ಟೀಂ ಇಂಡಿಯಾ ಆಟಗಾರರು ಕೋವಿಶೀಲ್ಡ್ ಲಸಿಕೆಯನ್ನು ಮಾತ್ರ ತೆಗೆದುಕೊಳ್ಳುತ್ತಿರುವುದು ಯಾಕೆ..?
Team Udayavani, May 11, 2021, 7:18 PM IST
ನವ ದೆಹಲಿ : ಟೀಮ್ ಇಂಡಿಯಾ ಆಟಗಾರರೆಲ್ಲರೂ ಲಸಿಕೆ ಪಡೆಯುತ್ತಿದ್ದಾರೆ, ನ್ಯೂಜಿಲೆಂಡ್ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ (ಡಬ್ಲ್ಯು ಟಿಸಿ) ಫೈನಲ್ ಮತ್ತು ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ತಂಡದಲ್ಲಿ ಆಯ್ಕೆಯಾದವರು ಜೂನ್ನಲ್ಲಿ ಯುಕೆಗೆ ತೆರಳುವ ಕಾರಣದಿಂದಾಗಿ ಆಟಗಾರರಿಗೆ ಲಸಿಕೆ ಸ್ವೀಕರಿಸುವಂತೆ ಬಿಸಿಸಿಐ ಸೂಚಿಸಿದೆ.
ಭಾರತದ ವೇಗಿ ಜಸ್ಪ್ರೀತ್ ಬುಮ್ರಾ ಅವರು ಮಂಗಳವಾರ (ಮೇ 11) ಕೋವಿಡ್ -19 ಲಸಿಕೆಯ ಮೊದಲ ಡೋಸ್ ಪಡೆದರೆ, ಸೋಮವಾರ (ಮೇ 10), ಭಾರತದ ಕ್ರಿಕೇಟ್ ತಂಡದ ನಾಯಕ ವಿರಾಟ್ ಕೊಹ್ಲಿ, ವೇಗಿ ಇಶಾಂತ್ ಶರ್ಮಾ ಮತ್ತು ಬ್ಯಾಟ್ಸ್ಮನ್ ಚೇತೇಶ್ವರ್ ಪೂಜಾರ ಮೊದಲ ಡೋಸ್ ಕೋವಿಡ್- 19 ಲಸಿಕೆಯನ್ನು ಸ್ವೀಕರಿಸಿದ್ದಾರೆ.
ಓದಿ : ಏ ನಾಲಾಯಕ್ ಫೋನ್ ಇಡು…. : ಮೃತಪಟ್ಟ ರೋಗಿಯ ಕುಟುಂಬಸ್ಥರೊಂದಿಗೆ ಸಿದ್ದು ಸವದಿ ಆಡಿಯೋ ವೈರಲ್
ಕಳೆದ ವಾರ, ಉಮೇಶ್ ಯಾದವ್, ಶಿಖರ್ ಧವನ್, ಅಜಿಂಕ್ಯ ರಹಾನೆ ಮತ್ತು ಅವರ ಪತ್ನಿ, ತಮ್ಮ ಮೊದಲ ಡೋಸ್ ಲಸಿಕೆಯನ್ನು ತೆಗೆದುಕೊಂಡಿದ್ದರು.
ಲಸಿಕೆಯ ಎರಡನೇ ಡೋಸ್ ಗೆ ಕನಿಷ್ಠ 28 ದಿನಗಳ ಅಂತರವನ್ನು ನೀಡಬೇಕಾದ ಕಾರಣದಿಂದಾಗಿ ಮತ್ತು ಜೂನ್ ಆರಂಭದಲ್ಲಿ ಟೀಮ್ ಇಂಡಿಯನ್ ತಂಡವು ಹೊರಹೋಗುವುದರಿಂದ ಇಂಗ್ಲೆಂಡ್ಗೆ ತೆರಳುವ 24 ಆಟಗಾರರು ಯುಕೆಯಲ್ಲಿರುತ್ತಾರೆ. ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸಮಯದಲ್ಲಿ ಭಾರತೀಯ ಆಟಗಾರರು ಎರಡನೇ ಡೋಸ್ ನನ್ನು ಅಲ್ಲಿಯೇ ಸುಲಭವಾಗಿ ತೆಗೆದುಕೊಳ್ಳಬಹುದು ಎಂಬ ಕಾರಣದಿಂದಾಗಿ ಟೀಮ್ ಇಂಡಿಯಾ ಬಾಯ್ಸ್ ಕೋವಿಶೀಲ್ಡ್ ಲಸಿಕೆಯನ್ನು ಸ್ವೀಕರಿಸುತ್ತಿದ್ದಾರೆ. ಕೋವಿಶೀಲ್ಡ್ ಆಕ್ಸ್ಫರ್ಡ್-ಅಸ್ಟ್ರಾಜೆನೆಕಾ ಲಸಿಕೆ ಯುಕೆ ಮೂಲದ ಉತ್ಪನ್ನವಾಗಿದೆ.
ಟೈಮ್ಸ್ ಆಫ್ ಇಂಡಿಯಾದೊಂದಿ ಗೆ ಮಾತನಾಡಿದ, ಬಿಸಿಸಿಐ, ” ಟೀಮ್ ಇಂಡಿಯಾ ಬರುವ ತಿಂಗಳಲ್ಲಿ ಟೀಮ್ ಇಂಡಿಯಾ ಪ್ರವಾಸದಲ್ಲಿರುವ ಕಾರಣದಿಂದಾಗಿ ಕೋವಿಶೀಲ್ಡ್ ಲಸಿಕೆಯನ್ನು ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ. ಯುಕೆ ನಲ್ಲಿಯೇ ಕೋವಿಶೀಲ್ಡ್ ಲಸಿಕೆಯ ಎರಡನೇ ಡೋಸ್ ನನ್ನು ಪಡೆಯಲು ಸುಲಭವಾಗುವುದರಿಂದ ಆಟಗಾರರಿಗೆ ಕೋವಿಶೀಲ್ಡ್ ಲಸಿಕೆಯನ್ನು ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ ಎಂದು ತಿಳಿಸಿದೆ.
ಡಬ್ಲ್ಯು ಟಿ ಸಿ ಫೈನಲ್ ಮತ್ತು ಇಂಗ್ಲೆಂಡ್ ಟೆಸ್ಟ್ ಪಂದ್ಯಗಳಿಗೆ ಭಾರತದ ಸಂಭಾವ್ಯ ತಂಡ :
ರೋಹಿತ್ ಶರ್ಮಾ, ಶುಬ್ಮನ್ ಗಿಲ್, ಮಾಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ಕ್ಯಾಪ್ಟನ್), ಅಜಿಂಕ್ಯ ರಹಾನೆ (ಉಪನಾಯಕ), ಹನುಮಾ ವಿಹಾರಿ, ರಿಷಭ್ ಪಂತ್ (ವಿಕೆಟ್ ಕೀಪರ್), ಆರ್. ಜಸ್ಪ್ರೀತ್ ಬುಮ್ರಾ, ಇಶಾಂತ್ ಶರ್ಮಾ, ಮೊಹಮ್ಮದ್. ಶಮಿ, ಎಂಡಿ ಸಿರಾಜ್, ಶಾರ್ದುಲ್ ಠಾಕೂರ್, ಉಮೇಶ್ ಯಾದವ್, ಕೆ.ಎಲ್. ರಾಹುಲ್, ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್)
ಸ್ಟ್ಯಾಂಡ್ ಬೈ ಆಟಗಾರರು : ಅಭಿಮನ್ಯು ಈಶ್ವರನ್, ಪ್ರಸಾದ್ ಕೃಷ್ಣ, ಅವೇಶ್ ಖಾನ್, ಅರ್ಜನ್ ನಾಗ್ವಾಸ್ವಾಲಾ.
ಓದಿ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಪ್ರತಿ ವ್ಯಕ್ತಿಯ ಮಾಹಿತಿ ನೀಡಲು ಗೌರವ್ ಗುಪ್ತ ಸೂಚನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್
ICC Men’s Test Team Rankings; ಎರಡನೇ ಸ್ಥಾನಕ್ಕೆ ಜಾರಿದ ಟೀಂ ಇಂಡಿಯಾ
Thomas Cup: ಬ್ಯಾಡ್ಮಿಂಟನ್; ಭಾರತದ ಆಟಕ್ಕೆ ತೆರೆ
Hockey: ವನಿತಾ ಹಾಕಿ ನಾಯಕತ್ವದಲ್ಲಿ ಪರಿವರ್ತನೆ: ಸವಿತಾ ಬದಲು ಸಲೀಮಾ ಟೇಟೆ
T20 World Cup Squad: “ಮಧ್ಯಮ ಕ್ರಮಾಂಕಕ್ಕೆ ಹೆಚ್ಚಿನ ಒತ್ತು’: ಅಜಿತ್ ಅಗರ್ಕರ್
MUST WATCH
ಹೊಸ ಸೇರ್ಪಡೆ
Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ
Honnavar; ಖಾಸಗಿ ಬಸ್ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ
Yellapur: ಟಿಪ್ಪರ್ ಗೆ ಢಿಕ್ಕಿಯಾಗಿ ಬೈಕ್ ಸಹಸವಾರೆ ಬಾಲಕಿ ಮೃತ್ಯು
CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ
Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?