ಬೆಂಗಳೂರು ಏಕದಿನದಲ್ಲಿ ಬೆಟ್ಟಿಂಗ್: 11 ಮಂದಿ ಬಂಧನ
Team Udayavani, Jan 21, 2020, 11:04 AM IST
ನವದೆಹಲಿ: ಉದ್ಯಾನನಗರಿಯ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಭಾರತ -ಆಸ್ಟ್ರೇಲಿಯ ನಡುವಿನ ನಿರ್ಣಾಯಕ ಏಕದಿನ ಕ್ರಿಕೆಟ್ ಪಂದ್ಯದ ವೇಳೆ ಬೆಟ್ಟಿಂಗ್ ನಡೆದ ಪ್ರಕರಣ ಬೆಳಕಿಗೆ ಬಂದಿದೆ.
ನವದೆಹಲಿಯಲ್ಲಿ ಬೆಟ್ಟಿಂಗ್ ನಡೆದಿದ್ದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಒಟ್ಟು 11 ಮಂದಿಯನ್ನು ಬಂಧಿಸಲಾಗಿದೆ ಎಂದು ನವದೆಹಲಿ ಪೊಲೀಸರು ತಿಳಿಸಿದ್ದಾರೆ. “ಬಂಧಿತರಿಂದ 70 ಮೊಬೈಲ್ ಫೋನ್, 7 ಲ್ಯಾಪ್ಟಾಪ್ ವಶ ಪಡಿಸಿಕೊಳ್ಳಲಾಗಿದೆ. ಬಂಧಿತರು 2 ಕೋಟಿ ರೂ.ಗೂ ಹೆಚ್ಚುಹಣವನ್ನು ಬೆಟ್ಟಿಂಗ್ಗೆ ಬಳಸಿದ್ದರು’ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಎ.ಕೆ.ಸಿಂಗ್ಲಾ ತಿಳಿಸಿದ್ದಾರೆ.
ಬೆಂಗಳೂರು ಪಂದ್ಯದಲ್ಲಿ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ ಭರ್ಜರಿಯಾಗಿ ಗೆದ್ದಿತ್ತು. ಬೌಲಿಂಗ್ ನಲ್ಲಿ ಮೊಹಮ್ಮದ್ ಶಮಿ ಮಿಂಚಿದ್ದರೆ, ಬ್ಯಾಟಿಂಗ್ ನಲ್ಲಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಶ್ರೇಯಸ್ ಅಯ್ಯರ್ ಮಿಂಚಿದ್ದರು. ಈ ಮೂಲಕ ಸರಣಿಯನ್ನು ವಿರಾಟ್ ಪಡೆ 2-1 ಅಂತರದಿಂದ ಗೆದ್ದುಕೊಂಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Athletics: ಕಿರಿಯರ ಏಷ್ಯನ್ ಆ್ಯತ್ಲೆಟಿಕ್ಸ್ ಜಾವೆಲಿನ್ನಲ್ಲಿ ದೀಪಾಂಶುಗೆ ಬಂಗಾರ
Gukesh: ಚಾಂಪಿಯನ್ ಗುಕೇಶ್ಗೆ ಭವ್ಯ ಸ್ವಾಗತ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್