ಪ್ಲೆಸಿಸ್,ತಾಹಿರ್ ಗೆ ಮತ್ತೆ ಅವಮಾನ ಮಾಡಿದ ದ.ಆಫ್ರಿಕಾ ಕ್ರಿಕೆಟ್ ಮಂಡಳಿ! ಕಿಡಿಕಾರಿದ ಸ್ಟೇನ್
Team Udayavani, Oct 16, 2021, 2:31 PM IST
ಮುಂಬೈ: ಒಂದು ಕಾಲದ ಕ್ರಿಕೆಟ್ ಪವರ್ ಹೌಸ್ ದಕ್ಷಿಣ ಆಫ್ರಿಕಾ ಕ್ರಿಕೆಟ್ ಮಂಡಳಿಯಲ್ಲಿ ಸದ್ಯ ಎಲ್ಲವೂ ಸರಿಯಿಲ್ಲ ಎನ್ನುವುದು ಮತ್ತೆ ಮತ್ತೆ ಬಯಲಾಗುತ್ತಿದೆ. ಇದಕ್ಕೆ ನೂತನ ನಿದರ್ಶನ ಹಿರಿಯ ಆಟಗಾರರಾದ ಫಾಫ್ ಡು ಪ್ಲೆಸಿಸ್ ಮತ್ತು ಇಮ್ರಾನ್ ತಾಹಿರ್ ಗೆ ಮಾಡಿದ ಅವಮಾನ!
ಉತ್ತಮ ಫಾರ್ಮ್ ನಲ್ಲಿರುವ ಫಾಫ್ ಡು ಪ್ಲೆಸಿಸ್ ಮತ್ತು ಇಮ್ರಾನ್ ತಾಹಿರ್ ರನ್ನು ಟಿ20 ವಿಶ್ವಕಪ್ ತಂಡದಿಂದ ಕೈಬಿಟ್ಟ ದಕ್ಷಿಣ ಆಫ್ರಿಕಾ ಕ್ರಿಕೆಟ್ ಮಂಡಳಿಯ ನಡೆ ಅಚ್ಚರಿಗೆ ಕಾರಣವಾಗಿತ್ತು. ಟಿ20 ವಿಶ್ವಕಪ್ ಆಡಬೇಕೆಂಬ ಕಾರಣಕ್ಕೆ ಪ್ಲೆಸಿಸ್ ಇತರ ಮಾದರಿ ಕ್ರಿಕೆಟ್ ಗೆ ವಿದಾಯ ಹೇಳಿದ್ದರು. ಸಿಪಿಎಲ್ ಮತ್ತು ಐಪಿಎಲ್ ನಲ್ಲಿ ಮಿಂಚಿದ್ದ ಪ್ಲೆಸಿಸ್ ರನ್ನು ಕಡೆಗಣಿಸಲಾಗಿತ್ತು. ಇಮ್ರಾನ್ ತಾಹಿರ್ ಗೂ ಹೀಗೆ ಮಾಡಲಾಗಿತ್ತು.
ಇದನ್ನೂ ಓದಿ:ಕೊನೆಗೂ ಫಲ ನೀಡಿತು ಗಂಗೂಲಿ ಪ್ರಯತ್ನ: ಟೀಂ ಇಂಡಿಯಾ ಮುಖ್ಯ ಕೋಚ್ ಸ್ಥಾನಕ್ಕೆ ದ್ರಾವಿಡ್ ನೇಮಕ
ಶುಕ್ರವಾರ ನಡೆದ ಐಪಿಎಲ್ ಫೈನಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಜಯಶಾಲಿಯಾಯಿತು. ಫಾಫ್ ಡು ಪ್ಲೆಸಿಸ್ ಅವರು 86 ರನ್ ಬಾರಿಸಿ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಚೆನ್ನೈ ಗೆಲುವಿನ ಬಳಿಕ ಕ್ರಿಕೆಟ್ ಸೌತ್ ಆಫ್ರಿಕಾ ಅಭಿನಂದಿಸಿ ಟ್ವೀಟ್ ಮಾಡಿದ್ದು, ಆದರೆ ಚೆನ್ನೈ ತಂಡದಲ್ಲಿದ್ದ ಲುಂಗಿ ಎನ್ ಗಿಡಿ ಅವರಿಗೆ ಮಾತ್ರ ಅಭಿನಂದಿಸಿದೆ. ಫಾಫ್ ಡುಪ್ಲೆಸಿಸ್ ಮತ್ತು ಇಮ್ರಾನ್ ತಾಹಿರ್ ರನ್ನು ಕಡೆಗಣಿಸಲಾಗಿದೆ.
ದಕ್ಷಿಣ ಆಫ್ರಿಕಾ ಕ್ರಿಕೆಟ್ ನ ಟ್ವೀಟ್ ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಆಟಗಾರ ಡೇಲ್ ಸ್ಟೇನ್, “ ಈ ಟ್ವಿಟ್ಟರ್ ಖಾತೆಯನ್ನು ಯಾರು ನಿರ್ವಹಿಸುತ್ತಿದ್ದಾರೆ? ಫಾಪ್ ಮತ್ತು ತಾಹಿರ್ ಇದುವರೆಗೆ ನಿವೃತ್ತಿ ಹೊಂದಿಲ್ಲ. ಇವರಿಬ್ಬರು ಇಷ್ಟು ವರ್ಷಗಳ ಕಾಲ ದಕ್ಷಿಣ ಆಫ್ರಿಕಾ ಕ್ರಿಕೆಟ್ ಗೆ ಸೇವೆ ಸಲ್ಲಿಸಿದ್ದಾರೆ. ಆದರೆ ಅವರನ್ನು ಉಲ್ಲೇಖಿಸುವಷ್ಟೂ ಯೋಗ್ಯರಲ್ಲವೇ? ಇದು ಅಸಹ್ಯಕರ” ಎಂದು ಕಿಡಿಕಾರಿದ್ದಾರೆ.
ತಮ್ಮ ಟ್ವೀಟ್ ಗೆ ವಿರೋಧ ಎದುರಾಗುತ್ತಿದ್ದಂತೆ ದಕ್ಷಿಣ ಆಫ್ರಿಕಾ ಕ್ರಿಕೆಟ್ ಮಂಡಳಿ ಟ್ವೀಟ್ ನ್ನು ಡಿಲೀಟ್ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
IPL; ಲಕ್ನೋ ಸೂಪರ್ ಜೈಂಟ್ಸ್ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ
IPL; ಆಸ್ಟ್ರೇಲಿಯನ್ ಆಲ್ರೌಂಡರ್ ಮಾರ್ಷ್ ಔಟ್
IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್ ನೀಡಿದ ಆರ್ಸಿಬಿ!
IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ
MUST WATCH
ಹೊಸ ಸೇರ್ಪಡೆ
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
PM Modi:ನನ್ನ 90 ಸೆಕೆಂಡ್ ಭಾಷಣ ಕಾಂಗ್ರೆಸ್, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ
Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್