ಚೀನಾ ಓಪನ್‌ ಬ್ಯಾಡ್ಮಿಂಟನ್‌: ಸಿಂಧು ಮೇಲೆ ನಿರೀಕ್ಷೆ

ಸೈನಾ ಮೇಲೂ ಭರವಸೆ

Team Udayavani, Sep 16, 2019, 9:45 PM IST

sindhu

ಚಾಂಗ್‌ಜೂ (ಚೀನ): ಕಳೆದ ತಿಂಗಳಷ್ಟೇ ಸ್ವಿಜರ್ಲೆಂಡ್‌ನ‌ಲ್ಲಿ ನಡೆದ ವಿಶ್ವ ಚಾಂಪಿಯನ್‌ಶಿಪ್‌ ಚಿನ್ನ ಗೆದ್ದ ಬಳಿಕ ನೂತನ ಎತ್ತರ ತಲುಪಿರುವ ಪಿ.ವಿ. ಸಿಂಧು, ಮಂಗಳವಾರದಿಂದ ಆರಂಭವಾಗಲಿರುವ (1,000,000 ಡಾಲರ್‌ ಬಹುಮಾನ) ಚೀನಾ ಓಪನ್‌ ಬ್ಯಾಡ್ಮಿಂಟನ್‌ನಲ್ಲಿ ಭಾರತದ ಪ್ರಮುಖ ಭರವಸೆಯಾಗಿ ಗೋಚರಿಸಿದ್ದಾರೆ.

ವಿಶ್ವ ಚಾಂಪಿಯನ್‌ಶಿಪ್‌ ಫೈನಲ್‌ ಪ್ರವೇಶಿಸಿದ 3ನೇ ಪ್ರಯತ್ನದಲ್ಲಿ ಸಿಂಧು ಇತಿಹಾಸ ನಿರ್ಮಿಸುವಲ್ಲಿ ಯಶಸ್ವಿಯಾಗಿದ್ದರು. ತಾಂತ್ರಿಕವಾಗಿ ತಮ್ಮ ಆಟದಲ್ಲಿ ಬಹಳಷ್ಟು ಸುಧಾರಣೆ ತಂದುಕೊಂಡ ಸಿಂಧು, ಚೀನ ಓಪನ್‌ನಲ್ಲೂ ಇದೇ ನಿರ್ವಹಣೆಯನ್ನು ಮುಂದುವರಿಸುವ ನಿರೀಕ್ಷೆ ಇಡಲಾಗಿದೆ. 2016ರಲ್ಲಿ ಚೀನ ಓಪನ್‌ ಪ್ರಶಸ್ತಿ ಗೆದ್ದ ಹಿರಿಮೆಯೂ ಭಾರತೀಯಳ ಪಾಲಿಗಿದೆ.

ಕಠಿಣ ಎದುರಾಳಿ :
ಆದರೆ ವಿಶ್ವ ರ್‍ಯಾಂಕಿಂಗ್‌ನಲ್ಲಿ 5ನೇ ಸ್ಥಾನದಲ್ಲಿರುವ ಪಿ.ವಿ. ಸಿಂಧು ಪ್ರಥಮ ಸುತ್ತಿನಲ್ಲೇ ಕಠಿಣ ಎದುರಾಳಿ ವಿರುದ್ಧ ಆಡಬೇಕಿದೆ. ಇಲ್ಲಿ ಆತಿಥೇಯ ದೇಶದ, ಮಾಜಿ ನಂಬರ್‌ ವನ್‌ ಹಾಗೂ ಮಾಜಿ ಒಲಿಂಪಿಕ್‌ ಸ್ವರ್ಣ ವಿಜೇತೆ ಲೀ ಕ್ಸುರುಯಿ ಎದುರಾಗಲಿದ್ದಾರೆ. ಸ್ವಾರಸ್ಯವೆಂದರೆ, ಸಿಂಧು ಜಾಗತಿಕ ಬ್ಯಾಡ್ಮಿಂಟನ್‌ನಲ್ಲಿ ಸುದ್ದಿಯಾದದ್ದೇ ಕ್ಸುರುಯಿ ಅವರನ್ನು ಮಣಿಸುವ ಮೂಲಕ. ಅದು 2012ರ ಚೀನ ಮಾಸ್ಟರ್ ಕೂಟವಾಗಿತ್ತು. ಆಗ ಕ್ಸುರುಯಿ ಒಲಿಂಪಿಕ್‌ ಚಾಂಪಿಯನ್‌ ಆಗಿದ್ದರು!

ಅನಂತರ ಸಿಂಧು ಮೇಲೇರುತ್ತ ಹೋದರೆ, ಕ್ಸುರುಯಿ ಗಾಯದ ಹೊಡೆತಕ್ಕೆ ತತ್ತರಿಸಿದರು. ಸದ್ಯ ಇವರಿಬ್ಬರ ಮಧ್ಯೆ 3-3 ಸಮಬಲದ ದಾಖಲೆ ಇದೆ. ವರ್ಷಾರಂಭದ ಇಂಡೋನೇಶ್ಯ ಮಾಸ್ಟರ್ ಕೂಟದಲ್ಲಿ ಕ್ಸುರುಯಿ ವಿರುದ್ಧ ಸಿಂಧು ಜಯ ಸಾಧಿಸಿದ್ದರು. ಮೊದಲ ಸುತ್ತು ದಾಟಿದರೆ ಸಿಂಧು ಕೆನಡಾದ ಮೈಕಲ್‌ ಲೀ ವಿರುದ್ಧ ಆಡುವ ಸಾಧ್ಯತೆ ಇದೆ. ಕ್ವಾರ್ಟರ್‌ ಫೈನಲ್‌ನಲ್ಲಿ ಆಲ್‌ ಇಂಗ್ಲೆಂಡ್‌ ಬ್ಯಾಡ್ಮಿಂಟನ್‌ ಚಾಂಪಿಯನ್‌, ಚೀನದ ಚೆನ್‌ ಯುಫಿ ಎದುರಾಗಬಹುದು.

ಸೈನಾಗೆ ಸವಾಲು
ಸೈನಾ ನೆಹ್ವಾಲ್‌ ಕೂಡ ರೇಸ್‌ನಲ್ಲಿದ್ದು, ಮೊದಲ ಸುತ್ತಿನಲ್ಲಿ ಥಾಯ್ಲೆಂಡ್‌ನ‌ ಬುಸನಾನ್‌ ಒಂಗ್ಬಾಮ್ರುಂಗಫಾನ್‌ ವಿರುದ್ಧ ಆಡಲಿದ್ದಾರೆ. ಕ್ವಾರ್ಟರ್‌ ಫೈನಲ್‌ ತಲುಪಿದರೆ ಚೈನೀಸ್‌ ತೈಪೆಯ ತೈ ಜು ಯಿಂಗ್‌ ಸವಾಲಿಗೆ ಉತ್ತರಿಸಬೇಕಾಗಬಹುದು.

ಆದರೆ ಕೆ. ಶ್ರೀಕಾಂತ್‌, ಎಚ್‌.ಎಸ್‌. ಪ್ರಣಯ್‌ ಅನುಪಸ್ಥಿತಿ ಭಾರತದ ಪುರುಷರ ವಿಭಾಗದ ಸ್ಪರ್ಧೆಯನ್ನು ತುಸು ಕಳೆಗುಂದುವಂತೆ ಮಾಡಿದೆ. ಹೀಗಾಗಿ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಪದಕದ ಬರ ನೀಗಿಸಿದ ಬಿ. ಸಾಯಿ ಪ್ರಣೀತ್‌, ಪಿ. ಕಶ್ಯಪ್‌, ಚಿರಾಗ್‌ ಶೆಟ್ಟಿ-ಸಾತ್ವಿಕ್‌ರಾಜ್‌ ರಾಂಕಿರೆಡ್ಡಿ ಮೇಲೆ ಹೆಚ್ಚಿನ ನಿರೀಕ್ಷೆ ಇರಿಸಲಾಗಿದೆ.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.