“ನಿಮ್ಮಿಂದ ದೇಶದ ಹೆಸರು ಪ್ರಜ್ವಲಿಸಿತು’; ಪದಕವೀರ ಗುರುರಾಜ್‌ ಪೂಜಾರಿಗೆ ಉದಯವಾಣಿ ಗೌರವ


Team Udayavani, Aug 11, 2022, 6:20 AM IST

“ನಿಮ್ಮಿಂದ ದೇಶದ ಹೆಸರು ಪ್ರಜ್ವಲಿಸಿತು’; ಪದಕವೀರ ಗುರುರಾಜ್‌ ಪೂಜಾರಿಗೆ ಉದಯವಾಣಿ ಗೌರವ

ಮಣಿಪಾಲ:ಐದನೇ ಬಾರಿ ಭಾರವನ್ನು ಮೇಲಕ್ಕೆತ್ತುತ್ತಿದ್ದಂತೆಯೇ ಭಾರತದ ಜನರ ನಿರೀಕ್ಷೆ ಮೇರೆ ಮೀರಿತು. ಪದಕ ಘೋಷಣೆ ಆಗುತ್ತಿದ್ದಂತೆಯೇ ದೇಶದ ಹೆಸರು ಗುರುರಾಜ್‌ರಿಂದಾಗಿ ಪ್ರಜ್ವಲಿಸು ವಂತಾಯಿತು. ಭಾರತ ಪದಕ ಪಟ್ಟಿಯಲ್ಲಿ ಮುಂಚೂಣಿಯಲ್ಲಿ ಇರುವಂತಾಯಿತು ಎಂದು ಮಣಿಪಾಲ್‌ ಮೀಡಿಯಾ ನೆಟ್‌ವರ್ಕ್‌ ಲಿಮಿಟೆಡ್‌ನ‌ ಆಡಳಿತ ನಿರ್ದೇಶಕ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿನೋದ್‌ ಕುಮಾರ್‌ ಹೇಳಿದರು.

ಅವರು ಬುಧವಾರ “ಉದಯವಾಣಿ’ ಕಚೇರಿಯಲ್ಲಿ ಕಾಮನ್ವೆಲ್ತ್‌ ಗೇಮ್ಸ್‌ನ ವೇಟ್‌ಲಿಫ್ಟಿಂಗ್‌ನಲ್ಲಿ ಕಂಚಿನ ಪದಕ ಗೆದ್ದ ಗುರುರಾಜ್‌ ಪೂಜಾರಿ ಅವರನ್ನು ಸಂಸ್ಥೆಯ ವತಿಯಿಂದ ಅಭಿನಂದಿಸಿ ಮಾತನಾಡಿದರು.

ಸಮಸ್ತ ಭಾರತೀಯರ ಆಶೀರ್ವಾದ ಗುರುರಾಜ್‌ ಮೇಲಿತ್ತು. ಪದಕದಿಂದಾಗಿ ಕರಾವಳಿ ಕರ್ನಾಟಕ, ಕುಂದಾಪುರದ ಹೆಸರು ಜಾಜ್ವಲ್ಯಮಾನವಾಯಿತು. ಅನಾರೋಗ್ಯದಿಂದಿದ್ದರೂ ಕೊನೆಕ್ಷಣದಲ್ಲಿ ಸಾಧನೆ ಮಾಡಲು ಶಕ್ತಿಯನ್ನು ಭಗವಂತನೇ ಕರುಣಿಸಿದ. ನಿಮ್ಮ ಆತ್ಮಬಲ, ಪರಿಶ್ರಮ, ಬದ್ಧತೆ ಪ್ರಶ್ನಾತೀತ. ಅದಕ್ಕಾಗಿ ನಮಗೆಲ್ಲ ಹೆಮ್ಮೆ ಎನಿಸುತ್ತದೆ. ಯುವಕರಿಗೆ ಸ್ಫೂರ್ತಿಯಾದಿರಿ. ಪದಕ ಗೆದ್ದ ನಿಮಗೆ ನಮ್ಮ ಸಂಸ್ಥೆಯ ವತಿಯಿಂದ ಹೃತ್ಪೂರ್ವಕ ಅಭಿನಂದನೆಗಳು. ಮುಂದಿನ ಬಾರಿ ಚಿನ್ನದ ಪದಕವೇ ದೊರೆಯುವಂತಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇವೆ ಎಂದರು.

ಒಬ್ಬ ಕ್ರೀಡಾಪಟುವಿಗೆ ನೀಡಬೇಕಾದ ಮಾನ್ಯತೆ, ಪ್ರಾಶಸ್ತ್ಯವನ್ನು “ಉದಯವಾಣಿ’ ಸದಾ ನೀಡುತ್ತದೆ. ನಿಮಗೂ ಮುಂದಿನ ದಿನಗಳಲ್ಲಿ ಯಾವುದೇ ರೀತಿಯ ಬೆಂಬಲದ ಅವಶ್ಯವಿದ್ದರೆ ಪತ್ರಿಕೆ ಖಂಡಿತವಾಗಿಯೂ ನೀಡುತ್ತದೆ ಎಂದರು.

ಸಮ್ಮಾನಕ್ಕೆ ಉತ್ತರಿಸಿದ ಗುರುರಾಜ್‌, ಎಲ್ಲೇ ಸಮ್ಮಾನ, ಅಭಿನಂದನೆ ನಡೆದರೂ ಹುಟ್ಟೂರಲ್ಲಿ ಸಮ್ಮಾನ ಪಡೆಯಲು ವಿಶೇಷ ಅಭಿಮಾನವಾಗುತ್ತದೆ. ಪತ್ರಿಕೋದ್ಯಮ ವ್ಯಾಸಂಗ ಮಾಡಿ ಕ್ರೀಡೆಯಲ್ಲಿ ಸಾಧನೆ ಮಾಡಿದ ನನ್ನನ್ನು ಗುರುತಿಸಿ, ಬೆಂಬಲಿಸಿ, ಪ್ರೋತ್ಸಾಹಿಸಿದ “ಉದಯವಾಣಿ’ಗೆ ಧನ್ಯವಾದಗಳು ಎಂದರು.

ಬಳಿಕ ಗುರುರಾಜ್‌ ಅವರೊಂದಿಗೆ ಫೇಸ್‌ಬುಕ್‌ ಲೈವ್‌ ಕಾರ್ಯಕ್ರಮ ನಡೆಯಿತು. ಅವರ ತಂದೆ ಮಹಾಬಲ ಪೂಜಾರಿ, ಪತ್ನಿ ಸೌಜನ್ಯಾ, ಸಹೋದರರಾದ ಮನೋಹರ್‌, ಉದಯ್‌ ಉಪಸ್ಥಿತರಿದ್ದರು.

ಚಿನ್ನವೇ ಸಿಗಲಿ
“ಮುಂಬರುವ ಜಾಗತಿಕ ಕ್ರೀಡಾಕೂಟಗಳಲ್ಲಿ ಚಿನ್ನದ ಪದಕವೇ ದೊರೆಯುವಂತಾಗಲಿ. ಈ ಬಾರಿ ಅನಾರೋಗ್ಯದಿಂದಾಗಿ ಕೊನೆಯ ಕ್ಷಣದಲ್ಲಿ ಕಂಚಿನ ಪದಕಕ್ಕೆ ತೃಪ್ತಿಪಡುವಂತಾದರೂ ಮುಂದಿನ ಕ್ರೀಡಾಕೂಟಗಳಲ್ಲಿ ಚಿನ್ನದ ಪದಕವೇ ಕೊರಳನ್ನು ಅಲಂಕರಿಸುವಂತಾಗಲಿ. ಇದು ನಮ್ಮೆಲ್ಲರ ಹಾಗೂ ದೇಶದ ಕೋಟ್ಯಂತರ ಮಂದಿಯ ಹಾರೈಕೆಯೂ ಹೌದು.
– ವಿನೋದ್‌ ಕುಮಾರ್‌
ಎಂಡಿ ಮತ್ತು ಸಿಇಒ, ಎಂಎಂಎನ್‌ಎಲ್‌

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.