CWC2023 ಟೀಂ ಇಂಡಿಯಾದ ಮಧ್ಯಮ ಕ್ರಮಾಂಕ ಹೆಸರಿಸಿದ ಸೆಹವಾಗ್; ಸ್ಟಾರ್ ಬ್ಯಾಟರ್ ಗಿಲ್ಲ ಚಾನ್ಸ್
Team Udayavani, Oct 1, 2023, 4:22 PM IST
ಮುಂಬೈ: ಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್ ಇನ್ನು ಕೆಲವೇ ದಿನಗಳಲ್ಲಿ ಆರಂಭವಾಗಲಿದೆ. ಮೊದಲ ಪಂದ್ಯದಲ್ಲಿ ಕಳೆದ ವಿಶ್ವಕಪ್ ಫೈನಲಿಸ್ಟ್ ಗಳಾದ ಇಂಗ್ಲೆಂಡ್ ಮತ್ತು ನ್ಯೂಜಿಲ್ಯಾಂಡ್ ಮುಖಾಮುಖಿಯಾಗಲಿದೆ. ಕಪ್ ಗೆಲ್ಲುವ ಫೇವರೆಟ್ ತಂಡಗಳಲ್ಲಿ ಒಂದಾದ ಭಾರತವೂ ತನ್ನ ಅಭ್ಯಾಸ ಆರಂಭಿಸಿದೆ.
ಭಾರತದ ಮಾಜಿ ಆಟಗಾರ ವೀರೆಂದ್ರ ಸೆಹವಾಗ್ ಅವರು ಟೀಂ ಇಂಡಿಯಾದ ಮಿಡಲ್ ಆರ್ಡರ್ ಬ್ಯಾಟಿಂಗ್ ಬಗ್ಗೆ ಮಾತನಾಡಿದ್ದಾರೆ. ಇತ್ತೀಚೆಗಷ್ಟೇ ಮುಕ್ತಾಯಗೊಂಡ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲಿ ಶತಕ ಬಾರಿಸಿದ ನಂತರ ಶ್ರೇಯಸ್ ಅಯ್ಯರ್ ಅವರು ವಿಶ್ವಕಪ್ ಆಡುವ ಬಳಗದಲ್ಲಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾರೆ ಎಂದು ಸೆಹವಾಗ್ ಹೇಳಿದ್ದಾರೆ.
ಭಾರತದ ಮಧ್ಯಮ ಕ್ರಮಾಂಕವನ್ನು ಹೆಸರಸಿದ ಸೆಹವಾಗ್, ನಂ. 4 ರಲ್ಲಿ ಬ್ಯಾಟಿಂಗ್ ಗೆ ಶ್ರೇಯಸ್ ಅಯ್ಯರ್, ನಂ. 5 ರಲ್ಲಿ ಕೆಎಲ್ ರಾಹುಲ್ ಅವರನ್ನು ಆಯ್ಕೆ ಮಾಡಿದ್ದಾರೆ. ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರು ವಿಶ್ವಕಪ್ ನಲ್ಲಿ ನಂ. 6 ರಲ್ಲಿ ಬ್ಯಾಟಿಂಗ್ ಮಾಡಬೇಕು ಎಂದರು. ಪರಿಣಾಮವಾಗಿ, ಇಶಾನ್ ಕಿಶನ್ ಮತ್ತು ಸೂರ್ಯಕುಮಾರ್ ಯಾದವ್ ಇಬ್ಬರೂ ಆಡುವ ಬಳಗದಲ್ಲಿ ಅವಕಾಶ ಪಡೆಯುವುದು ಕಷ್ಟ ಎಂದು ಅವರು ಹೇಳಿದರು.
ರಾಹುಲ್ ಮತ್ತು ಹಾರ್ದಿಕ್ ಇರುವ ಕಾರಣ 7ನೇ ಕ್ರಮಾಂಕದಲ್ಲಿ ಬ್ಯಾಟರ್ ನ ಅಗತ್ಯವಿಲ್ಲ. ನಾವು ಇಶಾನ್ ಕಿಶನ್ ಆಡಬಹುದು ಎಂದು ಯೋಚಿಸಿದ್ದೆವು. ಆದರೆ ಶ್ರೇಯಸ್ ಅಯ್ಯರ್ ಅವರ ಶತಕದ ಬಳಿಕ ಅವರೇ ಫಿಕ್ಸ್ ಆಗಿದ್ದಾರೆ ಎಂದು ಸೆಹವಾಗ್ ಹೇಳಿದ್ದಾರೆ.
ಇದನ್ನೂ ಓದಿ:350 Years ಬಳಿಕ ಛತ್ರಪತಿ ಶಿವಾಜಿಯ ‘ಹುಲಿ ಉಗುರುಗಳ ಆಯುಧ’ ಭಾರತಕ್ಕೆ ಮರಳಲಿದೆ
“ಈಗ ಭಾರತವು ಈ ಸಂಯೋಜನೆಯನ್ನು ಹೇಗೆ ನೋಡುತ್ತದೆ ಎಂಬುದರ ಮೇಲೆ ಅವಲಂಬಿತವಾಗಿದೆ, ಹಾರ್ದಿಕ್ ಖಂಡಿತವಾಗಿಯೂ 10 ಓವರ್ಗಳನ್ನು ಬೌಲ್ ಮಾಡುತ್ತಾರೆ ಎಂದು ಅವರು ಭಾವಿಸುತ್ತಾರೆಯೇ, ಏಕೆಂದರೆ ಅದು ಭಾರತಕ್ಕೆ ಹೆಚ್ಚುವರಿ ಬೌಲರ್ ನೀಡುತ್ತದೆ. ಹಾಗಾಗಿ ಸೂರ್ಯಕುಮಾರ್ ಅಲ್ಲಿಗೆ ಹೊಂದಿಕೊಳ್ಳಲು ಸಾಧ್ಯವಿಲ್ಲ ಮತ್ತು ಒಂದು ವೇಳೆ ಸ್ಲಾಟ್ ಇದ್ದರೂ, ಇಶಾನ್ ಎಡಗೈ ಆಟಗಾರನಾಗಿರುವುದರಿಂದ ಅವರಿಗೆ ಅವಕಾಶ ಹೆಚ್ಚು”ಎಂದು ಅವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್
PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್
IPL: ಆಟ ಮೆರೆದಾಟ; ಬ್ಯಾಟಿಂಗ್ ಅಷ್ಟೇ ಕ್ರಿಕೆಟ್ಟಾ?
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
MUST WATCH
ಹೊಸ ಸೇರ್ಪಡೆ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ