ಚೀನ ಓಪನ್‌: ಮೊದಲ ಸುತ್ತಿನಲ್ಲಿಯೇ ಹೊರಬಿದ್ದ ಸಿಂಧು

ಡಬಲ್ಸ್‌, ಮಿಕ್ಸೆಡ್‌ನ‌ಲ್ಲಿ ಸಾತ್ವಿಕ್‌ಸಾಯಿರಾಜ್‌ ಮುನ್ನಡೆ

Team Udayavani, Nov 5, 2019, 11:40 PM IST

sindhu

ಫ‌ುಝು (ಚೀನ): ಭಾರತದ ಅಗ್ರಮಾನ್ಯ ಆಟಗಾರ್ತಿ ಪಿವಿ ಸಿಂಧು ಮತ್ತೆ ಮೊದಲ ಸುತ್ತಿನಲ್ಲಿ ಎಡವಿಸಿದ್ದಾರೆ. ಕೊರಿಯ, ಡೆನ್ಮಾರ್ಕ್‌ ಕೂಟದ ಮೊದಲ ಸುತ್ತಿನಲ್ಲಿ ಸೋತಿದ್ದ ಸಿಂಧು ಅವರು ಪ್ರತಿಷ್ಠಿತ ಚೀನ ಓಪನ್‌ ಬ್ಯಾಡ್ಮಿಂಟನ್‌ ಟೂರ್ನಿಯ ಮೊದಲ ಸುತ್ತಿನÇÉೇ ಸೋತು ನಿರಾಶೆ ಮೂಡಿಸಿದ್ದಾರೆ. ಸಿಂಧು ಜತೆ ಪುರುಷರ ಸಿಂಗಲ್ಸ್‌ನಲ್ಲಿ ಎಚ್‌.ಎಸ್‌.ಪ್ರಣಯ್‌ ಕೂಡ ಸೋಲನ್ನು ಕಂಡಿದ್ದಾರೆ.

ಆದರೆ ಸಾತ್ವಿಕ್‌ಸಾಯಿರಾಜ್‌ ರಾಂಕಿರೆಡ್ಡಿ ಡಬಲ್ಸ್‌ ಮತ್ತು ಮಿಕ್ಸೆಡ್‌ ಡಬಲ್ಸ್‌ನಲ್ಲಿ ಗೆಲುವು ಸಾಧಿಸುವ ಮೂಲಕ ಭಾರತೀಯ ಪಾಳಯ ಸಂಭ್ರಮಪಡುವಂತೆ ಮಾಡಿದ್ದಾರೆ.

ಮಂಗಳವಾರ ನಡೆದ ಮಹಿಳಾ ಸಿಂಗಲ್ಸ… ವಿಭಾಗದ ಹೋರಾಟದಲ್ಲಿ ಸಿಂಧು ಅವರು ಚೈನೀಸ್‌ ತೈಪೆಯ ಪೈ ಯೂ ಪೊ ಅವರೆದುರು 13-21, 21-18, 19-21 ಗೇಮ್‌ಗಳ ಅಂತರದಲ್ಲಿ ಸೋಲನುಭವಿಸಿ ನಿರ್ಗಮಿಸಿದರು. 74 ನಿಮಿಷಗಳವರೆಗೆ ಸಾಗಿದ ಜಿ¨ªಾಜಿದ್ದಿನ ಹೋರಾಟದಲ್ಲಿ ಸಿಂಧು ಎರಡನೇ ಗೇಮ್‌ನಲ್ಲಿ ಮಾತ್ರ ಹಿಡಿತ ಸಾಧಿಸಿ ತಿರುಗೇಟು ನೀಡುವ ಸೂಚನೆ ಇತ್ತರು. ಆದರೆ ಅಂತಿಮ ಗೇಮ್‌ನಲ್ಲಿ ತೀವ್ರವಾಗಿ ಹೋರಾಡಿದರೂ ಗೆಲುವು ಒಲಿಸಿಕೊಳ್ಳಲು ಸಾಧ್ಯವಾಗಲಿಲ್ಲ.

ಪ್ರಣಯ್‌ಗೆ ಸೋಲು
ಇತ್ತೀಚೆಗಷ್ಟೆ ಡೆಂಗ್ಯೂ ಜ್ವರದಿಂದ ಚೇತರಿಸಿಕೊಂಡಿದ್ದ ಎಚ್‌.ಎಸ್‌.
ಪ್ರಣಯ್‌ ಅವರು ಮೊದಲ ಸುತ್ತಿನಲ್ಲಿ ತೀವ್ರವಾಗಿ ಹೋರಾಡಿ ಶರಣಾಗಿದ್ದಾರೆ. ಡೆನ್ಮಾರ್ಕ್‌ನ ರಸು¾ಸ್‌ ಗೆಮೆR ಅವರೊಂದಿಗಿನ ಸೆಣಸಾಟದಲ್ಲಿ ಪ್ರಣಯ್‌ 17-21, 18-21 ಗೇಮ್‌ಗಳಿಂದ ಸೋತು ಹೊರಬಿದ್ದರು.

ಅಶ್ವಿ‌ನಿ- ಸಾತ್ವಿಕ್‌ಗೆ ಮುನ್ನಡೆ
ಈ ಮೊದಲು ನಡೆದ ಮಿಕ್ಸೆಡ್‌ ಡಬಲ್ಸ್‌ನಲ್ಲಿ ಸಾತ್ವಿಕ್‌ ಅವರು ಅಶ್ವಿ‌ನಿ ಪೊನ್ನಪ್ಪ ಜತೆಗೂಡಿ 30ನೇ ಶ್ರೇಯಾಂಕದ ಕೆನಡದ ಜೊಶುವ ಹರ್ಲ್ಬರ್ಟ್‌ ಯು ಮತ್ತು ಜೊಸೆಪೈನ್‌ ವು ಅವರನ್ನು 21-19, 21-19 ನೇರ ಗೇಮ್‌ಗಳಿಂದ ಮಣಿಸಿ ಮುನ್ನಡೆದಿದ್ದಾರೆ. ಮುಂದಿನ ಪಂದ್ಯದಲ್ಲಿ ಅವರು ಕೊರಿಯದ ಸಿಯೊ ಸಿಯುಂಗ್‌ ಜಾಯಿ ಮತ್ತು ಚಾಯಿ ಯುಜಂಗ್‌ ಅವರನ್ನು ಎದುರಿಸಲಿದ್ದಾರೆ.
ಆದರೆ ಅಶ್ವಿ‌ನಿ ಪೊನ್ನಪ್ಪ ವನಿತೆಯರ ಡಬಲ್ಸ್‌ನಲ್ಲಿ ಸೋತಿದ್ದಾರೆ. ಅಶ್ವಿ‌ನಿ ಮತ್ತು ಸಿಕ್ಕಿ ರೆಡ್ಡಿ ಅವರು ವಿಶ್ವದ 10ನೇ ರ್‍ಯಾಂಕಿನ ಚೀನದ ಲಿ ವೆನ್‌ ಮೆಯಿ ಮತ್ತು ಝೆಂಗ್‌ ಯು ಅವರೆದುರು 9-21, 8-21 ಗೇಮ್‌ಗಳಿಂದ ಸುಲಭವಾಗಿ ಶರಣಾದರು.

ಸಾತ್ವಿಕ್‌ ಭರ್ಜರಿ ಆಟ
ಸಾತ್ವಿಕ್‌ಸಾಯಿರಾಜ್‌ ರಾಂಕಿರೆಡ್ಡಿ ಭರ್ಜರಿ ಆಟವಾಡಿ ಗಮನ ಸೆಳೆದಿದ್ದಾರೆ. ಡಬಲ್ಸ್‌ ಮತ್ತು ಮಿಕ್ಸೆಡ್‌ ಡಬಲ್ಸ್‌ನಲ್ಲಿ ಜಯ ಸಾಧಿಸಿ ಮುನ್ನಡೆದಿದ್ದಾರೆ. ಥಾçಲಂಡ್‌ ಓಪನ್‌ ಚಾಂಪಿಯನ್‌ ಆಗಿರುವ ಸಾತ್ವಿಕ್‌ ಮತ್ತು ಚಿರಾಗ್‌ ಶೆಟ್ಟಿ ಅವರು ಮೊದಲ ಸುತ್ತಿನಲ್ಲಿ ಅಮೆರಿಕದ ಫಿಲಿಪ್‌ ಚ್ಯು ಮತ್ತು ರಿಯಾನ್‌ ಚ್ಯು ಅವರನ್ನು 21-9, 21-15 ಗೇಮ್‌ಗಳಿಂದ ಸುಲಭವಾಗಿ ಮಣಿಸಿ ಮುನ್ನಡೆದಿದ್ದಾರೆ.
ಕಳೆದ ತಿಂಗಳು ನಡೆದ ಫ್ರೆಂಚ್‌ ಓಪನ್‌ ಕೂಟದಲ್ಲಿ ಫೈನಲ್ಸ್‌ ವರೆಗೆ ತಲುಪಿದ್ದ ಸಾತ್ವಿಕ್‌-ಚಿರಾಗ್‌ ದ್ವಿತೀಯ ಸುತ್ತಿನಲ್ಲಿ ಜಪಾನಿನ ಹಿರೊಯುಯಿ ಎಂಡೊ ಮತ್ತು ಯೂತ ವಾಟನಾಬೆ ಅವರನ್ನು ಎದುರಿಸಲಿದ್ದಾರೆ.

ಟಾಪ್ ನ್ಯೂಸ್

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.