![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-415x229.jpg)
CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್
ಲಕ್ನೋ ವಿರುದ್ಧ ಸೆಂಚುರಿ ಬಾರಿಸಿ ಗಾಯಕ್ವಾಡ್ ವಿಶಿಷ್ಟ ದಾಖಲೆ
Team Udayavani, Apr 24, 2024, 7:00 AM IST
![CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್](https://www.udayavani.com/wp-content/uploads/2024/04/ruturaj-620x342.jpg)
ಚೆನ್ನೈ: ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಬ್ಯಾಟಿಂಗ್ ಅಬ್ಬರ ನಡೆಸಿರುವ ಚೆನ್ನೈ ಸೂಪರ್ ಕಿಂಗ್ಸ್ನ ನಾಯಕ ಋತುರಾಜ್ ಗಾಯಕ್ವಾಡ್, ಈ ಐಪಿಎಲ್ನ 8ನೇ ಶತಕ ಶತಕ ಸಿಡಿಸಿದ್ದಾರೆ. ಇದಲ್ಲದೆ ಗಾಯಕ್ವಾಡ್, ಶತಕ ಬಾರಿಸಿದ ಚೆನ್ನೈ ಕಿಂಗ್ಸ್ ತಂಡದ ಮೊದಲ ನಾಯಕನೆಂಬ ವಿಶಿಷ್ಟ ದಾಖಲೆಯನ್ನೂ ನಿರ್ಮಿಸಿದ್ದಾರೆ.
ಇದು ಒಟ್ಟಾರೆ ಐಪಿಎಲ್ನಲ್ಲಿ ಗಾಯಕ್ವಾಡ್ ಬಾರಿಸಿರುವ 2ನೇ ಶತಕ. ಮಂಗಳವಾರದ ಪಂದ್ಯದಲ್ಲಿ ಗಾಯಕ್ವಾಡ್, 60 ಎಸೆತಗಳಲ್ಲಿ 12 ಬೌಂಡರಿ, 3 ಸಿಕ್ಸರ್ ಸಹಿತ ಅಜೇಯ 108 ರನ್ ಚಚ್ಚಿದರು.
ಋತುರಾಜ್ ಗಾಯಕ್ವಾಡ್ ಶತಕವೂ ಸೇರಿ ಈ ಐಪಿಎಲ್ ಸೀಸನ್ನಲ್ಲಿ ಈಗಾಗಲೇ ಗಣನೀಯ ಸಂಖ್ಯೆಯ ಶತಕಗಳು ದಾಖಲಾಗಿವೆ. ಇದಕ್ಕೂ ಮುನ್ನ ವಿರಾಟ್ ಕೊಹ್ಲಿ, ಟ್ರಾವಿಸ್ ಹೆಡ್, ರೋಹಿತ್ ಶರ್ಮ, ಸುನೀಲ್ ನಾರಾಯಣ್, ಜೋಸ್ ಬಟ್ಲರ್ (2 ಬಾರಿ), ಯಶಸ್ವಿ ಜೈಸ್ವಾಲ್ ಶತಕ ಬಾರಿಸಿದ್ದರು.
ಟಾಸ್ ಸೊತು ಬ್ಯಾಟಿಂಗ್ಗೆ ಇಳಿಸಲ್ಪಟ್ಟ ಚೆನ್ನೈ ಸೂಪರ್ ಕಿಂಗ್ಸ್ನಿಂದ ಅಜಿಂಕ್ಯ ರಹಾನೆ ಬೇಗನೆ ಔಟಾದರಾದರೂ, ಋತುರಾಜ್ ಮತ್ತು ಶಿವಂ ದುಬೆ ಆಟ ತಂಡದ ಮೊತ್ತ ಉಬ್ಬಿಸಿತು. ಋತುರಾಜ್ ನಾಯಕನ ಆಟದ ಜೊತೆಗೆ ಶಿವಂ ದುಬೆ ಸ್ಫೋಟಕ ಅರ್ಧಶತಕ (66) ನೆರವಿನೊಂದಿಗೆ ಚೆನ್ನೈ, 20 ಓವರ್ಗಳಲ್ಲಿ 210 ರನ್ ಕಲೆ ಹಾಕಿತು.
ಟಾಪ್ ನ್ಯೂಸ್
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.