ಬಾಕ್ಸಿಂಗ್‌: ಫೈನಲ್‌ಗೆ ಮೇರಿ ಕೋಮ್‌


Team Udayavani, Apr 12, 2018, 6:00 AM IST

14.jpg

ಗೋಲ್ಡ್‌ಕೋಸ್ಟ್‌: ಇದೇ ಮೊದಲ ಬಾರಿಗೆ ಕಾಮನ್ವೆಲ್ತ್‌ ಗೇಮ್ಸ್‌ನಲ್ಲಿ ಪಾಲ್ಗೊಂಡಿರುವ ಭಾರತದ ಸ್ಟಾರ್‌ ಬಾಕ್ಸರ್‌ ಮೇರಿ ಕೋಮ್‌ ಬುಧವಾರ ನಡೆದ ವನಿತೆಯರ 48 ಕೆಜಿ ವಿಭಾಗದ ಸ್ಪರ್ಧೆಯಲ್ಲಿ ಫೈನಲ್‌ ಪ್ರವೇಶಿಸಿದ್ದಾರೆ. ಐದು ಬಾರಿಯ ವಿಶ್ವ ಚಾಂಪಿಯನ್‌ ಮೇರಿಗೆ ಚಿನ್ನ ಗೆಲ್ಲಲು ಇನ್ನೊಂದೇ ಹೆಜ್ಜೆ ಬಾಕಿಯಿದೆ. ಪುರುಷರ ವಿಭಾಗದ ಸ್ಪರ್ಧೆಯಲ್ಲಿ ವಿಕಾಸ್‌ ಕೃಷ್ಣನ್‌ (75 ಕೆಜಿ), ಗೌರವ್‌ ಸೋಲಂಕಿ (52 ಕೆಜಿ) ಸೆಮಿಫೈನಲ್‌ ಪ್ರವೇಶಿಸಿದ್ದು, ಪದಕ ಖಾತ್ರಿಗೊಳಿಸಿದ್ದಾರೆ.

ಒಲಿಂಪಿಕ್‌ ಕಂಚಿನ ಪದಕ ವಿಜೇತೆ ಮೇರಿ ಕೋಮ್‌ ಅವರು ಹಾಲಿ ಚಾಂಪಿಯನ್‌ ಶ್ರೀಲಂಕಾದ ಅನುಷಾ ದಿಲುÅಕ್ಷಿ ಕೊಡಿದಿವಕ್ಕು ಅವರನ್ನು 5-0 ಅಂತರದಿಂದ ಕೊಡವಿದರು. 35ರ ಹರೆಯದ ಭಾರತೀಯ ಮತ್ತು 39ರ ಹರೆಯದ ಶ್ರೀಲಂಕಾ ಆಟಗಾರ್ತಿಯ ಈ ಕಾದಾಟ ಇಬ್ಬರು ಅನುಭವಿ ಬಾಕ್ಸರ್‌ಗಳ ನಡುವಿನ ಮೇಲಾಟವಾಗಿತ್ತು ಎನ್ನುವುದು ವಿಶೇಷ.

ಜಾಣ ಪಂಚ್‌
ತನಗಿಂತಲೂ ಎತ್ತರವಾಗಿದ್ದ ಎದುರಾಳಿ ಅದರ ಅನುಕೂಲ ಪಡೆದರೂ ಕುಗ್ಗದ ಮೇರಿ ಮೇಲುಗೈ ಸಾಧಿಸುತ್ತ ಹೋದರು. ಕೊಡಿದಿವಕ್ಕು ಅವರು ಪ್ರಮುಖ ಪಂಚ್‌ಗಳನ್ನು ನೀಡಲು ಪರದಾಡಿದರು. ಕೊನೆಯ 3  ನಿಮಿಷಗಳಲ್ಲಿ ಎದುರಾಳಿಯು ಗುದ್ದಾಟದಲ್ಲಿ ಕೊಂಚ ವೇಗವನ್ನು ಗಳಿಸಿದರಾದರೂ ಅನುಭವಿ ಬಾಕ್ಸರ್‌ ಮೇರಿ ಸಮಯ ವ್ಯಯಿಸಿ ಜಾಣತನ ಮೆರೆದು ಗೆಲುವನ್ನು ತನ್ನಡೆಗೆ ಸೆಳೆದುಕೊಂಡರು.

ಮೇರಿ ಕೋಮ್‌ ಫೈನಲ್‌ ಸ್ಪರ್ಧೆಯಲ್ಲಿ ಉತ್ತರ ಅಯರ್‌ಲ್ಯಾಂಡ್‌ನ‌ ಕ್ರಿಸ್ಟಿನಾ ಓ’ಹರ ಅವರನ್ನು ಎದುರಿಸಲಿದ್ದಾರೆ. ಅಯರ್‌ಲ್ಯಾಂಡಿನಲ್ಲಿ ನರ್ಸಿಂಗ್‌ ಹೋಮ್‌ ಒಂದನ್ನು ನಡೆಸುತ್ತಿರುವ ಓ’ಹರ ನ್ಯೂಜಿಲ್ಯಾಂಡಿನ 19ರ ಹರೆಯದ ಟಸ್ಮಿನ್‌ ಬೆನ್ನಿ ಅವರನ್ನು ಕೆಡವಿದರು. ಇನ್ನೊಂದು ಪಂದ್ಯದಲ್ಲಿ ಎಲ್‌. ಸರಿತಾ ದೇವಿ (60 ಕೆಜಿ) ಅವರು ಆಸ್ಟ್ರೇಲಿಯದ ಅಂಜಾ ಸ್ಟ್ರಿಡ್ಸ್‌ ಮನ್‌ ಅವರೆದುರು ಪರಾಭವಗೊಂಡು ಪದಕ ಸ್ಪರ್ಧೆಯಿಂದ ಹೊರಬಿದ್ದರು.

ಕ್ವಾರ್ಟರ್‌ ಫೈನಲ್‌ ಸೆಣಸಾಟದಲ್ಲಿ ಗೌರವ್‌ ಸೋಲಂಕಿ ಅವರು ಪಪುವ ನ್ಯೂಗಿನಿಯ ಚಾರ್ಲ್ಸ್‌ ಕೀಮ ಅವರನ್ನು 5-0 ಅಂತರದಿಂದ ಕೆಡವಿದರು. ಮಾಜಿ ಏಶ್ಯನ್‌ ಗೇಮ್ಸ್‌ ಚಿನ್ನದ ಪದಕ ವಿಜೇತ ವಿಕಾಸ್‌ ಕೃಷ್ಣನ್‌ ಜಾಂಬಿಯಾದ ಬೆನ್ನಿ ಮುಝಿಯೋ ವಿರುದ್ಧ ಮುನ್ನಡೆ ಸಾಧಿಸುವಲ್ಲಿ ಯಶಸ್ವಿಯಾದರು.

ಪುರುಷರಿಗೆ ಪದಕ ಖಾತ್ರಿ 
ಪುರುಷರ ವಿಭಾಗದಲ್ಲಿ ಗೌರವ್‌ ಸೋಲಂಕಿ ಮತ್ತು ವಿಶ್ವ ಚಾಂಪಿಯನ್‌ಶಿಪ್‌ ಕಂಚಿನ ಪದಕ ವಿಜೇತ ಬಾಕ್ಸರ್‌ ವಿಕಾಸ್‌ ಕೃಷ್ಣನ್‌ ಸೆಮಿಫೈನಲ್‌ ಪ್ರವೇಶಿಸುವ ಮೂಲಕ ಪದಕ ಖಾತ್ರಿ ಪಡಿಸಿದ್ದಾರೆ.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Shotgun

Shotgun ಶೂಟಿಂಗ್‌ ಅರ್ಹತಾ ಸುತ್ತಿನಲ್ಲಿ ಕರಣ್‌: ವಿವಾದ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.