ಸಿನ್ಸಿನಾಟಿ ಓಪನ್‌ ಟೆನಿಸ್‌: ಕೊರಿಕ್‌, ಕ್ಯಾರೋಲಿನ್‌ ಗಾರ್ಸಿಯಾ ಜಯ


Team Udayavani, Aug 22, 2022, 11:39 PM IST

ಸಿನ್ಸಿನಾಟಿ ಓಪನ್‌ ಟೆನಿಸ್‌: ಕೊರಿಕ್‌, ಕ್ಯಾರೋಲಿನ್‌ ಗಾರ್ಸಿಯಾ ಜಯ

ಸಿನ್ಸಿನಾಟಿ: ಕ್ರೊವೇಶಿಯಾದ ಬೋರ್ನ ಕೊರಿಕ್‌ ಮತ್ತು ಫ್ರಾನ್ಸ್‌ನ ಕ್ಯಾರೋಲಿನ್‌ ಗಾರ್ಸಿಯಾ “ಸಿನ್ಸಿನಾಟಿ ಓಪನ್‌’ ಟೆನಿಸ್‌ ಪಂದ್ಯಾವಳಿ ಪ್ರಶಸ್ತಿ ಯೊಂದಿಗೆ ಸಂಭ್ರಮಿಸಿದ್ದಾರೆ.

ಪೂರ್ಣ ಸಾಮರ್ಥ್ಯದೊಂದಿಗೆ ಈ ಕೂಟಕ್ಕೆ ಅಣಿಯಾಗಿ ಬಂದಿದ್ದ ಬೋರ್ನ ಕೊರಿಕ್‌ ಗ್ರೀಕ್‌ನ ದೈತ್ಯ ಆಟ ಗಾರ ಸ್ಟೆಫ‌ನಸ್‌ ಸಿಸಿಪಸ್‌ ಅವರನ್ನು 7-6 (7-0), 6-2 ನೇರ ಸೆಟ್‌ಗಳಿಂದ ಹಿಮ್ಮೆಟ್ಟಿಸಿದರು.

ವನಿತಾ ಸಿಂಗಲ್ಸ್‌ನಲ್ಲಿ ಅರ್ಹತಾ ಸುತ್ತಿನಿಂದ ಬಂದ ಕ್ಯಾರೋಲಿನ್‌ ಗಾರ್ಸಿಯಾ ಜೆಕ್‌ ಗಣರಾಜ್ಯದ ಪೆಟ್ರಾ ಕ್ವಿಟೋವಾ ಅವರಿಗೆ 6-2, 6-4 ಅಂತರದ ಸೋಲುಣಿಸಿದರು.

ಭರ್ಜರಿ ಪುನರಾಗಮನ
ಭುಜದ ನೋವಿನಿಂದ 8 ತಿಂಗಳ ಕಾಲ ವಿಶ್ರಾಂತಿಯಲ್ಲಿದ್ದ ಬೋರ್ನ ಕೊರಿಕ್‌ ತಮ್ಮ ಪುನರಾಗಮನವನ್ನು ಭರ್ಜರಿಯಾಗಿ ಸಾರಿದರು. ಮುಂದಿನ “ಯುಎಸ್‌ ಓಪನ್‌’ನಲ್ಲಿ ಎದುರಾಳಿಗಳ ಪಾಲಿಗೆ ಎಚ್ಚರಿಕೆಯ ಗಂಟೆ ಬಾರಿಸಿದರು.

ಇದು 2018ರ ಬಳಿಕ ಬೋರ್ನ ಕೊರಿಕ್‌ ಗೆದ್ದ ಮೊದಲ ಟೆನಿಸ್‌ ಪ್ರಶಸ್ತಿ. ಈ ಜಯದೊಂದಿಗೆ ವಿಶ್ವ ರ್‍ಯಾಂಕಿಂಗ್‌ನಲ್ಲಿ ಅವರು 29ನೇ ಸ್ಥಾನಕ್ಕೆ ನೆಗೆದರು. ಹೀಗಾಗಿ ಯುಎಸ್‌ ಓಪನ್‌ನಲ್ಲಿ ಇವರಿಗೆ ಶ್ರೇಯಾಂಕವೊಂದು ಲಭಿಸಿದಂತಾಯಿತು.

ದ್ವಿತೀಯ ಸುತ್ತಿನಲ್ಲಿ ದೈತ್ಯ ಆಟ ಗಾರ ರಫೆಲ್‌ ನಡಾಲ್‌ ಅವರನ್ನು ಮಣಿಸಿದಾಗಲೇ ಬೋರ್ನ ಕೊರಿಕ್‌ ಅಪಾಯಕಾರಿಯಾಗಿ ಗೋಚರಿಸಿದ್ದರು. ಇದು ನಿಜವಾಯಿತು. ಆದರೆ ತಾನಿಲ್ಲಿ ಚಾಂಪಿಯನ್‌ ಆಗಲಿದ್ದೇನೆಂದು ನಿರೀಕ್ಷಿ ಸಿರಲೇ ಇಲ್ಲ ಎಂಬುದು ಕೊರಿಕ್‌ ಪ್ರತಿಕ್ರಿಯೆ.

ಸೆಮಿಫೈನಲ್‌ನಲ್ಲಿ ನಂ.1 ಆಟಗಾರ ಡ್ಯಾನಿಲ್‌ ಮೆಡ್ವೆಡೇವ್‌ ಅವರನ್ನು ಮಣಿಸಿ ಬಂದಿದ್ದ ಸಿಸಿಪಸ್‌ ಆರಂಭದಲ್ಲಿ ಉತ್ತಮ ಲಯದಲ್ಲಿದ್ದರು. ಕೊರಿಕ್‌ ವಿರುದ್ಧ 4-1 ಮುನ್ನಡೆಯಲ್ಲಿದ್ದಾಗ ಮೊದಲ ಸೆಟ್‌ ಗೆಲ್ಲುವ ಉತ್ತಮ ಅವಕಾಶವಿತ್ತು. ಆದರೆ ಕೊರಿಕ್‌ ತಿರುಗಿ ಬಿದ್ದಾಗ ಸಿಸಿಪಸ್‌ ಆಟ ನಡೆಯಲಿಲ್ಲ.

ಗಾರ್ಸಿಯಾ ದಾಖಲೆ
ಕ್ಯಾರೋಲಿನ್‌ ಗಾರ್ಸಿಯಾ ಅವರದು ಅಮೋಘ ಸಾಧನೆ. ಅವರು ಅರ್ಹತಾ ಸುತ್ತಿನಿಂದ ಬಂದು ಡಬ್ಲ್ಯುಟಿಎ ಟೂರ್‌-1000 ಪ್ರಶಸ್ತಿ ಗೆದ್ದ ವಿಶ್ವದ ಮೊದಲ ಆಟಗಾರ್ತಿ.

ಮರಿಯಾ ಸಕ್ಕರಿ, ಅರಿನಾ ಸಬಲೆಂಕಾ, ಜೆಸ್ಸಿಕಾ ಪೆಗುಲಾ-ಹೀಗೆ ಮೂರು ಮಂದಿ ಟಾಪ್‌-10 ಆಟಗಾರ್ತಿಯರನ್ನು ಮಣಿಸಿದ ಬಳಿಕ, ಫೈನಲ್‌ನಲ್ಲಿ ಎರಡು ಬಾರಿಯ ವಿಂಬಲ್ಡನ್‌ ಚಾಂಪಿಯನ್‌ ಪೆಟ್ರಾ ಕ್ವಿಟೋವಾ ಅವರನ್ನು ಹಿಮ್ಮೆಟ್ಟಿಸಿದ ಸಾಧನೆ ಗಾರ್ಸಿಯಾ ಅವರದು.

ಟಾಪ್ ನ್ಯೂಸ್

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.