Cricket World Cup: ಸದೀರ ಅಜೇಯ ಆಟ; ಲಂಕಾಗೆ ಮೊದಲ ವಿಕ್ರಮ


Team Udayavani, Oct 21, 2023, 6:47 PM IST

Cricket World Cup 2023: Sri Lanka registered secured win against Netherlands

ಲಕ್ನೋ: ಕೂಟದಲ್ಲಿ ಸತತ ಮೂರು ಪಂದ್ಯಗಳಲ್ಲಿ ಸೋಲನುಭವಿಸಿ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದ್ದ ಶ್ರೀಲಂಕಾ ಇಂದು ಮೊದಲ ಜಯ ಸಾಧಿಸಿದೆ. ನೆದರ್ಲ್ಯಾಂಡ್ ವಿರುದ್ಧ ಲಕ್ನೋದಲ್ಲಿ ನಡೆದ ಪಂದ್ಯದಲ್ಲಿ ಶ್ರೀಲಂಕಾ ತಂಡವು ಐದು ವಿಕೆಟ್ ಅಂತರದ ಗೆಲುವು ಸಾಧಿಸಿದೆ.

ಮೊದಲು ಬ್ಯಾಟಿಂಗ್ ಮಾಡಿದ ನೆದರ್ಲ್ಯಾಂಡ್ ತಂಡವು 49.4 ಓವರ್ ಗಳಲ್ಲಿ 262 ರನ್ ಪೇರಿಸಿದರೆ, ಸದೀರ ಸಮರವಿಕ್ರಮ ಬ್ಯಾಟಿಂಗ್ ನೆರವಿನಿಂದ ಲಂಕಾವು 48.2 ಓವರ್ ಗಳಲ್ಲಿ ಐದು ವಿಕೆಟ್ ಕಳೆದುಕೊಂಡು ಗುರಿ ತಲುಪಿ ಜಯ ಸಾಧಿಸಿತು.

ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ ಡಚ್ಚರು ಆರಂಭದಲ್ಲಿ ವಿಕೆಟ್ ಕಳೆದುಕೊಂಡು ಸಂಕಷ್ಟ ಅನುಭವಿಸಿದರು. ಒಂದು ಹಂತದಲ್ಲಿ 91 ರನ್ ಗಳಿಗೆ ಆರು ವಿಕೆಟ್ ಕಳೆದುಕೊಂಡಿತ್ತು. ಈ ಹಂತದಲ್ಲಿ ಸೈಬ್ರಾಂಡ್ ಎಂಗಲ್‌ಬ್ರೆಕ್ಟ್ ಮತ್ತು ವ್ಯಾನ್ ಬೀಕ್ ಸೇರಿ ಏಳನೇ ವಿಕೆಟ್ ಗೆ 130 ರನ್ ಜೊತೆಯಾಟವಾಡಿದರು. ಸೈಬ್ರಾಂಡ್ 70 ರನ್ ಗಳಿಸಿದರೆ, ವ್ಯಾನ್ ಬೀಕ್ 59 ರನ್ ಗಳಿಸಿದರು.

ಲಂಕಾ ಪರ ಕಸುನ್ ರಜಿತಾ ಮತ್ತು ದಿಲ್ಶನ್ ಮಧುಶನಕ ತಲಾ ನಾಲ್ಕು ವಿಕೆಟ್ ಕಿತ್ತರು. ಲಂಕಾ ಬೌಲರ್ ಗಳು 33 ರನ್ ಗಳನ್ನು ಎಕ್ಸ್ಟಾ ರೂಪದಲ್ಲಿ ಬಿಟ್ಟುಕೊಟ್ಟರು.

ಚೇಸಿಂಗ್ ಆರಂಭಿಸಿದ ಲಂಕಾ ಕುಸಾಲ್ ಪೆರೇರಾ ಮತ್ತು ಕುಸಾಲ್ ಮೆಂಡಿಸ್ ರೂಪದಲ್ಲಿ ಎರಡು ವಿಕೆಟ್ ಆರಂಭದಲ್ಲೇ ಕಳೆದುಕೊಂಡರೂ ನಿಸ್ಸಾಂಕ ಮತ್ತು ಸದೀರ ತಂಡವನ್ನು ಆಧರಿಸಿದರು. ನಿಸ್ಸಾಂಕ 54 ರನ್ ಮಾಡಿದರೆ, ಕೊನೆಯವರೆಗೂ ನಿಂತು ಆಡಿದ ಸದೀರ ಸಮರವಿಕ್ರಮ ಅಜೇಯ 91 ರನ್ ಗಳಿಸಿದರು. ಚರಿತ ಅಸಲಂಕ 44 ರನ್ ಮತ್ತು ಧನಂಜಯ ಡಿಸಿಲ್ವ 30 ರನ್ ಮಾಡಿದರು.

ಮೊದಲ ಗೆಲುವು ಸಾಧಿಸಿದ ಶ್ರೀಲಂಕಾ ಅಂಕಪಟ್ಟಿಯಲ್ಲಿ ಒಂದು ಸ್ಥಾನ ಮೇಲಕ್ಕೇರಿ 9ನೇ ಸ್ಥಾನದಲ್ಲಿದೆ. ಮುಂದಿನ ಪಂದ್ಯದಲ್ಲಿ ಅದು ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ. ಮತ್ತೊಂದೆಡೆ ನೆದರ್ಲ್ಯಾಂಡ್ ತಂಡವು ಆಸ್ಟ್ರೆಲಿಯಾವನ್ನು ಎದುರಿಸಲಿದೆ.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

1-wewweq

IPL; ಬೌಲರ್‌ಗಳನ್ನು ಕಾಪಾಡಿ: ಅಶ್ವಿ‌ನ್‌ ವಿನಂತಿ!

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.