ತ್ರಿವರ್ಣದೊಂದಿಗೆ ಸಾಗಿ ಬಂದ ಸಿಂಧು, ಮನ್‌ಪ್ರೀತ್‌


Team Udayavani, Jul 29, 2022, 11:33 PM IST

thumb sports commonwealth

ಬರ್ಮಿಂಗ್‌ಹ್ಯಾಮ್‌: ಬರ್ಮಿಂಗ್‌ಹ್ಯಾಮ್‌ ಕಾಮನ್ವೆಲ್ತ್‌ ಗೇಮ್ಸ್‌ಗೆ ಗುರುವಾರ ತಡರಾತ್ರಿ ಅದ್ಧೂರಿ ಹಾಗೂ ವರ್ಣರಂಜಿತ ಆರಂಭ ಲಭಿಸಿತು. ಪಥಸಂಚಲನದಲ್ಲಿ ಬ್ಯಾಡ್ಮಿಂಟನ್‌ ಸ್ಟಾರ್‌ ಪಿ.ವಿ. ಸಿಂಧು ಮತ್ತು ಹಾಕಿ ತಂಡದ ನಾಯಕ ಮನ್‌ಪ್ರೀತ್‌ ಸಿಂಗ್‌ ಭಾರತದ ತ್ರಿವರ್ಣ ಧ್ವಜ ಹಿಡಿದು ಸಾಗಿ ಬರುತ್ತಿದ್ದಂತೆಯೇ ಕ್ರೀಡಾಭಿಮಾನಿಗಳು ಪುಳಕಗೊಂಡರು.

ಆಸ್ಟ್ರೇಲಿಯದ ಕ್ರೀಡಾ ತಂಡದೊಂದಿಗೆ ಪಥಸಂಚಲನ ಮೊದಲ್ಗೊಂಡಿತು. 30 ಸಾವಿರದಷ್ಟು ವೀಕ್ಷಕರು ಈ ಭವ್ಯ ಸಮಾರಂಭವನ್ನು ಕಣ್ತುಂಬಿಸಿಕೊಂಡರು.

ರಾಜಕುಮಾರ ಚಾರ್ಲ್ಸ್‌ ಚಾಲನೆ
“ಅಲೆಕ್ಸಾಂಡರ್‌ ಸ್ಟೇಡಿಯಂ’ನಲ್ಲಿ ನಡೆದ ರಂಗುರಂಗಿನ ಸಮಾರಂಭಕ್ಕೆ ಬ್ರಿಟನ್‌ ರಾಜಕುಮಾರ ಚಾರ್ಲ್ಸ್‌
ಚಾಲನೆ ನೀಡಿದರು. ಅವರು ಈ ಸಮಾರಂಭದ ಮುಖ್ಯ ಅತಿಥಿಯಾಗಿದ್ದರು. ಪತ್ನಿ ಕಮಿಲಾ ಅವರೊಂದಿಗೆ ತಾವೇ ಕಾರು ಚಲಾಯಿಸಿಕೊಂಡು ಬಂದರು.

ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಡ್ರಮ್ಮರ್‌ ಅಬ್ರಹಾಂ ಪ್ಯಾಡಿ ಆರಂಭ ಒದಗಿಸಿದರು. ಲಂಡನ್‌ನಲ್ಲಿ ನೆಲೆಸಿರುವ ಭಾರತೀಯ ಮೂಲದ ಗಾಯಕಿ ಮತ್ತು ಸಂಗೀತ ಸಂಯೋಜಕಿ ರಂಜನಾ ಘಾಟಕ್‌ ಪ್ರೇಕ್ಷಕರಿಗೆ ಭರಪೂರ ರಂಜನೆ ಒದಗಿಸಿದರು.

ವೇದಿಕೆಯಲ್ಲಿ 72 ಕಾರು
ಸಮಾರಂಭದಲ್ಲಿ ಬರ್ಮಿಂಗ್‌ಹ್ಯಾಮ್‌ನ ಮೋಟಾರ್‌ ಉದ್ಯಮಕ್ಕೆ ವಿಶೇಷ ಗೌರವ ಸಲ್ಲಿಸಲಾಯಿತು. ಕಳೆದ 5 ದಶಕಗಳ 72 ವಾಹನಗಳು ವೇದಿಕೆಯನ್ನೇರಿ ಬ್ರಿಟನ್‌ ಧ್ವಜವಾದ “ಯೂನಿಯನ್‌ ಜಾಕ್‌’ ಆಕಾರ ತಾಳಿದ ದೃಶ್ಯಾವಳಿ ಎಲ್ಲರನ್ನೂ ಸೆಳೆಯಿತು. ವಿಂಟೇಜ್‌ ಹಾಗೂ ಮಿನಿ ಕೂಪರ್‌ ಕಾರುಗಳು ಇಲ್ಲಿ ಕಾಣಿಸಿಕೊಂಡವು.

ಸ್ವಾಗತ ಕೋರಿದ ಮಲಾಲ
ನೊಬೆಲ್‌ ಪ್ರಶಸ್ತಿ ಪುರಸ್ಕೃತ ಮಲಾಲ ಯೂಸಫಾಯಿ ಎಲ್ಲ ಕ್ರೀಡಾಪಟುಗಳಿಗೆ ಸ್ವಾಗತ ಕೋರಿ, ಶಿಕ್ಷಣ ಹಾಗೂ ಶಾಂತಿಯ ಸಂದೇಶ ನೀಡಿದರು. ಮಲಾಲಾ ತಮ್ಮ ಶಸ್ತ್ರಚಿಕಿತ್ಸೆ ಬಳಿಕ ಬರ್ಮಿಂಗ್‌ಹ್ಯಾಮ್‌ನಲ್ಲೇ ನೆಲೆಸಿದ್ದಾರೆ.

ಚಾಪ್ಲಿನ್‌, ಶೇಕ್ಸ್‌ಪಿಯರ್‌ ಸ್ಮರಣೆ
ಬರ್ಮಿಂಗ್‌ಹ್ಯಾಮ್‌ ನಗರ ಹೀರೋ ಆಗಿದ್ದ ಲೆಜೆಂಡ್ರಿ ಕಾಮಿಡಿಯನ್‌ ಚಾರ್ಲಿ ಚಾಪ್ಲಿನ್‌ ಅವರಿಗೆ ಗೌರವ ಸಲ್ಲಿಸಲಾಯಿತು. ಜತೆಗೆ ಖ್ಯಾತ ಆಂಗ್ಲ ನಾಟಕಕಾರ ವಿಲಿಯಂ ಶೇಕ್ಸ್‌ ಪಿಯರ್‌ ಅವರನ್ನೂ ಸ್ಮರಿಸಲಾಯಿತು. 1623ರಲ್ಲಿ ಮುದ್ರಣ ಕಂಡ ಅವರ ನಾಟಕಗಳ ಮೊದಲ ಬೃಹತ್‌ ಸಂಕಲನ, ಯುಕೆಯಲ್ಲೇ ಅತೀ ದೊಡ್ಡದಾದ ಬರ್ಮಿಂಗ್‌ಹ್ಯಾಮ್‌ ಸಾರ್ವಜನಿಕ ಗ್ರಂಥಾಲಯದಲ್ಲಿದೆ.

ಗೂಳಿ ಮೂಲಕ ಹೋರಾಟದ ಹಾದಿ
10 ಮೀಟರ್‌ ಉದ್ದದ ಬೃಹತ್‌ ಗೂಳಿ ಈ ಸಮಾರಂಭದ ವಿಶೇಷ ಆಕರ್ಷಣೆ ಆಗಿತ್ತು. ಈ ಗೂಳಿ ಮೂಲಕ ಬರ್ಮಿಂಗ್‌ಹ್ಯಾಮ್‌ನ ಹೋರಾಟದ ಹಾದಿ ಒಂದೊಂದಾಗಿ ತೆರೆಯಲ್ಪಟ್ಟಿತು.

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.