ವಿಂಡೀಸ್‌ ಟಿ20 ತಂಡಕ್ಕೆ ಮರಳಿದ ಗೇಲ್‌


Team Udayavani, Jul 6, 2017, 3:45 AM IST

Gayle.jpg

ಸಬೀನಾ ಪಾರ್ಕ್‌: ಸ್ಫೋಟಕ ಬ್ಯಾಟ್ಸ್‌ಮನ್‌ ಕ್ರಿಸ್‌ ಗೇಲ್‌ ಅವರು ಪ್ರವಾಸಿ ಭಾರತ ತಂಡದೆದುರಿನ ಏಕೈಕ ಟ್ವೆಂಟಿ 20 ಪಂದ್ಯಕ್ಕಾಗಿ ವೆಸ್ಟ್‌ಇಂಡೀಸ್‌ ತಂಡಕ್ಕೆ ಮರಳಿದ್ದಾರೆ. ಈ ಪಂದ್ಯ ರವಿವಾರ ಸಬೀನಾ ಪಾರ್ಕ್‌ನಲ್ಲಿ ನಡೆಯಲಿದೆ.

ಟ್ವೆಂಟಿ20 ಮಾದರಿಯ ಕ್ರಿಕೆಟ್‌ನಲ್ಲಿ ವೆಸ್ಟ್‌ಇಂಡೀಸ್‌ನ ಅತ್ಯಂತ ಯಶಸ್ವಿ ಬ್ಯಾಟ್ಸ್‌ಮನ್‌ ಆಗಿರುವ ಗೇಲ್‌ 35.32 ಸರಾಸರಿಯಂತೆ 1519 ರನ್‌ ಗಳಿಸಿದ್ದಾರೆ. ಅವರು ರನ್ನಿಗಾಗಿ ಒದ್ದಾಡುತ್ತಿರುವ ಲೆಡ್ಲ್ ಸಿಮನ್ಸ್‌ ಬದಲಿಗೆ ತಂಡದಲ್ಲಿ ಸೇರಿಕೊಂಡಿದ್ದಾರೆ. ಇತ್ತೀಚೆಗಿನ ಅಫ್ಘಾನಿಸ್ಥಾನ ವಿರುದ್ಧದ ಟ್ವೆಂಟಿ20 ಸರಣಿಯಲ್ಲಿ ಸಿಮನ್ಸ್‌ ರನ್‌ ಗಳಿಸಲು ಬಹಳಷ್ಟು ಒದ್ದಾಡಿದ್ದರು.

ತವರಿನ ಮೈದಾನ ಸಬೀನಾ ಪಾರ್ಕ್‌ನಲ್ಲಿ ಇದು ಗೇಲ್‌ ಅವರ ಮೊದಲ ಟ್ವೆಂಟಿ20 ಪಂದ್ಯವಾಗಿದೆ. ಟ್ವೆಂಟಿ20ಯಲ್ಲಿ ಎರಡು ಶತಕ ಬಾರಿಸಿರುವ ಗೇಲ್‌ ಈಡನ್‌ ಗಾರ್ಡನ್ಸ್‌ನಲ್ಲಿ ನಡೆದ 2016ರ ಟ್ವೆಂಟಿ20 ವಿಶ್ವಕಪ್‌ನ ಫೈನಲ್‌ನಲ್ಲಿ ಈ ಹಿಂದಿನ ಟ್ವೆಂಟಿ20  ಪಂದ್ಯವನ್ನಾಡಿದ್ದರು.

ಟೆಸ್ಟ್‌ ಮತ್ತು ಏಕದಿನ ಕ್ರಿಕೆಟ್‌ನಲ್ಲಿ ತಂಡವನ್ನು ಮುನ್ನಡೆಸಿದ್ದ ಆಲ್‌ರೌಂಡರ್‌ ಜಾಸನ್‌ ಹೋಲ್ಡರ್‌ ಅವರಿಗೆ ಮತ್ತೆ ವಿಶ್ರಾಂತಿ ನೀಡಲಾಗಿದೆ. ಅವರ ಬದಲು ಕಾರ್ಲೋಸ್‌ ಬ್ರಾತ್‌ವೇಟ್‌ ತಂಡವನ್ನು ಮುನ್ನಡೆಸಲಿದ್ದಾರೆ.

ಟ್ವೆಂಟಿ20 ತಂಡಕ್ಕೆ ಮರಳಿದ ಗೇಲ್‌ ಅವರನ್ನು ನಾವು ಸ್ವಾಗತಿಸುತ್ತೇವೆ. ಈ ಮಾದರಿಯ ಕ್ರಿಕೆಟ್‌ನಲ್ಲಿ ಅವರೊಬ್ಬ ಅಸಾಧಾರಣ ಆಟಗಾರ. ಅಗ್ರ ಕ್ರಮಾಂಕದಲ್ಲಿ ಅವರು ನಮ್ಮ ತಂಡದ ಬಲ ಹೆಚ್ಚಿಸುವ ಸಾಧ್ಯತೆಯಿದೆ ಎಂದು ವೆಸ್ಟ್‌ಇಂಡೀಸ್‌ ಆಯ್ಕೆ ಸಮಿತಿಯ ಚೇರ್ಮನ್‌ ಕೋರ್ಟ್ನಿ ಬ್ರೌನ್‌ ಹೇಳಿದ್ದಾರೆ. ಶ್ರೇಷ್ಠ ಗುಣಮಟ್ಟದ ಟೀಮ್‌ ಇಂಡಿಯಾ ವಿರುದ್ಧ ಮತ್ತು ಗೇಲ್‌ ಅವರ ತವರಿನ ಮೈದಾನದಲ್ಲಿ ಆಡುವ ಅವಕಾಶ ನಮಗೆ ಸಿಕ್ಕಿದೆ ಎಂದವರು ತಿಳಿಸಿದರು.

ಐದು ಪಂದ್ಯಗಳ ಸರಣಿಯಲ್ಲಿ ಆತಿಥೇಯ ತಂಡ 1-2 ಹಿನ್ನಡೆಯಲ್ಲಿದೆ. ಸರಣಿ ನಿರ್ಣಾಯಕ ಐದನೇ ಪಂದ್ಯ ಗುರುವಾರ ನಡೆಯಲಿದೆ.

ವೆಸ್ಟ್‌ಇಂಡೀಸ್‌ ತಂಡ: ಕಾರ್ಲೋಸ್‌ ಬ್ರಾತ್‌ವೇಟ್‌ (ನಾಯಕ), ಸಾಮ್ಯುಯೆಲ್‌  ಬದ್ರಿ, ರಾನ್ಸ್‌ಫೋರ್ಡ್‌ ಬೀಟನ್‌, ಕ್ರಿಸ್‌ ಗೇಲ್‌, ಎವಿನ್‌ ಲೆವಿಸ್‌, ಜಾಸನ್‌ ಮೊಹಮ್ಮದ್‌, ಸುನೀಲ್‌ ನಾರಾಯಣ್‌, ಕೈರನ್‌ ಪೋಲಾರ್ಡ್‌, ರೋವ¾ನ್‌ ಪೊವೆಲ್‌, ಮಾರ್ಲಾನ್‌ ಸಾಮ್ಯುಯೆಲ್ಸ್‌, ಜೆರೋಮ್‌ ಟಯ್ಲರ್‌, ಚಾಡ್ವಿಕ್‌ ವಾಲ್ಟನ್‌, ಕೇಸ್ರಿಕ್‌ ವಿಲಿಯಮ್ಸ್‌.

ಟಾಪ್ ನ್ಯೂಸ್

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.