ಬ್ಯಾಡ್ಮಿಂಟನ್‌ ಸಿಂಗಲ್ಸ್‌: ಸಿಂಧು-ಸೈನಾ ಚಿನ್ನದ ಹೋರಾಟ


Team Udayavani, Apr 15, 2018, 6:10 AM IST

Sindhu-Saina-Gold-Fight.jpg

ಗೋಲ್ಡ್‌ಕೋಸ್ಟ್‌: ಭಾರತದ ಬ್ಯಾಡ್ಮಿಂಟನ್‌ ರಾಣಿಯರಾದ ಪಿ.ವಿ. ಸಿಂಧು ಮತ್ತು ಸೈನಾ ನೆಹ್ವಾಲ್‌ ಗೋಲ್ಡ್‌ಕೋಸ್ಟ್‌ ಗೇಮ್ಸ್‌ನ ಬಹು-ನಿರೀಕ್ಷಿತ ಬ್ಯಾಡ್ಮಿಂಟನ್‌ ವನಿತಾ ಸಿಂಗಲ್ಸ್‌ ಫೈನಲ್‌ನಲ್ಲಿ ಪರಸ್ಪರ ಎದುರಾಗಲಿದ್ದಾರೆ. ಇದರೊಂದಿಗೆ ಭಾರತಕ್ಕೆ 2 ಪದಕಗಳು ಖಾತ್ರಿಯಾಗಿವೆ. ಚಿನ್ನ ಯಾರಿಗೆ, ಬೆಳ್ಳಿ ಯಾರಿಗೆ ಎಂಬುದಷ್ಟೇ ರವಿವಾರದ ಕುತೂಹಲ. ಈ ನಡುವೆ ಕೆ. ಶ್ರೀಕಾಂತ್‌ ಪುರುಷರ ಸಿಂಗಲ್ಸ್‌ ಫೈನಲ್‌ನಲ್ಲಿ ಸೆಣಸಲಿದ್ದಾರೆ.

ಶನಿವಾರ ನಡೆದ ಸೆಮಿಫೈನಲ್‌ ಪಂದ್ಯದಲ್ಲಿ ಸಿಂಧು ಹಾಲಿ ಚಾಂಪಿಯನ್‌ ಕೆನಡಾದ ಮಿಚೆಲ್‌ ಲೀ ವಿರುದ್ಧ, ಸೈನಾ ಕ್ರಿಸ್ಟಿ ಗಿಲ್ಮೋರ್‌ ವಿರುದ್ಧ ಜಯ ಸಾಧಿಸಿದರು.

ಸಿಂಧು ಕೆನಡಾ ಆಟಗಾರ್ತಿ ಮಿಚೆಲ್‌ ಲೀಯನ್ನು 21-18, 21-8 ಅಂತರದಿಂದ ಸೋಲಿಸಿದರು. ಇಬ್ಬರ ನಡುವೆ 26 ನಿಮಿಷಗಳ ಸ್ಪರ್ಧೆ ನಡೆಯಿತು. ಇನ್ನೊಂದು ಪಂದ್ಯದಲ್ಲಿ ಮಾಜಿ ವಿಶ್ವ ನಂ. 1 ಆಟಗಾರ್ತಿ ಸೈನಾ, ಸ್ಕಾಟ್ಲೆಂಡ್‌ನ‌ ಗಿಲ್ಮೋರ್‌ ಅವರನ್ನು 21-14, 18-21, 21-17 ಅಂತರದಿಂದ ಸೋಲಿಸಿದರು.

ಇತ್ತೀಚೆಗಷ್ಟೇ ವಿಶ್ವ ನಂ. 1 ಸ್ಥಾನಕ್ಕೇರಿರುವ ಭಾರತದ ಸ್ಟಾರ್‌ ಆಟಗಾರ ಕಿಡಂಬಿ ಶ್ರೀಕಾಂತ್‌ ಕೂಡ ಫೈನಲ್‌ ಪ್ರವೇಶಿದ್ದು, ಭಾರತಕ್ಕೆ ಚಿನ್ನ ಅಥವಾ ಬೆಳ್ಳಿ ಲಭಿಸುವುದು ಖಾತ್ರಿಯಾಗಿದೆ. ಪುರುಷರ ಸಿಂಗಲ್ಸ್‌ನಲ್ಲಿ ವಿಶ್ವ ಅಗ್ರ ಶ್ರೇಯಾಂಕಿತ ಶ್ರೀಕಾಂತ್‌ ಇಂಗ್ಲೆಂಡ್‌ನ‌ ರಾಜೀವ್‌ ಔಸೆಫ್ ವಿರುದ್ಧ 21-10, 21-17 ಅಂತರದ ಗೆಲುವು ದಾಖಲಿಸಿದರು. 2010ರ ದಿಲ್ಲಿ ಗೇಮ್ಸ್‌ ಬೆಳ್ಳಿ ವಿಜೇತ ಆಟಗಾರನನ್ನು ಸೋಲಿಸಲು ಶ್ರೀಕಾಂತ್‌ಗೆ ಸುಮಾರು ಅರ್ಧ ಗಂಟೆ ಬೇಕಾಯಿತು.

ಇದಕ್ಕೂ ಮೊದಲಿನ ಪಂದ್ಯದಲ್ಲಿ ಮತ್ತೂಬ್ಬ ಭಾರತೀಯ ಉದಯೋನ್ಮುಖ ಆಟಗಾರ ಎಚ್‌.ಎಸ್‌. ಪ್ರಣಯ್‌ ಅವರು ಔಸೆಫ್ ವಿರುದ್ಧ 21-17, 23-25 ಸೋಲು ಕಂಡಿದ್ದರಿಂದ ಭಾರತಕ್ಕೆ ಲಭಿಸಲಿದ್ದ ಬೆಳ್ಳಿ ಕೈ ತಪ್ಪಿತು.

ಪುರುಷರ ಡಬಲ್ಸ್‌ನಲ್ಲಿ ಭಾರತದ ಸಾತ್ವಿಕ್‌ ರಾಂಕಿರೆಡ್ಡಿ-ಚಿರಾಗ್‌ ಶೆಟ್ಟಿ ಚಿನ್ನ ಗೆಲ್ಲಲು ಇನ್ನೊಂದೇ ಹೆಜ್ಜೆ ಬಾಕಿಯಿದೆ. ಸೆಮಿಫೈನಲ್‌ನಲ್ಲಿ ಭಾರತೀಯ ಜೋಡಿ ಶ್ರೀಲಂಕಾದ ಸಚಿನ್‌ ಡಯಾಸ್‌-ಭುವನೇಕ ಗುಣತಿಲಕ ವಿರುದ್ಧ 21-18, 21-10 ಗೆಲುವು ದಾಖಲಿಸಿ ಫೈನಲ್‌ ಪ್ರವೇಶಿಸಿತು.

ವನಿತಾ ಡಬಲ್ಸ್‌ನಲ್ಲಿ ಅಶ್ವಿ‌ನಿ ಪೊನ್ನಪ್ಪ-ಎನ್‌. ಸಿಕ್ಕಿ ರೆಡ್ಡಿ ಜೋಡಿ ಸ್ಥಳೀಯ ಸೇತ್ಯಾನಾ ಮಪಾಸಾ-ಗ್ರೋನಿಯಾ ಸೊಮೆರ್ವಿಲ್ಲೆ ವಿರುದ್ಧ 21-19, 21-19 ಅಂತರದಲ್ಲಿ  ಸೋಲುವ ಮೂಲಕ ಕಂಚಿಗೆ ತೃಪ್ತಿ ಪಟ್ಟುಕೊಂಡಿದೆ.

ಟಾಪ್ ನ್ಯೂಸ್

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.