CWC 2023; ಯಾವುದೇ ತಂಡವನ್ನು ಸೋಲಿಸುವ ವಿಶ್ವಾಸ ಬಂದಿದೆ: ಮೊದಲ ಗೆಲುವಿನ ಬಳಿಕ ರಶೀದ್ ಖಾನ್


Team Udayavani, Oct 16, 2023, 9:48 AM IST

CWC 2023; ಯಾವುದೇ ತಂಡವನ್ನು ಸೋಲಿಸುವ ವಿಶ್ವಾಸ ಬಂದಿದೆ: ಮೊದಲ ಗೆಲುವಿನ ಬಳಿಕ ರಶೀದ್ ಖಾನ್

ಹೊಸದಿಲ್ಲಿ: ಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್ 2023ರ ಮೊದಲ ಅಪ್ ಸೆಟ್ ಗೆ ದಿಲ್ಲಿಯ ಅರುಣ್ ಜೇಟ್ಲಿ ಸ್ಟೇಡಿಯಂ ಸಾಕ್ಷಿಯಾಗಿದೆ. ಹಾಲಿ ವಿಶ್ವ ಚಾಂಪಿಯನ್ ಇಂಗ್ಲೆಂಡ್ ಗೆ ಸೋಲುಣಿಸಿದ ಅಫ್ಘಾನಿಸ್ತಾನ ತಂಡವು ಈ ಕೂಟದ ಮೊದಲ ಗೆಲುವು ಕಂಡಿದೆ.

ಇಂಗ್ಲೆಂಡ್ ವಿರುದ್ಧ 69 ರನ್ ಅಂತರದ ಗೆಲುವು ಕಂಡ ಬಳಿಕ ಅಫ್ಘಾನಿಸ್ತಾನವು ಯಾವುದೇ ತಂಡವನ್ನೂ ಸೋಲಿಸಬಹುದು ಎಂಬ ನಂಬಿಕೆ ಬಂದಿದೆ ಎಂದು ಸ್ಪಿನ್ನರ್ ರಶೀದ್ ಖಾನ್ ಹೇಳಿದ್ದಾರೆ.

“ಇದು ನಮಗೆ ದೊಡ್ಡ ಗೆಲುವಾಗಿದೆ. ಈ ರೀತಿಯ ಪ್ರದರ್ಶನವು ಯಾವುದೇ ದಿನದಲ್ಲಿ ನಾವು ಯಾವುದೇ ತಂಡವನ್ನು ಸೋಲಿಸಬಹುದು ಎಂಬ ನಂಬಿಕೆಯನ್ನು ನಮಗೆ ನೀಡುತ್ತದೆ. ತವರಿನ ಜನರಿಗೆ ಸಂತೋಷವನ್ನು ನೀಡುತ್ತದೆ. ಇಂಗ್ಲೆಂಡ್ ವಿರುದ್ಧದ ಪಂದ್ಯದ ಗೆಲುವು ನಮಗೆ ದೊಡ್ಡದು. ಇತ್ತೀಚೆಗೆ ಅಫ್ಘಾನಿಸ್ತಾನ ಭೂಕಂಪ ಕಂಡಿದೆ. ಸುಮಾರು 3000 ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡರು. ಈ ವಿಜಯವು ತವರಿನ ಜನರಿಗೆ ನಗುವನ್ನು ನೀಡುತ್ತದೆ ಎಂದು ನಾನು ಭಾವಿಸುತ್ತೇನೆ” ಎಂದು ರಶೀದ್ ಖಾನ್ ತಿಳಿಸಿದರು.

ಇದನ್ನೂ ಓದಿ:Bigg Boss Kannada: ಬಿಗ್‌ಬಾಸ್‌ ಮನೆಗೆ ಚಾರ್ಲಿ ಯಾಕೆ ಹೋಗಿಲ್ಲ?

” ಪಂದ್ಯಾವಳಿಯಲ್ಲಿ ಏನೇ ಆಗಲಿ, ನಾವು ಕೊನೆಯವರೆಗೂ ಹೋರಾಡಬೇಕು. ನಾವು ನಮಗಾಗಿ ಸಣ್ಣ ಗುರಿಗಳನ್ನು ಮಾಡಿದ್ದೇವೆ. ಆಟ ಮುಗಿಸಿ ಹೋಟೆಲ್ ಗೆ ಹಿಂತಿರುಗುವಾಗ ನೀವು ನಿಮ್ಮ 100% ಅನ್ನು ನೀಡಿದ್ದೀರಿ ಎಂದು ನೀವು ಸಂತೋಷಪಡಬೇಕು ಎಂದು ಡ್ರೆಸ್ಸಿಂಗ್ ರೂಮ್‌ನಲ್ಲಿರುವ ಎಲ್ಲರಿಗೂ ನಾನು ಸ್ಪಷ್ಟಪಡಿಸಿದ್ದೆ” ಎಂದು ರಶೀದ್ ಹೇಳಿದರು.

ರವಿವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನ್, 49.5 ಓವರ್ ನಲ್ಲಿ 284 ರನ್ ಗಳಿಸಿತು. ಗುರ್ಬಾಜ್ 80 ರನ್ ಗಳಿಸಿದರೆ, ಇಕ್ರಮ್ ಇಲಿಖಿಲ್ 58 ರನ್ ಮಾಡಿದರು. ಗುರಿ ಬೆನ್ನತ್ತಿದ ಇಂಗ್ಲೆಂಡ್ ಕೇವಲ 40.3 ಓವರ್ ಗಳಲ್ಲಿ 215 ರನ್ ಗೆ ಆಲೌಟಾಯಿತು. ಮುಜೀಬ್ ಮತ್ತು ರಶೀದ್ ತಲಾ ಮೂರು ವಿಕೆಟ್ ಕಿತ್ತರೆ, ನಬಿ ಎರಡು ವಿಕೆಟ್ ಪಡೆದರು. ಆಂಗ್ಲರ ಪರ ಹ್ಯಾರಿ ಬ್ರೂಕ್ 66 ರನ್ ಮಾಡಿದರು.

ಟಾಪ್ ನ್ಯೂಸ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.