ಭಾರತ-ಆಸೀಸ್ ಟಿ20 ಬೆಂಗ್ಳೂರಿನಿಂದ ಸ್ಥಳಾಂತರ
Team Udayavani, Feb 3, 2019, 12:30 AM IST
ಬೆಂಗಳೂರು: ಉದ್ಯಾನನಗರಿಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಫೆ.24ರಂದು ನಡೆಯಬೇಕಿದ್ದ ಭಾರತ-ಆಸ್ಟ್ರೇಲಿಯ ನಡುವಿನ ಮೊದಲ ಟಿ20 ಪಂದ್ಯವನ್ನು ವಿಶಾಖಪಟ್ಟಣಕ್ಕೆ ವರ್ಗಾಯಿಸಲಾಗಿದೆ. ಅದೇ ರೀತಿಯಲ್ಲಿ ಫೆ.27ಕ್ಕೆ ವಿಶಾಖಪಟ್ಟಣದಲ್ಲಿ ನಡೆಯ ಬೇಕಿದ್ದ 2ನೇ ಟಿ20 ಪಂದ್ಯವನ್ನು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಬಿಸಿಸಿಐ (ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ) ವರ್ಗಾಯಿಸಿದೆ ಎಂದು ಕೆಎಸ್ಸಿಎ ಮಾಧ್ಯಮ ವಕ್ತಾರ ವಿನಯ್ ಮತ್ಯುಂಜಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಫೆ.24ರಂದು ಬೆಂಗಳೂರಿನಲ್ಲಿ ಏರೋ ಇಂಡಿಯಾ ಶೋ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಪಂದ್ಯಕ್ಕೆ ಪೊಲೀಸ್ ಭದ್ರತೆ ನೀಡಲಾ ಗುವುದಿಲ್ಲ ಎಂದು ರಾಜ್ಯ ಪೊಲೀಸ್ ಇಲಾಖೆ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್ಸಿಎ)ಗೆ ಹೇಳಿತ್ತು. ಈ ಹಿನ್ನೆಲೆಯಲ್ಲಿ ಪಂದ್ಯ ಆಯೋಜಿಸುವುದು ಕಷ್ಟವಾ ಗುತ್ತದೆ ಎಂದು ಬಿಸಿಸಿಐಗೆ (ಕೆಎಸ್ಸಿಎ) ಮನವಿ ಮಾಡಿತ್ತು. ಈ ಮನವಿಯನ್ನು ಪುರಸ್ಕರಿಸಿದ ಬಿಸಿಸಿಐ ಪಂದ್ಯವನ್ನು ಬದಲಾಯಿ ಸಿಕೊಳ್ಳಲು ಗ್ರೀನ್ ಸಿಗ್ನಲ್ ನೀಡಿತು. ಈ ಪ್ರಕಾರವಾಗಿ ವೇಳಾಪಟ್ಟಿಯನ್ನು ಬದಲಾಯಿಸ ಲಾಗಿದೆ. ಆಸ್ಟ್ರೇಲಿಯ ತಂಡವು ಎರಡು ಟಿ20 ಹಾಗೂ 5 ಏಕದಿನ ಪಂದ್ಯವನ್ನಾಡಲು ಭಾರತಕ್ಕೆ ಆಗಮಿಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ
Udupi: ಅನುಮತಿಯಿಲ್ಲದೆ ಪೋಸ್ಟರ್ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ
K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ