ಐಪಿಎಲ್‌ ಮೇಲೆ ಕೊರೊನಾ ಬೌನ್ಸರ್‌: ಬಿಸಿಸಿಐ ಹೇಳುತ್ತಿರುವುದೇನು?


Team Udayavani, Apr 27, 2021, 9:09 AM IST

ಐಪಿಎಲ್‌ ಮೇಲೆ ಕೊರೊನಾ ಬೌನ್ಸರ್‌: ಬಿಸಿಸಿಐ ಹೇಳುತ್ತಿರುವುದೇನು?

ನವದೆಹಲಿ: ಭಾರತದಲ್ಲಿ ತೀವ್ರಗೊಳ್ಳುತಿರುವ ಕೊರೊನಾ ಕೇಸ್‌ನಿಂದಾಗಿ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್‌) ಕೂಡ ಇಕ್ಕಟ್ಟಿಗೆ ಸಿಲುಕುವ ಸೂಚನೆ ಲಭಿಸಿದೆ. ಆಸ್ಟ್ರೇಲಿಯದ ಬಹುತೇಕ ಆಟಗಾರರು ಕೂಟದಿಂದ ಹಿಂದೆ ಸರಿದು ತಾಯ್ನಾಡನ್ನು ಸೇರಿಕೊಳ್ಳುವ ನಿರ್ಧಾರಕ್ಕೆ ಬಂದಿದ್ದಾರೆ.

ಭಾರತೀಯ ಕ್ರಿಕೆಟಿಗ, ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ಪ್ರಧಾನ ಸ್ಪಿನ್ನರ್‌ ಆರ್‌.ಅಶ್ವಿ‌ನ್‌ ಕೂಡ ಐಪಿಎಲ್‌ನಲ್ಲಿ ಮುಂದುವರಿಯುವುದಿಲ್ಲ ಎಂದು ಹೇಳಿದ್ದಾರೆ. ಇವೆಲ್ಲವೂ ಐಪಿಎಲ್‌ ಪಾಲಿಗೆ ವ್ಯತಿರಿಕ್ತ ಬೆಳವಣಿಗೆಗಳಾಗಿವೆ.

ಈ ನಡುವೆ ಸೋಮವಾರದ ದಿಢೀರ್‌ ಬೆಳವಣಿಗೆ ಬಗ್ಗೆ ಪ್ರತಿಕ್ರಿಯಿಸಿದ ಬಿಸಿಸಿಐ, ಐಪಿಎಲ್‌ಗೆ ಯಾವುದೇ ಅಡ್ಡಿಯಾಗದು, ಆಟಗಾರರೆಲ್ಲ ಜೈವಿಕ ಸುರಕ್ಷಾ ವಲಯದಲ್ಲಿ ಇರುವುದರಿಂದ ಪಂದ್ಯಾವಳಿ ವೇಳಾಪಟ್ಟಿಯಂತೆ ಮುಂದುವರಿಯಲಿದೆ ಎಂದಿದೆ. ಆದರೆ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸಂಖ್ಯೆಯ ಕ್ರಿಕೆಟಿಗರು ಐಪಿಎಲ್‌ನಿಂದ ಹಿಂದೆ ಸರಿಯುವಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ

ಕೂಟದಿಂದ ತೆರಳಿದ ಆರ್‌.ಅಶ್ವಿನ್

ತಮಿಳುನಾಡಿನ ಸ್ಪಿನ್ನರ್‌ ಆರ್‌.ಅಶ್ವಿ‌ನ್‌ ತಮ್ಮ ಕೊರೊನಾ ಭೀತಿಯನ್ನು ಮುಕ್ತವಾಗಿ ತೆರೆದಿರಿಸಿದ್ದಾರೆ. ತನ್ನ ಕುಟುಂಬವೀಗ ಕೊರೊನಾ ವಿರುದ್ಧ ಹೋರಾಟ ನಡೆಸುತ್ತಿದೆ. ಅವರನ್ನು ಬೆಂಬಲಿಸುವ ಸಲುವಾಗಿ ನಾನು ಐಪಿಎಲ್‌ ಬಿಟ್ಟು ತೆರಳಲೇಬೇಕಿದೆ. ಪರಿಸ್ಥಿತಿ ಸುಧಾರಿಸಿದರಷ್ಟೇ ಮರಳಿ ತಂಡವನ್ನು ಸೇರಿಕೊಳ್ಳುತ್ತೇನೆ ಎಂದಿದ್ದಾರೆ.

ಭೀತಿಯಲ್ಲಿ ಕಾಂಗರೂ ಕ್ರಿಕೆಟಿಗರು

ತಮ್ಮ ದೇಶ ಲಾಕ್‌ಡೌನ್‌ ಆದರೆ ತ್ರಿಶಂಕು ಸ್ಥಿತಿ ಎದುರಾಗುತ್ತದೆ ಎಂಬುದು ಆಸ್ಟ್ರೇಲಿಯದ ಬಹುತೇಕ ಕ್ರಿಕೆಟಿಗರ ಭೀತಿ. ಅಲ್ಲದೇ ಭಾರತದ ಪ್ರಯಾಣಿಕರಿಗೆ ಹೆಚ್ಚಿನ ದೇಶಗಳಲ್ಲಿ ನಿರ್ಬಂಧವಿದೆ. ಇದಕ್ಕೆ ಆಸ್ಟ್ರೇಲಿಯವೂ ಹೊರತಲ್ಲ. ಈಗಾಗಲೇ ಕೇನ್‌ ರಿಚಡ್ಸìನ್‌, ಆ್ಯಡಂ ಝಂಪ (ಆರ್‌ಸಿಬಿ), ಆ್ಯಂಡ್ರ್ಯೂ ಟೈ (ರಾಜಸ್ಥಾನ್‌) ಹಿಂದೆ ಸರಿದ ಆಸ್ಟ್ರೇಲಿಯದ ಪ್ರಮುಖರು. ಕೆಕೆಆರ್‌ ತಂಡದ ಮೆಂಟರ್‌ ಡೇವಿಡ್‌ ಹಸ್ಸಿ ಕೂಡ ತವರಿಗೆ ವಾಪಸಾಗಲು ನಿರ್ಧರಿಸಿದ್ದಾರೆ.

ಆಟಗಾರರ ಸಂಪರ್ಕದಲ್ಲಿ ಕ್ರಿಕೆಟ್‌ ಆಸ್ಟ್ರೇಲಿಯಾ

ಈ ಬೆಳವಣಿಗೆ ಬಳಿಕ ಕ್ರಿಕೆಟ್‌ ಆಸ್ಟ್ರೇಲಿಯ ಮತ್ತು ಆಸ್ಟ್ರೇಲಿಯ ಕ್ರಿಕೆಟಿಗರ ಸಂಸ್ಥೆ ಜಂಟಿ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದು, ನಾವು ಭಾರತದಲ್ಲಿರುವ ಆಸ್ಟ್ರೇಲಿಯ ಕ್ರಿಕೆಟಿಗರು, ತರಬೇತುದಾರರು ಮತ್ತು ವೀಕ್ಷಕ ವಿವರಣೆಕಾರರ ಜತೆ ನಿರಂತರ ಸಂಪರ್ಕದಲ್ಲಿದ್ದೇವೆ. ಆಸ್ಟ್ರೇಲಿಯ ಸರ್ಕಾರದ ಸಲಹೆಗಳನ್ನೂ ಪಡೆಯಲಾಗುತ್ತಿದೆ. ಆದರೆ ಕೊರೊನಾದಿಂದ ತೀವ್ರ ಸಂಕಷ್ಟದಲ್ಲಿರುವ ಭಾರತದ ಜನತೆಗೆ ಸದಾ ನಮ್ಮ ಬೆಂಬಲ ಇರುತ್ತದೆ ಎಂದಿದೆ.

ಆಸೀಸ್‌ ಕ್ರಿಕೆಟಿಗರಿಗೆ ಪ್ರತ್ಯೇಕ ವಿಮಾನ?

ಐಪಿಎಲ್‌ ಮುಗಿದೊಡನೆ ಆಸೀಸ್‌ ಆಟಗಾರರನ್ನು ಕರೆಸಿಕೊಳ್ಳಲು ಅಲ್ಲಿನ ಸರ್ಕಾರ ಪ್ರತ್ಯೇಕ ವಿಮಾನವೊಂದನ್ನು ವ್ಯವಸ್ಥೆಗೊಳಿಸುವ ಸಾಧ್ಯತೆಯೂ ಇದೆ ಎನ್ನಲಾಗುತ್ತಿದೆ. ಕಾಂಗರೂ ನಾಡಿನ ಇನ್ನೂ 14 ಕ್ರಿಕೆಟಿಗರು ಐಪಿಎಲ್‌ನಲ್ಲಿ ಉಳಿದುಕೊಂಡಿದ್ದಾರೆ. ಇವರಲ್ಲಿ ಪ್ರಮುಖರೆಂದರೆ ಸ್ಟೀವನ್‌ ಸ್ಮಿತ್‌, ಡೇವಿಡ್‌ ವಾರ್ನರ್‌, ಪ್ಯಾಟ್‌ ಕಮಿನ್ಸ್‌, ಗ್ಲೆನ್‌ ಮ್ಯಾಕ್ಸ್‌ವೆಲ್‌ ಮೊದಲಾದವರು. ಜತೆಗೆ ತರಬೇತುದಾರರಾದ ರಿಕಿ ಪಾಂಟಿಂಗ್‌, ಸೈಮನ್‌ ಕ್ಯಾಟಿಚ್‌, ವೀಕ್ಷಕ ವಿವರಣೆಗಾರ್ತಿ ಲಿಸಾ ಸ್ಥಾಲೇಕರ್‌ ಕೂಡ ಇದ್ದಾರೆ.

ಟಾಪ್ ನ್ಯೂಸ್

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.