ಅವಳಿ ಚಿನ್ನಕ್ಕೆ ಮುತ್ತಿಟ್ಟ ಋತ್ವಿಕ್‌, ವಿಶ್ವನಾಥ ಗಾಣಿಗ

ಕಾಮನ್‌ವೆಲ್ತ್‌ ಪವರ್‌ಲಿಫ್ಟಿಂಗ್‌

Team Udayavani, Sep 19, 2019, 5:31 AM IST

Commonwealth-Powerlifting

ಮಂಗಳೂರು/ಕುಂದಾಪುರ: ಕೆನಡಾದ ಸೇಂಟ್‌ ಜೋನ್ಸ್‌ನಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್‌ ಅಂತಾರಾಷ್ಟ್ರೀಯ ಬೆಂಚ್‌ ಪ್ರಸ್‌ ಪವರ್‌ಲಿಫ್ಟಿಂಗ್‌ ಚಾಂಪಿಯನ್‌ಶಿಪ್‌ನಲ್ಲಿ ಮಂಗಳೂರಿನ ಋತ್ವಿಕ್‌ ಅಲೆವೂರಾಯ ಕೆ.ವಿ. ಮತ್ತು ಕುಂದಾಪುರದ ವಿಶ್ವನಾಥ ಗಾಣಿಗ ಅವಳಿ ಚಿನ್ನದೊಂದಿಗೆ ಸಂಭ್ರಮಿಸಿದ್ದಾರೆ. ವಿಶ್ವನಾಥ ಗಾಣಿಗ 2 ಬೆಳ್ಳಿ ಪದಕಗಳನ್ನೂ ಗೆಲ್ಲುವ ಜತೆಗೆ ಡೆಡ್‌ ಲಿಫ್ಟ್ನಲ್ಲಿ ನೂತನ ದಾಖಲೆ ಬರೆದದ್ದು ವಿಶೇಷವಾಗಿತ್ತು.

ಮಂಗಳೂರಿನ ಕದ್ರಿಯ ಋತ್ವಿಕ್‌ 83 ಕೆ.ಜಿ. ಸಬ್‌ ಜೂನಿಯರ್‌ ವಿಭಾಗದಲ್ಲಿ ಕ್ಲಾಸಿಕ್‌ ಮತ್ತು ಎಕ್ವಿಪ್ಡ್ ವಿಭಾಗದಲ್ಲಿ ಚಿನ್ನದ ಪದಕ ಜಯಿಸಿದರು.

ಡೆಡ್‌ ಲಿಫ್ಟ್ನಲ್ಲಿ ದಾಖಲೆ
ಕುಂದಾಪುರ ತಾಲೂಕಿನ ದೇವಲ್ಕುಂದ ನಿವಾಸಿಯಾಗಿರುವ ವಿಶ್ವನಾಥ ಗಾಣಿಗ ಡೆಡ್‌ ಲಿಫ್ಟ್ನಲ್ಲಿ 327.5 ಕೆಜಿ ತೂಕವೆತ್ತಿ 2011ರಲ್ಲಿ ಇಂಗ್ಲೆಂಡಿನ ಸ್ಟೀಫ‌ನ್‌ ಮ್ಯಾನ್ಯುವೆಲ್‌ ನಿರ್ಮಿಸಿದ್ದ 315 ಕೆ.ಜಿ. ದಾಖಲೆಯನ್ನು ಭಾರೀ ಅಂತರದಿಂದ ತಮ್ಮದಾಗಿಸಿಕೊಂಡರು. ಸ್ನ್ಯಾಚ್‌ನಲ್ಲಿ 295.1 ಕೆಜಿ, ಬೆಂಚ್‌ಪ್ರಸ್‌ನಲ್ಲಿ 180 ಕೆಜಿ ಭಾರವೆತ್ತಿ 2 ಬೆಳ್ಳಿ ಪದಕವನ್ನೂ ಗೆದ್ದರು. ಒಟ್ಟಾರೆ 802.5 ಕೆಜಿ ಸಾಧನೆಯೊಂದಿಗೆ ಚಿನ್ನ ಜಯಿಸಿದ್ದು ಇವರ ಹೆಗ್ಗಳಿಕೆ.

ದೂರವಾಣಿ ಮೂಲಕ “ಉದಯವಾಣಿ’ ಜತೆ ಮಾತಾಡಿದ ವಿಶ್ವನಾಥ ಗಾಣಿಗ, “ಕಳೆದ 6-7 ತಿಂಗಳಿಂದ ಸತತ ತರಬೇತಿ ಪಡೆದಿದ್ದೆ. ಇದಕ್ಕೆ ಸಿಕ್ಕಿದ ಫ‌ಲವಿದು. ವಿಶ್ವ ಮಟ್ಟದಲ್ಲಿ ಭಾರತದ ಕೀರ್ತಿ ಪತಾಕೆ ಹಾರಿಸಲು ಇಷ್ಟೆಲ್ಲ ಪರಿಶ್ರಮ ಪಡುವ ನಮ್ಮಂಥ ಕ್ರೀಡಾಪಟುಗಳಿಗೆ ಸರಕಾರ ನೆರವು ನೀಡಲಿ…’ ಎಂದರು.

ಎಂಜಿನಿಯರಿಂಗ್‌ ವಿದ್ಯಾರ್ಥಿ
ಬಾಲ್ಯದಲ್ಲಿಯೇ ಕ್ರೀಡಾ ಕ್ಷೇತ್ರದ ಬಗ್ಗೆ ಆಸಕ್ತಿ ಹೊಂದಿದ್ದ ಋತ್ವಿಕ್‌ ಅಲೆವೂರಾಯ ಅವರು ಈಗಾಗಲೇ ಅನೇಕ ರಾಜ್ಯ ಮತ್ತು ರಾಷ್ಟ್ರಮಟ್ಟದ ಪವರ್‌ ಲಿಫ್ಟ್‌ ಚಾಂಪಿಯನ್‌ಶಿಪ್‌ ಸ್ಪರ್ಧೆಗಳಲ್ಲಿ ಬಹುಮಾನ ಪಡೆದಿದ್ದಾರೆ. ಕಳೆದ ಕೆಲ ವರ್ಷಗಳಿಂದ ಪ್ರದೀಪ್‌ ಆಚಾರ್ಯ ಅವರಿಂದ ತರಬೇತಿ ಪಡೆಯುತ್ತಿದ್ದು, ಸಹ್ಯಾದ್ರಿ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಪ್ರಥಮ ವರ್ಷದ ಸಿವಿಲ್‌ ಎಂಜಿನಿರಿಂಗ್‌ ಕಲಿಯುತ್ತಿದ್ದಾರೆ.

ಋತ್ವಿಕ್‌ ಕಳೆದ ವರ್ಷ ಸ್ಕೌಟ್‌ನಲ್ಲಿ ಭಾರತೀಯ ಯೂತ್‌ ಅಂಬಾಸಿಡರ್‌ ಆಗಿ ಜಪಾನ್‌ಗೆ ತೆರಳಿದ್ದರು. ಋತ್ವಿಕ್‌ ಅವರಿಗೆ ಈ ಕ್ಷೇತ್ರದಲ್ಲಿ ಇಷ್ಟೊಂದು ಆಸಕ್ತಿ ಹುಟ್ಟಲು ಕಾರಣ ಅವರ ತಾಯಿ ದೀಪಾ. ಅವರು ಕೂಡ ಪವರ್‌ ಲಿಫ್ಟಿಂಗ್‌ನಲ್ಲಿ ಈಗಾಗಲೇ ರಾಜ್ಯ ಮತ್ತು ರಾಷ್ಟ್ರ ಮಟ್ಟವನ್ನು ಪ್ರತಿನಿಧಿಸಿದ್ದಾರೆ.

“ಮಗನ ಮೇಲೆ ವಿಶ್ವಾಸ ಇತ್ತು’
ಋತ್ವಿಕ್‌ ಅವರ ತಂದೆ ವಾಸುದೇವ ಭಟ್‌ ಕುಂಜತ್ತೋಡಿ ಅವರು “ಉದಯ ವಾಣಿ’ಗೆ ಪ್ರತಿಕ್ರಿಯಿಸಿ, “ಮಗ ಪದಕ ಗೆಲ್ಲುತ್ತಾನೆ ಎಂಬ ವಿಶ್ವಾಸ ಇತ್ತು. ಅದರಲ್ಲೂ ಚಿನ್ನದ ಪದಕ ಪಡೆದದ್ದು ತುಂಬ ಸಂತೋಷವಾಗಿದೆ. ಈ ಹಿಂದೆ 93 ಕೆ.ಜಿ. ಇದ್ದ ತೂಕ 83 ಕೆ.ಜಿ.ಗೆ ಇಳಿ ಸಲು ವರ್ಕ್‌ಔಟ್‌ಗಾಗಿ ಹಗಲು-ರಾತ್ರಿ ಕಷ್ಟಪಡುತ್ತಿದ್ದ’ ಎಂದು ತಿಳಿಸಿದ್ದಾರೆ. ಋತ್ವಿಕ್‌ ಅವರು ಶಾರದಾ ವಿದ್ಯಾನಿಕೇತನ ಶಾಲೆಯ ಹಳೆ ವಿದ್ಯಾರ್ಥಿಯಾಗಿದ್ದಾರೆ.

ಮಂಗಳವಾರ ಮಂಗಳೂರಿನ ಪ್ರದೀಪ್‌ ಕುಮಾರ್‌ ಆಚಾರ್ಯ ಕೂಡ ಚಿನ್ನ ಜಯಿಸಿದ್ದರು. ಇದರೊಂದಿಗೆ ಕೆನಡಾಕ್ಕೆ ತೆರಳಿದ ರಾಜ್ಯದ ಮೂವರೂ ಬಂಗಾರದೊಂದಿಗೆ ಮಿನುಗಿದ್ದು ವಿಶೇಷ. ಇವರೆಲ್ಲರೂ ಕರಾವಳಿಯವರೆಂಬುದು ಹೆಮ್ಮೆಯ ಸಂಗತಿ.

ಟಾಪ್ ನ್ಯೂಸ್

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1-asaas

Mumbai Indians; ಹಾರ್ದಿಕ್‌ ಪಾಂಡ್ಯ, ಬೌಷರ್‌ ಮೌನ!

1-wewewqe

‘Bangaluru’: ಅನ್‌ಬಾಕ್ಸ್‌  ಸಮಾರಂಭದಲ್ಲಿ ಆರ್‌ಸಿಬಿ ವನಿತೆಯರು

1-saddas-aa-4

IPL:ರಾಹುಲ್‌ ಫಿಟ್‌; ಕೀಪಿಂಗ್‌ ಡೌಟ್‌

1-saddas-aa-3

IPL; ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಿದ ಕೊಹ್ಲಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

12-malpe

Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.