ಕೋಚ್‌ ಹುದ್ದೆ: ರವಿಶಾಸ್ತ್ರಿ  ಆಯ್ಕೆ ಸುಗಮ?


Team Udayavani, Jun 29, 2017, 3:35 AM IST

28-SPORTS-3.jpg

ಮಂಗಳೂರು: ರವಿಶಾಸ್ತ್ರಿ ಅವರು ಭಾರತೀಯ ಕ್ರಿಕೆಟ್‌ ತಂಡದ ನೂತನ ಕೋಚ್‌ ಆಗಿ ಆಯ್ಕೆಯಾಗಲಿದ್ದಾರೆಯೇ ? ಬುಧವಾರದ ಕೆಲವು ಬೆಳವಣಿಗೆಗಳನ್ನು ಗಮನಿಸಿದರೆ ಶಾಸ್ತ್ರಿ ಅವರ ಆಯ್ಕೆಯ ಅವಕಾಶಗಳು ಹೆಚ್ಚಾಗಿವೆ ಎಂಬ ತೀರ್ಮಾನಕ್ಕೆ ಬರಬಹುದಾಗಿದೆ.

ರವಿಶಾಸ್ತ್ರಿ ಅವರು ಕಳೆದ ಮಾರ್ಚ್‌ 1ರಂದು ಕಾರ್ಕಳ ಕರ್ವಾಲು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನಕ್ಕೆ ಸತತ ಏಳನೇ ವರ್ಷದಲ್ಲಿ ವಿಶೇಷ ಪೂಜೆ ಸಲ್ಲಿಸಲು ಆಗಮಿಸಿದ್ದರು. ಆ ಸಂದರ್ಭದಲ್ಲಿ ಲೋಕಾಭಿರಾಮವಾಗಿ ಮಾತನಾಡುತ್ತಾ “ಭಾರತೀಯ ಕ್ರಿಕೆಟ್‌ ತಂಡಕ್ಕೆ ಸೇವೆ ಸಲ್ಲಿಸುವ ಯಾವುದೇ ಅವಕಾಶಗಳನ್ನು ನಾನು ಸ್ವೀಕರಿಸುತ್ತೇನೆ’ ಎಂದು ಹೇಳಿದ್ದರು. ಮುಂದಿನ ದಿನಗಳಲ್ಲಿ ಈ ಅವಕಾಶ ಬರಬಹುದು ಎಂದು ನಿರೀಕ್ಷೆ ಅವರ ಮಾತಿನಲ್ಲಿತ್ತು.

2014ರಿಂದ 2016ರ ಜೂನ್‌ವರೆಗೆ ಅವರು ಟೀಂ ಇಂಡಿಯಾದ ಡೈರೆಕ್ಟರ್‌ ಆಗಿದ್ದರು. ಈ ಅವಧಿಯಲ್ಲಿ ಭಾರತೀಯ ಕ್ರಿಕೆಟ್‌ ತಂಡ ಟೆಸ್ಟ್‌ ಏಕದಿನ ಟಿ-20 ಸರಣಿಗಳಲ್ಲಿ ಗಮನಾರ್ಹ ಸಾಧನೆ ಮಾಡಿತ್ತು. ವಿಶೇಷವಾಗಿ, ಟೀಂ ಇಂಡಿಯಾದ ಆತ್ಮಸ್ಥೈರ್ಯ ಹೆಚ್ಚಳಕ್ಕೆ ಶಾಸ್ತ್ರಿ ಸ್ಫೂರ್ತಿಯಾಗಿದ್ದರು. ಮಾಧ್ಯಮಗಳೆಲ್ಲ ಈಗಾಗಲೇ ವಿಶ್ಲೇಷಿಸಿದಂತೆ, ವಿರಾಟ್‌ ಕೊಹ್ಲಿ ಅವರ ಅತ್ಯಪೂರ್ವ ವಿಕಸನಕ್ಕೆ ಶಾಸ್ತ್ರಿ ಬೆಂಬಲವಾಗಿದ್ದರು.

ಇಂಗ್ಲೆಂಡಿನಲ್ಲಿ  ಶಾಸ್ತ್ರಿ
ರವಿಶಾಸ್ತ್ರಿ ಅವರನ್ನು ಕ್ರಿಕೆಟ್‌ ಸಲಹಾ ಸಮಿತಿ ಸದಸ್ಯ ಸಚಿನ್‌ ತೆಂಡುಲ್ಕರ್‌ ಸಂಪೂರ್ಣವಾಗಿ ಬೆಂಬಲಿಸಿದ್ದಾರೆ. ಈ ಹಿಂದೆ ಅನಿಲ್‌ ಕುಂಬ್ಳೆ ಅವರು ಕೋಚ್‌ ಆಗಿ ಆಯ್ಕೆಯಾದಾಗಲೂ ಸಚಿನ್‌ ಬೆಂಬಲ ಶಾಸ್ತ್ರಿಗಿತ್ತು. ಆದರೆ, ಗಂಗೂಲಿ ಬೆಂಬಲ ನೀಡಿರಲಿಲ್ಲ. (2016ರಲ್ಲಿ ಕೋಚ್‌ ಆಗಿ ಆಯ್ಕೆಯಾದ ಕುಂಬ್ಳೆ ಅವರು ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿದ್ದರೂ- ಕೊಹ್ಲಿ ಸಹಿತ ಕೆಲವು ಆಟಗಾರರ ಮುನಿಸಿನಿಂದಾಗಿ ರಾಜೀನಾಮೆ ನೀಡಿದ ಪ್ರಸಂಗ ಸಂಭವಿಸಿತ್ತು.

ಶಾಸ್ತ್ರಿ ಅವರು ಚಾಂಪಿಯನ್ಸ್‌ ಟ್ರೋಫಿ ಪಂದ್ಯಾವಳಿಯಲ್ಲಿ ವೀಕ್ಷಕ ವಿವರಣೆಗಾರರಾಗಿದ್ದರು. ಈಗ ಅವರು ಇಂಗ್ಲೆಂಡಿನಲ್ಲಿ “ರಜಾದಿನ’ಗಳಲ್ಲಿದ್ದಾರೆ. ಕ್ರಿಕೆಟ್‌ ತಜ್ಞರಿಂದ, ವಿಶೇಷವಾಗಿ ಸಚಿನ್‌ರ ಒತ್ತಡದಿಂದಾಗಿ ಅವರು ಕೋಚ್‌ ಹುದ್ದೆಗೆ ಅರ್ಜಿ ಸಲ್ಲಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. ಅರ್ಜಿ ಸಲ್ಲಿಸುವ ಅವಧಿಯನ್ನು ಬಿಸಿಸಿಐ ಜು. 9ಕ್ಕೆ ವಿಸ್ತರಿಸಿದೆೆ.

ತಂಡದ ಹಿತ ಮುಖ್ಯ
ಭಾರತೀಯ ತಂಡದ ಸಮಗ್ರ ಹಿತಾಸಕ್ತಿಯೇ ಮುಖ್ಯ ಎಂದಿರುವ ಶಾಸ್ತ್ರಿ ಅವರು 2019ರ ಏಕದಿನ ವಿಶ್ವಕಪ್‌ನಲ್ಲಿ ಟೀಂ ಇಂಡಿಯಾವೇ ಪ್ರಶಸ್ತಿ ಗೆಲ್ಲುವ ಫೇವರಿಟ್‌ ತಂಡ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಎಲ್ಲಾ ಹಿನ್ನೆಲೆಗಳನ್ನು ಗಮನಿಸಿದರೆ; ಶಾಸ್ತ್ರಿ ಅವರು ಕೋಚ್‌ ಹುದ್ದೆಗೆ ಅರ್ಜಿ ಸಲ್ಲಿಸುತ್ತಾರೆ. ಅವರ ಆಯ್ಕೆಯ ಹಾದಿ ವಸ್ತುಶಃ ಸುಗಮವಾಗಿದೆ.

ಮನೋಹರ ಪ್ರಸಾದ್‌

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.