂಕಕ್ಕೂ ಪರದಾಡಿದರು. ಎರಡನೇ ಗೇಮ್‌ನಲ್ಲೂ ಶ್ರಿಕಾಂತ್‌ ಜಪಾನೀ ಆಟಗಾರನಿಗೆ ಸಾಟಿಯಾಗಲಿಲ್ಲ. ಹೀಗಾಗಿ ಇದೊಂದು ಏಕಪಕ್ಷೀಯ ಪಂದ್ಯವೆನಿಸಿಕೊಂಡಿತು.

ಮತ್ತೆ ಮುಗ್ಗರಿಸಿದ ಸಿಂಧು
ಅನಂತರ ನಡೆದ ವನಿತಾ ಸಿಂಗಲ್ಸ್‌ ವಿಭಾಗದಲ್ಲಿ ಪಿ.ವಿ. ಸಿಂಧು ಚೀನದ ಚೆನ್‌ ಯೂಫಿ ವಿರುದ್ಧ 11-21, 21-11, 15-21 ಗೇಮ್‌ ಗ ಳಿಂದ ಸೋತರು.  ಈ ಕೂಟಕ್ಕೂ ಮುನ್ನ ಚೆನ್‌ ಅವರನ್ನು 6 ಬಾರಿ ಎದುರಿಸಿದ್ದ ಸಿಂಧು 4ರಲ್ಲಿ ಗೆಲುವು ಸಾಧಿಸಿದ್ದರು. ಆದರೆ ಇಲ್ಲಿ ತಮ್ಮ  ತಪ್ಪುಗಳನ್ನು ಸರಿಪಡಿಸಿಕೊಳ್ಳುವಲ್ಲಿ ವಿಫ‌ಲರಾದ ಸಿಂಧು ಸೆಮಿಫೈನಲ್‌ ಪ್ರವೇಶ ತಪ್ಪಿಸಿಕೊಂಡರು. 

ಮೊದಲ ಗೇಮ್‌ನಲ್ಲಿ  6-3 ಅಂಕಗಳ ಮುನ್ನಡೆ ಕಾಯ್ದುಕೊಂಡಿದ್ದ ಚೆನ್‌, ಭಾರತೀಯಳಿಗೆ ಅಂಕಗಳಿಸಲು ಹೆಚ್ಚಿನ ಅವಕಾಶವನ್ನೇ ನೀಡಲಿಲ್ಲ. ಆದರೆ ದ್ವಿತೀಯ ಗೇಮ್‌ನಲ್ಲಿ ಸ್ಥಿರತೆ ಕಾಪಾಡಿಕೊಳ್ಳಲು ವಿಫ‌ಲರಾದ ಚೆನ್‌ಗೆ ಪ್ರತ್ಯುತ್ತರ ನೀಡಿದ ಸಿಂಧು ಹೋರಾಟವನ್ನು ಸಮಬಲಕ್ಕೆ ತರುವಲ್ಲಿ ಯಶಸ್ವಿಯಾದರು. ನಿರ್ಣಾಯಕ ಅಂತಿಮ ಗೇಮ್‌ನಲ್ಲಿ ಚೆನ್‌ ಯೂಫಿ ಮತ್ತೆ ಚೆಂದದ ಪ್ರದರ್ಶನ ನೀಡಿದರು. ಸಿಂಧು ಮತ್ತೆ ಮಂಕಾದರು. ಇದನ್ನು 21-15ರಿಂದ ವಶಪಡಿಸಿಕೊಂಡ ಚೀನೀ ಆಟಗಾರ್ತಿ ಸೆಮಿಫೈನಲಿಗೆ ನೆಗೆದರು.

ಟಾಪ್ ನ್ಯೂಸ್

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.