ಕಾಮನ್‌ವೆಲ್ತ್‌ ಗೇಮ್ಸ್‌ : ಭಾರತದ ಆತಿಥ್ಯದಲ್ಲಿ ಶೂಟಿಂಗ್‌, ಬಿಲ್ಗಾರಿಕೆ!


Team Udayavani, Feb 25, 2020, 6:45 AM IST

comenwealth

ಲಂಡನ್‌: ಭಾರತೀಯ ಒಲಿಂಪಿಕ್‌ ಸಂಸ್ಥೆಗೆ ಬಹುದೊಡ್ಡ ಜಯ ಲಭಿಸಿದೆ. 2022ರ ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ರದ್ದಾಗಿದ್ದ ಶೂಟಿಂಗ್‌ ಮತ್ತು ಬಿಲ್ಗಾರಿಕೆ ಸ್ಪರ್ಧೆ ಗಳು, ಭಾರತದಲ್ಲಿ ಅದೇ ವರ್ಷ ಜನವರಿಯಲ್ಲಿ ನಡೆಯಲಿವೆ. ಇಲ್ಲಿ ಗೆದ್ದ ಪದಕಗಳನ್ನು ಕಾಮನ್‌ವೆಲ್ತ್‌ ಗೇಮ್ಸ್‌ ಪದಕ ಪಟ್ಟಿಯಲ್ಲಿ ಸೇರಿಸಿ, ಶ್ರೇಯಾಂಕಗಳನ್ನು ನಿರ್ಧರಿಸಲಾಗುತ್ತದೆ.

ಇದಕ್ಕೂ ಮುನ್ನ ಈ ಎರಡು ಸ್ಪರ್ಧೆಗಳನ್ನು ಇಂಗ್ಲೆಂಡ್‌ನ‌ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯಬೇಕಿರುವ 2022ರ ಕಾಮನ್‌ವೆಲ್ತ್‌ ಗೇಮ್ಸ್‌ ನಿಂದ ಕೈಬಿಡಲಾಗಿತ್ತು. ಆದರೆ ಭಾರತ ಒಲಿಂಪಿಕ್‌ ಸಂಸ್ಥೆ ತನಗೆ ಗರಿಷ್ಠ ಪದಕ ಬರುವ ಈ ಸ್ಪರ್ಧೆಗಳನ್ನು ಕೈಬಿಟ್ಟರೆ, ತಾನು ಕೂಟದಿಂದಲೇ ಹಿಂದೆ ಸರಿಯುವುದಾಗಿ ಬೆದರಿಸಿತ್ತು.

ಭಾರತದ ಬೆದರಿಕೆಯನ್ನು ಸಂಘ ಟನಾ ಸಮಿತಿ ಗಂಭೀರವಾಗಿ ಪರಿಗ ಣಿಸಿ, ಸಂಧಾನ ಮಾಡಿಕೊಂಡಿತ್ತು. ಕಳೆದ ತಿಂಗಳೇ ಈ 2 ಸ್ಪರ್ಧೆಗಳನ್ನು ಮಾತ್ರ ಭಾರತದಲ್ಲಿ ನಡೆಸುವ ಮಾತುಕತೆ ಯಾಗಿತ್ತು. ಆ ಪ್ರಕಾರ ಇದೀಗ ಅಧಿಕೃತ ಆದೇಶ ಹೊರಬಿದ್ದಿದೆ.

ಚಂಡೀಗಢದಲ್ಲಿ ಸ್ಪರ್ಧೆ
2022ರ ಶೂಟಿಂಗ್‌ ಮತ್ತು ಬಿಲ್ಗಾರಿಕೆ ಸ್ಪರ್ಧೆಗಳು ಜನವರಿಯಲ್ಲಿ ಚಂಡೀಗಢದಲ್ಲಿ ನಡೆಯಲಿವೆ. ಕಾಮನ್‌ವೆಲ್ತ್‌ ಗೇಮ್ಸ್‌ ಬರ್ಮಿಂಗ್‌ಹ್ಯಾಮ್‌ನಲ್ಲಿ 2022, ಜು. 27ರಿಂದ ಆ. 7ರ ವರೆಗೆ ನಡೆಯಲಿದೆ.

ಇಲ್ಲಿ ಗಮನಿಸಬೇಕಾದ ಸಂಗತಿ ಯೊಂದಿದೆ. ಗರಿಷ್ಠ ಪದಕ ವಿಜೇತ ತಂಡಗಳ ಶ್ರೇಯಾಂಕವನ್ನು ಭಾರತದಲ್ಲಿ ನಡೆಯುವ ಬಿಲ್ಗಾರಿಕೆ, ಶೂಟಿಂಗ್‌ ಪದಕ ಸೇರಿಸಿಯೇ ನಿರ್ಧರಿಸಲಾಗುವುದು. ಆದರೆ ಕಾಮನ್‌ವೆಲ್ತ್‌ ಗೇಮ್ಸ್‌ ಮುಗಿದು ಒಂದು ವಾರದ ಅನಂತರ ಈ ಸೇರ್ಪಡೆ ಮಾಡಲಾಗುವುದು. ಅಲ್ಲಿಯವರೆಗೆ ನೇರವಾಗಿ ಕೂಟದಲ್ಲಿ ನಡೆದ ಸ್ಪರ್ಧೆಗಳನ್ನು ಮಾತ್ರ ಪರಿಗಣಿಸಲಾಗುವುದು.

ಭಾರತಕ್ಕೆ ಮಹತ್ವದ ಜಯ
ಇದು ಭಾರತಕ್ಕೆ ಸಿಕ್ಕಿದ ಮಹ ತ್ವದ ಜಯವೆಂದೇ ಹೇಳಲಾಗಿದೆ. ವಿಶ್ವಮಟ್ಟದಲ್ಲಿ ಭಾರತ ಬಲಿಷ್ಠವಾಗಿರುವುದು, ರಾಜತಾಂತ್ರಿಕವಾಗಿ ಪ್ರಬಲವಾಗಿರುವುದರಿಂದ ಭಾರತದ ಬಹಿಷ್ಕಾರದ ಧ್ವನಿಗೆ ಮಹತ್ವ ಸಿಕ್ಕಿದೆ. ಇದಕ್ಕೆ ಮೊದಲು ಬರ್ಮಿಂಗ್‌ಹ್ಯಾಮ್‌ನಲ್ಲಿ ಶೂಟಿಂಗ್‌ ರೇಂಜ್‌ ಇಲ್ಲ ಎಂಬ ಕಾರಣಕ್ಕೆ ಶೂಟಿಂಗ್‌ ರದ್ದು ಮಾಡಲಾಗಿತ್ತು. ಈ ಕ್ರೀಡೆಯಲ್ಲೇ ಭಾರತಕ್ಕೆ ಬಹುತೇಕ ಪದಕ ಬರುವುದು, ಅದನ್ನೇ ರದ್ದು ಮಾಡಿರುವುದು ಪಿತೂರಿ ಎಂದು ಭಾರತ ಒಲಿಂಪಿಕ್‌ ಸಂಸ್ಥೆ ಮುಖ್ಯಸ್ಥ ನರೇಂದ್ರ ಬಾತ್ರಾ ಆರೋಪಿಸಿದ್ದರು.

ಟಾಪ್ ನ್ಯೂಸ್

pralhad joshi

Hubli; ಕಾಂಗ್ರೆಸ್ ಅಧಿಕಾರಕ್ಕಾಗಿ ದೇಶವನ್ನು ಒಡೆಯಲೂ ಹೇಸುವುದಿಲ್ಲ: ಪ್ರಹ್ಲಾದ ಜೋಶಿ

Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ

Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ

Dandeli: ಮದುವೆಗೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ… 8 ಮಂದಿಗೆ ಗಾಯ

Dandeli: ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ.. ಮಕ್ಕಳು ಸೇರಿ 8 ಮಂದಿಗೆ ಗಾಯ

Praveen Nettar Case; Arrest of main accused Mustafa Paychar of Sulya

Praveen Nettar Case; ಪ್ರಮುಖ ಆರೋಪಿ ಸುಳ್ಯದ ಮುಸ್ತಫಾ ಪೈಚಾರ್ ಬಂಧನ

ಪಾಕ್‌ಗೆ ಗೌರವ ಕೊಡಿ… ಇಲ್ಲವಾದಲ್ಲಿ ಅಣುಬಾಂಬ್ ಹಾಕುತ್ತಾರೆ: ಮಣಿಶಂಕರ್ ಅಯ್ಯರ್ ಹೇಳಿಕೆ

Pak ಬಳಿ ಅಣುಬಾಂಬ್ ಇದೆ ಅವರಿಗೆ ಗೌರವ ಕೊಡಿ… ಕಾಂಗ್ರೆಸ್ ನಾಯಕನ ವಿವಾದಾತ್ಮಕ ಹೇಳಿಕೆ

movies

Sandalwood; ಇಂದು ತೆರೆಗೆ ಬರುತ್ತಿದೆ ನಾಲ್ಕು ಸಿನಿಮಾಗಳು

Chitradurga: ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ

Chitradurga: ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

34

GT Vs CSK: ನಿರ್ಗಮನ ಬಾಗಿಲಲ್ಲಿ ಗುಜರಾತ್‌ ಪ್ಲೇ ಆಫ್‌ ಜಪದಲ್ಲಿ ಚೆನ್ನೈ

1-qwewqwqe

IPL;ಪಂಜಾಬ್ ವಿರುದ್ಧ 60 ರನ್ ಗಳ ಗೆಲುವು ಸಾಧಿಸಿದ ಆರ್ ಸಿಬಿ: ಪ್ಲೇ ಆಫ್ ಆಸೆ ಜೀವಂತ

TT: ಡಬ್ಲ್ಯು ಟಿಟಿ; ಕ್ವಾರ್ಟರ್‌ಗೇರಿದ ಮೊದಲ ಭಾರತೀಯೆ ಮಣಿಕಾ

TT: ಡಬ್ಲ್ಯು ಟಿಟಿ; ಕ್ವಾರ್ಟರ್‌ಗೇರಿದ ಮೊದಲ ಭಾರತೀಯೆ ಮಣಿಕಾ

1-wwewqewq

NADA ಬೆನ್ನಲ್ಲೇ UWW ನಿಂದಲೂ ವರ್ಷಾಂತ್ಯದ ವರೆಗೆ ಬಜರಂಗ್ ಅಮಾನತು

kl rahul

KL Rahul; ಮಾಲಕರ ತರಾಟೆಯ ಬಳಿಕ ಲಕ್ನೋ ತಂಡದ ನಾಯಕತ್ವ ತೊರೆದ ರಾಹುಲ್?

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

pralhad joshi

Hubli; ಕಾಂಗ್ರೆಸ್ ಅಧಿಕಾರಕ್ಕಾಗಿ ದೇಶವನ್ನು ಒಡೆಯಲೂ ಹೇಸುವುದಿಲ್ಲ: ಪ್ರಹ್ಲಾದ ಜೋಶಿ

Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ

Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ

Dandeli: ಮದುವೆಗೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ… 8 ಮಂದಿಗೆ ಗಾಯ

Dandeli: ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ.. ಮಕ್ಕಳು ಸೇರಿ 8 ಮಂದಿಗೆ ಗಾಯ

ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ ಆಚರಣೆ

Kalaburagi; ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ ಆಚರಣೆ

Raichur; ಶ್ರೀ ಬಸವೇಶ್ವರ ಜಯಂತಿ ಆಚರಣೆ

Raichur; ಶ್ರೀ ಬಸವೇಶ್ವರ ಜಯಂತಿ ಆಚರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.