ಟೋನಿ ಲೂಯಿಸ್‌ ಇನ್ನಿಲ್ಲ

ಡಕ್‌ವರ್ತ್‌ ಲೂಯಿಸ್‌ ಸ್ಟೆರ್ನ್ ನಿಯಮದ ರೂವಾರಿ

Team Udayavani, Apr 3, 2020, 5:15 AM IST

ಟೋನಿ ಲೂಯಿಸ್‌ ಇನ್ನಿಲ್ಲ

ಲಂಡನ್‌: ನಿಗದಿತ ಓವರ್‌ಗಳ ಕ್ರಿಕೆಟ್‌ ಪಂದ್ಯಗಳು ಮಳೆಯಿಂದ ತೊಂದರೆಗೊಳಗಾದ ವೇಳೆ ಅಳವಡಿಸಲಾಗುವ ಡಕ್‌ವರ್ತ್‌ ಲೂಯಿಸ್‌ ಸ್ಟೆರ್ನ್ ನಿಯಮದ ರೂವಾರಿಗಳಲ್ಲಿ ಒಬ್ಬರಾದ ಟೋನಿ ಲೂಯಿಸ್‌ (78)ಅವರು ನಿಧನ ಹೊಂದಿದರು ಎಂದು ಇಂಗ್ಲೆಂಡ್‌ ಆ್ಯಂಡ್‌ ವೇಲ್ಸ್‌ ಕ್ರಿಕೆಟ್‌ ಮಂಡಳಿ (ಇಸಿಬಿ) ತಿಳಿಸಿದೆ.

ಟೋನಿ ಅವರ ನಿಧನಕ್ಕೆ ಇಂಗ್ಲೆಂಡ್‌ ಕ್ರಿಕೆಟ್‌ ಮಂಡಳಿ ತೀವ್ರ ಸಂತಾಪ ವ್ಯಕ್ತಪಡಿಸಿದೆ. ಟೋನಿ ಮತ್ತು ಸಹ ಗಣಿತಜ್ಞ ಫ್ರ್ಯಾಂಕ್‌ ಡಕ್‌ವರ್ತ್‌ ಅವರು ಡಕ್‌ವರ್ತ್‌ ಲೂಯಿಸ್‌ ನಿಯಮವನ್ನು 1997ರಲ್ಲಿ ಕಂಡುಹುಡುಕಿದ್ದರು ಮತ್ತು 1999ರಲ್ಲಿ ಇಂಟರ್‌ನ್ಯಾಶನಲ್‌ ಕ್ರಿಕೆಟ್‌ ಕೌನ್ಸಿಲ್‌ (ಐಸಿಸಿ) ಆಧಿಕೃತವಾಗಿ ಅನುಷ್ಠಾನ ಮಾಡಿಕೊಂಡಿತ್ತು. 2014ರಲ್ಲಿ ಇದರ ಹೆಸರನ್ನು ಡಕ್‌ವರ್ತ್‌ ಲೂಯಿಸ್‌ ಸ್ಟೆರ್ನ್ ನಿಯಮವೆಂದು ಪುನರ್‌ ಹೆಸರಿಸಲಾಗಿತ್ತು.

ಎಂಬಿಇ ಗೌರವ
ಟೋನಿ ಮತ್ತು ಫ್ರ್ಯಾಂಕ್‌ ಅವರು ಕ್ರಿಕೆಟಿಗೆ ನೀಡಿರುವ ಸೇವೆ ಅವಿಸ್ಮರಣೀಯ ಎಂದು ತಿಳಿಸಿದ ಇಸಿಬಿ ಟೋನಿ ಅವರ ಕುಟುಂಬ ಸದಸ್ಯರಿಗೆ ದುಃಖ ಸಹಿಸುವ ಸಾಮರ್ಥ್ಯ ದೇವರು ಕರುಣಿಸಲಿ ಎಂದು ತಿಳಿಸಿದೆ. ಕ್ರಿಕೆಟ್‌ ಮತ್ತು ಗಣಿತಶಾಸ್ತ್ರಕ್ಕೆ ನೀಡಿದ ಸೇವೆಗಾಗಿ ಟೋನಿ ಅವರಿಗೆ 2010ರಲ್ಲಿ ಮೆಂಬರ್‌ ಆಫ್ ದ ಆರ್ಡರ್‌ ಆಫ್ ದ ಬ್ರಿಟಿಷ್‌ ಎಂಪೈರ್‌ (ಎಂಬಿಇ) ಗೌರವ ನೀಡಲಾಗಿತ್ತು.

ಒಂದು ಎಸೆತ 22 ರನ್‌ ಗುರಿ
1992ರ ವಿಶ್ವಕಪ್‌ ಸೆಮಿಫೈನಲ್‌ ಪಂದ್ಯಕ್ಕೆ ಮಳೆ ತೊಂದರೆ ನೀಡಿದ ವೇಳೆ ದಕ್ಷಿಣ ಆಫ್ರಿಕಾ ಗೆಲುವಿಗೆ ಅಸಾಮಾನ್ಯ ಗುರಿ ನೀಡಲ್ಪಟ್ಟ ಹಿನ್ನೆಲೆಯಲ್ಲಿ ಈ ಸಂಬಂಧ ಸೂಕ್ತವಾದ ನಿಯಮವೊಂದನ್ನು ಜಾರಿಗೊಳಿಸುವತ್ತ ಕ್ರಿಕೆಟ್‌ ವಲಯಗಳಲ್ಲಿ ಚರ್ಚೆ ಆರಂಭವಾಗಿತ್ತು.
ಈ ಹಿಂದೆ ತಂಡಗಳ ಇನ್ನಿಂಗ್ಸ್‌ನ ಕಡಿಮೆ ರನ್‌ ಗಳಿಸಿದ ಓವರ್‌ಗಳನ್ನು ತೆಗೆದ ಆಧಾರದಲ್ಲಿ ಗುರಿ ನೀಡಲಾಗುತ್ತಿತ್ತು. ಈ ಆಧಾರದಲ್ಲಿ ಇಂಗ್ಲೆಂಡ್‌ ವಿರುದ್ಧ ದಕ್ಷಿಣ ಆಫ್ರಿಕಾ ಗೆಲುವಿಗೆ 13 ಎಸೆತಗಳಿಂದ 22 ರನ್‌ ಇರುವಾಗ ಮಳೆ ಬಂದು ತೊಂದರೆ ನೀಡಿತು. ಮಳೆ ನಿಂತ ಬಳಿಕ ಆಟ ಆರಂಭವಾದಾಗ ದಕ್ಷಿಣ ಆಫ್ರಿಕಾಕ್ಕೆ 1 ಎಸೆತದಲ್ಲಿ 21 ರನ್‌ ತೆಗೆಯುವ ಗುರಿಯನ್ನು ನೀಡಲಾಗಿತ್ತು.

ಟಾಪ್ ನ್ಯೂಸ್

2-kushtagi

Polls:ಮತದಾನ ಮಾಡಲು ಬೈಕ್ ನಲ್ಲಿ ಬರುತ್ತಿದ್ದ ಯುವಕನಿಗೆ ಅಪರಿಚಿತ ವಾಹನ ಡಿಕ್ಕಿ; ಸವಾರ ಸಾವು

1-bantwala

Crime: ಮಂಗಳೂರಿನ ಅವಿವಾಹಿತ ಯುವಕ ಬಿಸಿರೋಡಿನಲ್ಲಿ ನೇಣುಬಿಗಿದು ಆತ್ಮಹತ್ಯೆ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqqwewq

Must win ಡೆಲ್ಲಿ ಪ್ಲೇ ಆಫ್ ಆಸೆ ಜೀವಂತ: ರಾಜಸ್ಥಾನ್‌ ರಾಯಲ್ಸ್‌ ಸವಾಲು

CSK (2)

CSK; ಬಸ್‌ ಕಂಡಕ್ಟರ್‌ಗಳಿಗೆ ಚೆನ್ನೈ ಕಿಂಗ್ಸ್‌ನಿಂದ 8 ಸಾವಿರ ಅಗತ್ಯ ಗಿಫ್ಟ್ !

1-sss

Central government ಒಪ್ಪಿದರೆ ಪಾಕ್‌ಗೆ ಭಾರತ ಕ್ರಿಕೆಟ್‌ ತಂಡ: ರಾಜೀವ್‌ ಶುಕ್ಲ

1-wewqewqe

T20 ಸರಣಿ; ಬಾಂಗ್ಲಾ ಎದುರು ಭಾರತ ವನಿತೆಯರಿಗೆ 56 ರನ್‌ ಗೆಲುವು: 4-0 ಮುನ್ನಡೆ

PCB

Pakistan ಟಿ20 ವಿಶ್ವಕಪ್‌ ಗೆದ್ದರೆ ಪ್ರತಿ ಆಟಗಾರರಿಗೆ 1 ಲಕ್ಷ ಡಾಲರ್‌ ಬಹುಮಾನ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

2-kushtagi

Polls:ಮತದಾನ ಮಾಡಲು ಬೈಕ್ ನಲ್ಲಿ ಬರುತ್ತಿದ್ದ ಯುವಕನಿಗೆ ಅಪರಿಚಿತ ವಾಹನ ಡಿಕ್ಕಿ; ಸವಾರ ಸಾವು

1-bantwala

Crime: ಮಂಗಳೂರಿನ ಅವಿವಾಹಿತ ಯುವಕ ಬಿಸಿರೋಡಿನಲ್ಲಿ ನೇಣುಬಿಗಿದು ಆತ್ಮಹತ್ಯೆ

Namma Metro: ಮೆಟ್ರೋದಲ್ಲಿ ಯುವಕ-ಯುವತಿ ಅಪ್ಪುಗೆ ಪಯಣ

Namma Metro: ಮೆಟ್ರೋದಲ್ಲಿ ಯುವಕ-ಯುವತಿ ಅಪ್ಪುಗೆ ಪಯಣ

Crime: ಶೀಲ ಶಂಕಿಸಿ ಪತ್ನಿ ಮೇಲೆ ಕಲ್ಲುಎತ್ತಿ ಹಾಕಿದ ಪತಿ!

Crime: ಶೀಲ ಶಂಕಿಸಿ ಪತ್ನಿ ಮೇಲೆ ಕಲ್ಲುಎತ್ತಿ ಹಾಕಿದ ಪತಿ!

15

Bengaluru: ಅಪಘಾತ ಗಲಾಟೆ: ಕಪಾಳಮೋಕ್ಷಕ್ಕೆ ವ್ಯಕ್ತಿ  ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.