ಐಪಿಎಲ್‌ 2022: ಗುಜರಾತ್‌ ಟೈಟಾನ್ಸ್‌ ವಿರುದ್ಧ ಮುಂಬೈ ಇಂಡಿಯನ್ಸ್‌ ಗೆ ರೋಚಕ ಗೆಲುವು


Team Udayavani, May 6, 2022, 11:29 PM IST

ಐಪಿಎಲ್‌ 2022: ಗುಜರಾತ್‌ ಟೈಟಾನ್ಸ್‌ ವಿರುದ್ಧ ಮುಂಬೈ ಇಂಡಿಯನ್ಸ್‌ ಗೆ ರೋಚಕ ಗೆಲುವು

ಮುಂಬೈ: ಐಪಿಎಲ್‌ ಅಂಕಪಟ್ಟಿಯ ಅಗ್ರಸ್ಥಾನಿ ಗುಜರಾತ್‌ ಟೈಟಾನ್ಸ್‌ ಮತ್ತು ಕೊನೆಯ ಸ್ಥಾನಿ ಮುಂಬೈ ಇಂಡಿಯನ್ಸ್‌ ನಡುವಣ ಶುಕ್ರವಾರ ರೋಚಕ ಸೆಣೆಸಾಟ ನಡೆಯಿತು.

ಅಂತಿಮ ಹಂತದಲ್ಲಿ ಗೆದ್ದ ಮುಂಬೈ 9ನೇ ಸೋಲು ಕಾಣುವ ದುರವಸ್ಥೆಯಿಂದ ಪಾರಾಯಿತು. ಬದಲಿಗೆ 2ನೇ ಗೆಲುವನ್ನು ಕಂಡು ತೃಪ್ತಿಪಟ್ಟಿತು. ಈ ಸೋಲಿನಿಂದ ಗುಜರಾತ್‌ಗೆàನು ಸಮಸ್ಯೆಯಿಲ್ಲ. ಅದರ ಅಗ್ರಸ್ಥಾನ ಹಾಗೆಯೇ ಉಳಿದಿದೆ. ಅದು ಒಟ್ಟು 11 ಪಂದ್ಯಗಳನ್ನಾಡಿದ್ದು 8 ಗೆಲುವು, 3 ಸೋಲಿನೊಂದಿಗೆ ಈಗಾಗಲೇ ಪ್ಲೇಆಫ್ ಸ್ಥಾನವನ್ನು ಬಹುತೇಕ ಖಚಿತಪಡಿಸಿಕೊಂಡಿದೆ.

ಮೊದಲು ಬ್ಯಾಟಿಂಗ್‌ ಮಾಡಿದ ಮುಂಬೈ ತಂಡವು ಗುಜರಾತ್‌ ತಂಡದ ಬಿಗುದಾಳಿಯನ್ನು ಮೆಟ್ಟಿನಿಂತು 20 ಓವರ್‌ಗಳಲ್ಲಿ, 6 ವಿಕೆಟಿಗೆ 177 ರನ್ನುಗಳ ಉತ್ತಮ ಮೊತ್ತ ಪೇರಿಸಿತ್ತು. ಇದನ್ನು ಬೆನ್ನತ್ತಿದ ಗುಜರಾತ್‌ 20 ಓವರ್‌ಗಳಲ್ಲಿ 5 ವಿಕೆಟ್‌ಗಳಿಗೆ 172 ರನ್‌ ಗಳಿಸಿತು. ಟೈಟಾನ್ಸ್‌ ಸೋಲಿನ ಅಂತರ 5 ರನ್‌.

ಗುಜರಾತ್‌ ಪರ ಆರಂಭಿಕರಾದ ವೃದ್ಧಿಮಾನ್‌ ಸಹಾ (55 ರನ್‌, 40 ಎಸೆತ, 5 ಬೌಂಡರಿ, 2 ಸಿಕ್ಸರ್‌), ಶುಭಮನ್‌ ಗಿಲ್‌ (52 ರನ್‌, 36 ಎಸೆತ, 6 ಬೌಂಡರಿ, 2 ಸಿಕ್ಸರ್‌) ಉತ್ತಮ ಬ್ಯಾಟಿಂಗ್‌ ಮಾಡಿದರು. ಉಳಿದ ಆಟಗಾರರು ಈ ಬಿಸಿಯನ್ನು ಕಾಯ್ದುಕೊಳ್ಳಲಿಲ್ಲ. ಪರಿಣಾಮ ಅದು ಕೊನೆಯಹಂತದವರೆಗೆ ಬಂದು ಸೋತು ಹೋಯಿತು. ಮುಂಬೈ ಪರ ಎಂ.ಅಶ್ವಿ‌ನ್‌ 29 ರನ್‌ ನೀಡಿ 2 ವಿಕೆಟ್‌ ಪಡೆದರು.

ಮುಂಬೈ ಉತ್ತಮ ಆರಂಭ: ಇನಿಂಗ್ಸ್‌ ಆರಂಭಿಸಿದ ನಾಯಕ ರೋಹಿತ್‌ ಶರ್ಮ ಮತ್ತು ಇಶಾನ್‌ ಕಿಶನ್‌ ತಂಡಕ್ಕೆ ಉತ್ತಮ ಆರಂಭ ಒದಗಿಸಿದರು. ಗುಜರಾತ್‌ ದಾಳಿಯನ್ನು ಸಮರ್ಥವಾಗಿ ನಿಭಾಯಿಸಿದ ಅವರಿಬ್ಬರು ಬಿರುಸಿನ ಆಟಕ್ಕೆ ಮುಂದಾದರು. ಶಮಿ, ಜೋಸೆಫ್, ರಶೀದ್‌ ಅವರ ನಿಖರ ದಾಳಿಯನ್ನು ದಿಟ್ಟವಾಗಿ ಎದುರಿಸಿದ ಅವರಿಬ್ಬರು ಮೊದಲ ವಿಕೆಟಿಗೆ 74 ರನ್‌ ಪೇರಿಸಿ ಬೇರ್ಪಟ್ಟರು. ರೋಹಿತ್‌ ಮೊದಲಿಗರಾಗಿ ಔಟಾಗುವ ಮೊದಲು 28 ಎಸೆತಗಳಿಂದ 43 ರನ್‌ ಗಳಿಸಿದ್ದರು. 5 ಬೌಂಡರಿ ಮತ್ತು 2 ಸಿಕ್ಸರ್‌ ಬಾರಿಸಿ ಪ್ರೇಕ್ಷಕರನ್ನು ರಂಜಿಸಿದ್ದರು. ರೋಹಿತ್‌ ಅವರನ್ನು ರಶೀದ್‌ ಎಲ್‌ಬಿ ಬಲೆಗೆ ಬೀಳಿಸಿದ್ದರು.

ಸೂರ್ಯಕುಮಾರ್‌ ಇಲ್ಲಿ ಉತ್ತಮ ಮೊತ್ತ ಪೇರಿಸಲು ವಿಫ‌ಲರಾದರು. ಅವರು 13 ರನ್‌ ಗಳಿಸಿ ಸಾಂಗ್ವಾನ್‌ಗೆ ವಿಕೆಟ್‌ ಒಪ್ಪಿಸಿದರು. ಸೂರ್ಯಕುಮಾರ್‌ ಔಟಾದ ಬಳಿಕ ತಂಡ ಆರಂಭಿಕ ಇಶಾನ್‌ ಕಿಶನ್‌ ಮತ್ತು ಅಪಾಯಕಾರಿ ಕೈರನ್‌ ಪೊಲಾರ್ಡ್‌ ಅವರನ್ನು ಕಳೆದುಕೊಂಡು ಸಂಕಷ್ಟಕ್ಕೆ ಬಿತ್ತು. ಕಿಶನ್‌ 29 ಎಸೆತಗಳಿಂದ 5 ಬೌಂಡರಿ ಮತ್ತು 1 ಸಿಕ್ಸರ್‌ ನೆರವಿನಿಂದ 45 ರನ್‌ ಗಳಿಸಿದ್ದರೆ ಪೊಲಾರ್ಡ್‌ ಮತ್ತೆ ಬ್ಯಾಟಿಂಗ್‌ನಲ್ಲಿ ವೈಫ‌ಲ್ಯ ಅನುಭವಿಸಿದರು. ಅವರು ಕೇವಲ 4 ರನ್‌ ಗಳಿಸಲಷ್ಟೇ ಶಕ್ತರಾದರು.

ಕೊನೆ ಹಂತದಲ್ಲಿ ತಿಲಕ್‌ ವರ್ಮ ಮತ್ತು ಟಿಮ್‌ ಡೇವಿಡ್‌ ಸಿಡಿದ ಕಾರಣ ತಂಡದ ಮೊತ್ತ 150ರ ಗಡಿ ದಾಟುವಂತಾಯಿತು. ತಿಲಕ್‌ ವರ್ಮ 21 ರನ್‌ ಗಳಿಸಿ ರನೌಟಾದರೆ ಡೇವಿಡ್‌ 44 ರನ್‌ ಗಳಿಸಿ ಅಜೇಯರಾಗಿ ಉಳಿದರು. 21 ಎಸೆತ ಎದುರಿಸಿದ ಅವರು 2 ಬೌಂಡರಿ ಮತ್ತು 4 ಭರ್ಜರಿ ಸಿಕ್ಸರ್‌ ಬಾರಿಸಿ ಮಿಂಚಿದರು. ಬಿಗುದಾಳಿ ಸಂಘಟಿಸಿದ ರಶೀದ್‌ ಖಾನ್‌ ತನ್ನ 4 ಓವರ್‌ಗಳ ದಾಳಿಯಲ್ಲಿ 24 ರನ್‌ ನೀಡಿ ಎರಡು ವಿಕೆಟ್‌ ಹಾರಿಸಿದರು. ಫ‌ರ್ಗ್ಯುಸನ್‌, ಜೋಸೆಫ್ ಮತ್ತು ಸಂಗವಾನ್‌ ತಲಾ ಒಂದು ವಿಕೆಟ್‌ ಪಡೆದರು.

ಸಂಕ್ಷಿಪ್ತ ಸ್ಕೋರ್‌: ಮುಂಬೈ 20 ಓವರ್‌, 177/6 (ಇಶಾನ್‌ ಕಿಶನ್‌ 45, ರೋಹಿತ್‌ ಶರ್ಮ 43, ಟಿಮ್‌ ಡೇವಿಡ್‌ 44, ರಶೀದ್‌ ಖಾನ್‌ 24ಕ್ಕೆ 2). ಗುಜರಾತ್‌ 20 ಓವರ್‌, 172/5 (ಸಹಾ 55, ಗಿಲ್‌ 52, ಎಂ.ಅಶ್ವಿ‌ನ್‌ 29ಕ್ಕೆ 2).

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.