ಡಿಸ್ಕಸ್‌ ತಾರೆ ವಿಕಾಸ್‌ ಗೌಡ ನಿವೃತ್ತಿ


Team Udayavani, May 31, 2018, 6:00 AM IST

b-17.jpg

ಬೆಂಗಳೂರು: ಏಶ್ಯನ್‌ ಗೇಮ್ಸ್‌ ಆರಂಭಕ್ಕೆ ಇನ್ನೇನು ಕೆಲವೇ ತಿಂಗಳು ಬಾಕಿ ಇವೆ. ಈ ಬೆನ್ನಲ್ಲೇ ಖ್ಯಾತ ಆ್ಯತ್ಲೀಟ್‌, ಡಿಸ್ಕಸ್‌ ತ್ರೋವರ್‌, ಕನ್ನಡಿಗ ವಿಕಾಸ್‌ ಗೌಡ 20 ವರ್ಷಗಳ ಸುದೀರ್ಘ‌ ಕ್ರೀಡಾ ಜೀವನಕ್ಕೆ ಬುಧವಾರ ವಿದಾಯ ಘೋಷಿಸಿದ್ದಾರೆ. ಕಳೆದ ಒಂದು ವರ್ಷದಿಂದ ಡಿಸ್ಕಸ್‌ ತ್ರೋನಲ್ಲಿ ನಿರೀಕ್ಷಿತ ಯಶಸ್ಸು ಕಂಡಿಲ್ಲ. ಒಡಿಶಾದ ಭುವನೇಶ್ವರದಲ್ಲಿ 2017ರಲ್ಲಿ ನಡೆದ ಏಶ್ಯನ್‌ ಚಾಂಪಿಯನ್‌ಶಿಪ್‌ನಲ್ಲಿ ವಿಕಾಸ್‌ ಕಂಚಿನ ಪದಕ ಗೆದ್ದಿದ್ದರು. ಬಳಿಕ ಇವರಿಂದ ಪದಕ ಸಾಧನೆ ಮಾಡಲು ಸಾಧ್ಯವಾಗಿರಲಿಲ್ಲ. ಇದೆಲ್ಲದರಿಂದಾಗಿ ನಿವೃತ್ತಿಗೆ ನಿರ್ಧರಿಸಿದ್ದಾರೆ. ಮುಂದೆ ವಿಕಾಸ್‌ ಉನ್ನತ ಶಿಕ್ಷಣ ಮಾಡಿ ಉದ್ಯಮಿಯಾಗುವ ಕನಸು ಕಾಣುತ್ತಿದ್ದಾರೆ. ಸ್ವತಃ ಈ ವಿಷಯವನ್ನು ವಿಕಾಸ್‌ ಅವರು ಅಮೆರಿಕದ ಫ್ರೆಡ್ರಿಕ್‌ನಿಂದ “ಉದಯವಾಣಿ’ಗೆ ನೀಡಿದ ದೂರವಾಣಿ ಸಂದರ್ಶನದಲ್ಲಿ ತಿಳಿಸಿದ್ದಾರೆ.

ಶೇ. 100ರಷ್ಟು ಪ್ರಯತ್ನದ ಖುಷಿ
ನನ್ನ ವೃತ್ತಿ ಬದುಕಿನಲ್ಲಿ ಮಾಡಿದ ಸಾಧನೆ ಶೇ.100ರಷ್ಟು ಖುಷಿ ಕೊಟ್ಟಿಲ್ಲ. ಕಠಿನ ತರಬೇತಿ, ಹಲವಾರು ಕೂಟಗಳಲ್ಲಿ ಶೇ. 100ರಷ್ಟು ಪ್ರಯತ್ನ ಹಾಕಿದ್ದೇನೆ. ಈ ಸಂತೋಷವಷ್ಟೇ ಸಾಕು ಎಂದಿದ್ದಾರೆ.

ಒಲಿಂಪಿಕ್ಸ್‌  ಪದಕ ಗೆಲ್ಲದ ಬೇಸರ
ಏಶ್ಯನ್‌ ಗೇಮ್ಸ್‌, ಕಾಮನ್ವೆಲ್ತ್‌ ಗೇಮ್ಸ್‌ನಲ್ಲಿ ಪದಕ ಗೆದ್ದಿರುವ ನನಗೆ 4 ಒಲಿಂಪಿಕ್ಸ್‌ನಲ್ಲಿ ಭಾಗವಹಿಸಿದ್ದರೂ ಪದಕ ಗೆಲ್ಲಲು ಸಾಧ್ಯವಾಗಿಲ್ಲ ಎನ್ನುವ ನೋವಿದೆ. ನನ್ನ ಸ್ಥಾನದಲ್ಲಿ ಯಾವುದೇ ಅಥ್ಲೀಟ್‌ ಇದ್ದರೂ ಮೊದಲು ಇಂತಹ ನೋವು ಕಾಡುವುದು ಸಹಜ. ಆದರೆ ಸೋಲು-ಗೆಲುವು ಇದೆರೆಡನ್ನು ಬದುಕಿನುದ್ದಕ್ಕೂ ಸಮಾನವಾಗಿ ಸ್ವೀಕರಿಸಿಕೊಂಡು ಬಂದಿದ್ದೇನೆ. ಪದಕ ಸಿಗದಿರುವುದರ ಬಗ್ಗೆ ಯೋಚಿಸುವುದಿಲ್ಲ ಎಂದರು.

ಎಂಬಿಎ ಮಾಡಿ ಉದ್ಯೋಗ
 ಮುಂದೆ ಎಂಬಿಎ ಉನ್ನತ ಶಿಕ್ಷಣ ಮಾಡುವ ಗುರಿ ಇದೆ. ಕುಟುಂಬದವರ ಸಮ್ಮತಿಯೂ ಸಿಕ್ಕಿದೆ. ನಾರ್ಥ್ ಕ್ಯಾರೋಲಿನಾ ವಿಶ್ವ ವಿದ್ಯಾಲಯದಲ್ಲಿ ಎಂಬಿಎ ಮಾಡುತ್ತೇನೆ. ಬಳಿಕ ಉದ್ಯಮಿಯಾಗುತ್ತೇನೆ ಎಂದಿದ್ದಾರೆ. ಶಿಕ್ಷಣ, ಉದ್ಯೋಗದ ಕನಸಿನಲ್ಲಿರುವ ವಿಕಾಸ್‌ ಗೌಡ ಸದ್ಯಕ್ಕೆ ಮದುವೆಯಾಗುವುದಿಲ್ಲ? ಈ ಕುರಿತಂತೆ ಕೇಳಿದ ಪ್ರಶ್ನೆಗೆ ಅವರು ಮೌನವನ್ನೇ ಉತ್ತರವಾಗಿ ನೀಡಿದ್ದಾರೆ. ಈ ಮೂಲಕ ಸದ್ಯಕ್ಕೆ ಮದುವೆ ಇಲ್ಲ ಎನ್ನುವುದನ್ನು ಸಾರಿದ್ದಾರೆ.

ಮೈಸೂರು ಮೂಲದ ವಿಕಾಸ್‌
ವಿಕಾಸ್‌ ಮೂಲತಃ ಮೈಸೂರಿನವರು. ಪ್ರಸ್ತುತ ವಿಕಾಸ್‌ಗೆ 34 ವರ್ಷ. ತಂದೆ ಶಿವೇ ಗೌಡ. ಭಾರತ ಆ್ಯತ್ಲೆಟಿಕ್ಸ್‌ ತಂಡದ ಒಲಿಂಪಿಕ್ಸ್‌ ಕೋಚ್‌ ಆಗಿದ್ದವರು. ವಿಕಾಸ್‌ಗೆ 6 ವರ್ಷವಾಗಿದ್ದಾಗ ಇವರ ಕುಟುಂಬ ಅಮೆರಿಕಕ್ಕೆ ತೆರಳಿ ನೆಲೆಸಿದರು. ಬಳಿಕ ವಿಕಾಸ್‌ ಅಮೆರಿಕದ ಫ್ರೆಡಿಕ್‌ನಲ್ಲಿ ತರಬೇತಿ ಪಡೆದರು. ಹೀಗಿದ್ದರೂ ಇವರ ಕುಟುಂಬ ಭಾರತವನ್ನು ಮರೆಯಲಿಲ್ಲ. ಒಲಿಂಪಿಕ್ಸ್‌ ಸಹಿತ ವಿಶ್ವದ ಪ್ರಮುಖ ಕ್ರೀಡಾಕೂಟಗಳಲ್ಲಿ  ಅಮೆರಿಕವನ್ನು ಪ್ರತಿನಿಧಿಸುವ ಅವಕಾಶ ಇದ್ದರೂ ಭಾರತವನ್ನೇ ಪ್ರತಿನಿಧಿಸಿ ದೇಶಪ್ರೇಮ ಮೆರೆದಿದ್ದಾರೆ ವಿಕಾಸ್‌.

ಟಾಪ್ ನ್ಯೂಸ್

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

1-wewqwewq

IPL; ಲಕ್ನೋ ಸೂಪರ್‌ ಜೈಂಟ್ಸ್‌ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ

1-ewewewq

IPL; ಆಸ್ಟ್ರೇಲಿಯನ್‌ ಆಲ್‌ರೌಂಡರ್‌ ಮಾರ್ಷ್‌ ಔಟ್‌

Kohli IPL 2024

IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್‌ ನೀಡಿದ ಆರ್‌ಸಿಬಿ!

1-eewqewqe

IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.