2024ರ ಐಪಿಎಲ್ ನಲ್ಲಿ ಧೋನಿ ಆಡುತ್ತಾರಾ?: ಮಹತ್ವದ ಮಾಹಿತಿ ನೀಡಿದ ಸಿಎಸ್ ಕೆ ಸಿಇಒ


Team Udayavani, Jun 23, 2023, 12:15 PM IST

ms-dhoni

ಚೆನ್ನೈ: 2023ರ ಐಪಿಎಲ್ ನಲ್ಲಿ ಅತೀ ಹೆಚ್ಚು ಚರ್ಚಿತ ವಿಚಾರವೆಂದರೆ ಅದು ಮಹೇಂದ್ರ ಸಿಂಗ್ ಧೋನಿ ಅವರ ವಿದಾಯದ ಬಗ್ಗೆ. ಫಿಟ್ ಇರದಿದ್ದರೂ ಸಂಪೂರ್ಣ ಕೂಟದ ಆಡಿದ್ದ ಎಂಎಸ್ ಧೋನಿ ಫೈನಲ್ ಗೆದ್ದ ಬಳಿಕ ವಿದಾಯ ಹೇಳುತ್ತಾರೆ ಎನ್ನಲಾಗಿತ್ತು. ಆದರೆ ಫೈನಲ್ ನಲ್ಲಿ ಮಾತನಾಡಿದ ಧೋನಿ, ಇದರ ಬಗ್ಗೆ ನಿರ್ಧಾರ ಮಾಡಲು ಇನ್ನೂ 6-7 ತಿಂಗಳ ಸಮಯವಿದೆ ಎಂದು ಹೇಳಿದ್ದರು. ಇದೀಗ ಧೋನಿ ಅವರ ಐಪಿಎಲ್ ಭವಿಷ್ಯದ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸಿಇಒ ಕಾಸಿ ವಿಶ್ವನಾಥನ್ ಅವರು ಈ ಬಗ್ಗೆ ಮಾತನಾಡಿದ್ದಾರೆ. ಧೋನಿ ತಮ್ಮ ಶಸ್ತ್ರಚಿಕಿತ್ಸೆಯ ಬಗ್ಗೆ ತಂಡಕ್ಕೆ ಫೈನಲ್ ಆದ ತಕ್ಷಣ ಮಾಹಿತಿ ನೀಡಿದ್ದಾರೆ ಎಂದು ಅವರು ಬಹಿರಂಗಪಡಿಸಿದ್ದಾರೆ.

ಇದನ್ನೂ ಓದಿ:ಒಂದು ಕ್ಷಣವೂ ವೇಸ್ಟ್ ಮಾಡುತ್ತಿಲ್ಲ, ಆದಷ್ಟು ಬೇಗ ಬರುತ್ತೇನೆ: ಹೊಸ ಚಿತ್ರದ ಬಗ್ಗೆ ಯಶ್

“ಫೈನಲ್ ಮುಗಿದ ತಕ್ಷಣ ಅವರು ಮುಂಬೈಗೆ ಹೋಗಿ ಶಸ್ತ್ರಚಿಕಿತ್ಸೆಗೆ ಒಳಗಾಗುವುದಾಗಿ ನಮಗೆ ಹೇಳಿದರು. ಮುಂಬೈನಲ್ಲಿ, ರುತುರಾಜ್ ಅವರ ಮದುವೆಯ ನಂತರ (ಜೂನ್ 4 ರಂದು) ನಾನು ಅವರನ್ನು ಭೇಟಿ ಮಾಡಿದೆ. ಅದೊಂದು ಸೌಜನ್ಯದ ಭೇಟಿಯಾಗಿತ್ತು. ಅವರು ಸಾಕಷ್ಟು ಆರಾಮದಲ್ಲಿದ್ದರು. ಮೂರು ವಾರಗಳ ಕಾಲ ವಿಶ್ರಾಂತಿ ಪಡೆಯುತ್ತೇನೆ ಮತ್ತು ನಂತರ ಪುನರ್ವಸತಿ ಪ್ರಾರಂಭಿಸುತ್ತೇನೆ ಎಂದು ಹೇಳಿದರು. ಅವರು ಹೇಳಿದಂತೆ, ಜನವರಿ-ಫೆಬ್ರವರಿ ತನಕ ಧೋನಿ ಆಡಲು ಹೋಗುವುದಿಲ್ಲ” ಎಂದು ವಿಶ್ವನಾಥನ್ ಇಎಸ್‌ಪಿಎನ್‌ ಕ್ರಿಕ್‌ ಇನ್‌ಫೋ ವೆಬ್‌ಸೈಟ್‌ ಗೆ ತಿಳಿಸಿದರು.

“ಅವರಿಗೆ ಏನು ಮಾಡಬೇಕೆಂದು ತಿಳಿದಿದೆ, ಆದ್ದರಿಂದ ನಾವು ಧೋನಿ ಬಳಿ ‘ನೀವು ಏನು ಮಾಡಲಿದ್ದೀರಿ, ಹೇಗೆ’ ಇತ್ಯಾದಿಗಳನ್ನು ಕೇಳಲು ಹೋಗುವುದಿಲ್ಲ. ಅವರು ಸ್ವತಃ ನಮಗೆ ತಿಳಿಸುತ್ತಾರೆ. ಅವರು ಏನು ಮಾಡಿದರೂ, ಅವರು ಮೊದಲು ಕರೆ ಮಾಡುತ್ತಾರೆ. ಎನ್ ಶ್ರೀನಿವಾಸನ್ ಅವರಿಗೆ ಮಾತ್ರ ತಿಳಿಸುತ್ತಾರೆ, ಬೇರೆ ಯಾರಿಗೂ ಇಲ್ಲ. ಶ್ರೀನಿವಾಸನ್ ರಿಂದ ಮಾಹಿತಿಯನ್ನು ನಾವು ಪಡೆಯುತ್ತೇವೆ. ಇದು 2008 ರಿಂದ ಹೀಗೆಯೇ ಇದೆ. ಹೀಗೆಯೇ ಮುಂದುವರಿಯುತ್ತದೆ ” ಎಂದು ವಿಶ್ವನಾಥನ್ ಹೇಳಿದರು.

ಜುಲೈ 7ಕ್ಕೆ ಧೋನಿಗೆ 42 ವರ್ಷ ತುಂಬುತ್ತದೆ. ಸದ್ಯ ಧೋನಿ ರಾಂಚಿಯಲ್ಲಿ ವಿಶ್ರಾಂತಿಯಲ್ಲಿದ್ದಾರೆ.

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.